AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆನ್ಸಾರ್ ಬೋರ್ಡ್ ಒಪ್ಪಿಗೆ ಕೊಟ್ಟಮೇಲೆ ಮುಗಿಯಿತು’; ‘ಆದಿಪುರುಷ್’ ಮೇಲಿದ್ದ ಬ್ಯಾನ್ ತೆರವು ಮಾಡಿದ ಕೋರ್ಟ್

ದೇಶದ ಸೆನ್ಸಾರ್ ಮಂಡಳಿಯು ಅಂಗೀಕರಿಸಿದ ಯಾವುದೇ ಸಿನಿಮಾದ ಪ್ರದರ್ಶನವನ್ನು ಸ್ಥಗಿತಗೊಳಿಸದಂತೆ ಅಧಿಕಾರಿಗಳಿಗೆ ಕೋರ್ಟ್​ ಸೂಚಿಸಿದೆ.  

‘ಸೆನ್ಸಾರ್ ಬೋರ್ಡ್ ಒಪ್ಪಿಗೆ ಕೊಟ್ಟಮೇಲೆ ಮುಗಿಯಿತು’; ‘ಆದಿಪುರುಷ್’ ಮೇಲಿದ್ದ ಬ್ಯಾನ್ ತೆರವು ಮಾಡಿದ ಕೋರ್ಟ್
ಆದಿಪುರುಷ್
ರಾಜೇಶ್ ದುಗ್ಗುಮನೆ
|

Updated on: Jun 23, 2023 | 11:59 AM

Share

‘ಆದಿಪುರುಷ್’ ಸಿನಿಮಾ (Adipurush Movie) ಕೇವಲ ಭಾರತದಲ್ಲಿ ಮಾತ್ರ ವಿವಾದಗಳನ್ನು ಹುಟ್ಟುಹಾಕಿಲ್ಲ. ನೆರೆಯ ನೇಪಾಳದಲ್ಲೂ ವಿವಾದ ಸೃಷ್ಟಿಸಿದೆ. ಈ ಚಿತ್ರದ ಮೇಲೆ ಬ್ಯಾನ್ ಹಾಕುವ ಕೆಲಸವನ್ನು ಕಠ್ಮಂಡು ನಗರದ ಮೇಯರ್ ಮಾಡಿದ್ದರು. ಆದರೆ, ಕೋರ್ಟ್ ಈ ನಿಷೇಧವನ್ನು ತೆಗೆದು ಹಾಕಿದೆ. ‘ಸೆನ್ಸಾರ್ ಬೋರ್ಡ್ ಒಪ್ಪಿಗೆ ನೀಡಿದ ಬಳಿಕ ಆ ಚಿತ್ರಗಳನ್ನು ಬ್ಯಾನ್ ಮಾಡಬಾರದು’ ಎಂದು ಕೊರ್ಟ್ ಆದೇಶ ನೀಡಿದೆ. ಇದರಿಂದ ‘ಆದಿಪುರುಷ್’ ಚಿತ್ರಕ್ಕೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ. ಭಾರತದಲ್ಲೂ ಈ ಚಿತ್ರವನ್ನು ಬ್ಯಾನ್ ಮಾಡುವ ಆಗ್ರಹ ಜೋರಾಗಿದೆ.

ಬ್ಯಾನ್ ಏಕೆ?

‘ಆದಿಪುರುಷ್’ ಸಿನಿಮಾದಲ್ಲಿ ಬರುವ ಅನೇಕ ಡೈಲಾಗ್​ಗಳ ಬಗ್ಗೆ ಸಾಕಷ್ಟು ಮಂದಿ ತಕರಾರು ತೆಗೆದಿದ್ದಾರೆ. ‘ಸೀತೆ ಭಾರತದ ಮಗಳು’ ಎಂಬ ಸಂಭಾಷಣೆ ಚಿತ್ರದಲ್ಲಿ ಇದೆ. ಈ ಡೈಲಾಗ್ ತೆಗೆಯುವಂತೆ ನೇಪಾಳದವರು ಒತ್ತಾಯ ಮಾಡಿದ್ದರು. ಆದರೆ, ಇದಕ್ಕೆ ಕತ್ತರಿ ಹಾಕಲು ತಂಡ ಒಪ್ಪಿಲ್ಲ. ಸದ್ಯ ಈ ಸಂಭಾಷಣೆ ಪ್ರಸಾರ ಕಾಣುತ್ತಿದೆ. ಇದು ನೇಪಾಳದವರ ಕೋಪಕ್ಕೆ ಕಾರಣ ಆಗಿದೆ.

‘ಸೀತೆ ನಮ್ಮವಳು’ ಎಂಬುದು ನೇಪಾಳದವರ ವಾದ. ಹೀಗಾಗಿ, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಅವರು ಚಿತ್ರದ ಪ್ರಸಾರ ಮೇಲೆ ನಿಷೇಧ ಹೇರಿದ್ದರು. ‘ಆದಿಪುರುಷ್’ ಚಿತ್ರದ ಸಿಟ್ಟನ್ನು ಭಾರತದ ಎಲ್ಲಾ ಸಿನಿಮಾಗಳ ಮೇಲೆ ತೋರಿಸಿದ್ದರು. ಹಿಂದಿಯ ಎಲ್ಲಾ ಚಿತ್ರಗಳನ್ನು ಅಲ್ಲಿ ಬ್ಯಾನ್ ಮಾಡು ಆದೇಶ ನೀಡಿದ್ದರು.

ಬ್ಯಾನ್ ತೆಗೆದ ಕೋರ್ಟ್​

ನೇಪಾಳದ ಹೈಕೋರ್ಟ್ ಗುರುವಾರ (ಜೂನ್ 22) ಈ ಬಗ್ಗೆ ಆದೇಶ ನೀಡಿದೆ. ಪ್ರಭಾಸ್ ಅಭಿನಯದ ‘ಆದಿಪುರುಷ್’ ಸೇರಿದಂತೆ ಹಿಂದಿ ಚಲನಚಿತ್ರಗಳ ಮೇಲಿನ ನಿಷೇಧ ರದ್ದು ಮಾಡಿ ಆದೇಶ ನೀಡಿದೆ. ದೇಶದ ಸೆನ್ಸಾರ್ ಮಂಡಳಿಯು ಅಂಗೀಕರಿಸಿದ ಯಾವುದೇ ಸಿನಿಮಾದ ಪ್ರದರ್ಶನವನ್ನು ಸ್ಥಗಿತಗೊಳಿಸದಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಇದನ್ನೂ ಓದಿ: 150 ರೂಪಾಯಿ ಟಿಕೆಟ್ ದರ ನಿಗದಿ ಮಾಡಿದರೂ ಜನ ಬರಲಿಲ್ಲ; ಉಲ್ಟಾ ಆಯ್ತು ‘ಆದಿಪುರುಷ್’ ಪ್ಲಾನ್

ಸಿಟ್ಟಾದ ಬಾಲೇಂದ್ರ ಶಾ

ಕೋರ್ಟ್ ಆದೇಶಕ್ಕೆ ಬಾಲೇಂದ್ರ ಶಾ ಸಿಟ್ಟಾಗಿದ್ದಾರೆ. ‘ಯಾವುದೇ ಶಿಕ್ಷೆಯನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ಆದರೆ ನೇಪಾಳದ ಸಾರ್ವಭೌಮತ್ವ ದೃಷ್ಟಿಯಿಂದ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಬಾಲೇಂದ್ರ ಶಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್