AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ಆದ್ರೂ ನಾಚಿಕೆ ಇರಲಿ: ಕೊರೊನಾ ಸಮಯದಲ್ಲಿ ಬೀಚ್​ಗೆ ಹೋಗಿ ಬಿಕಿನಿ ಹಾಕುವವರಿಗೆ ಸ್ಟಾರ್​ ನಟನ ಟಾಂಗ್

ಲಸಿಕೆ ಪಡೆಯುವ ಸಂದರ್ಭದಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳು ಕ್ಯಾಮೆರಾಗೆ ಪೋಸ್​ ನೀಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈಗ ಸಾಮಾನ್ಯರು ಹೊತ್ತಿನ ಊಟಕ್ಕೂ ಒದ್ದಾಡುತ್ತಿದ್ದಾರೆ.

ಸ್ವಲ್ಪ ಆದ್ರೂ ನಾಚಿಕೆ ಇರಲಿ: ಕೊರೊನಾ ಸಮಯದಲ್ಲಿ ಬೀಚ್​ಗೆ ಹೋಗಿ ಬಿಕಿನಿ ಹಾಕುವವರಿಗೆ ಸ್ಟಾರ್​ ನಟನ ಟಾಂಗ್
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Apr 25, 2021 | 6:16 PM

Share

ದೇಶದೆಲ್ಲೆಡೆ ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಅಕ್ಷಯ್​ ಕುಮಾರ್​ ಸೇರಿದಂತೆ ಸಾಕಷ್ಟು ಸ್ಟಾರ್​ಗಳು ಕೊರೊನಾ ವಿರುದ್ಧ ಹೋರಾಡೋಕೆ ತಮ್ಮನ್ನು ತಾವು ಮುಡಿಪಿಟ್ಟಿದ್ದಾರೆ. ಇಂಥ ಕಷ್ಟದ ಸ್ಥಿತಿಯಲ್ಲಿ ಸೋನು ಸೂದ್​ ನೇರವಾಗಿ ಅಖಾಡಕ್ಕೆ ಇಳಿದು ಸಹಾಯ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ಆರ್ಥಿಕವಾಗಿ ಸಹಾಯ ಮಾಡುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಈ ಮಧ್ಯೆ ಕೆಲವರು ಮಾಲ್ಡೀವ್ಸ್​ಗೆ ತೆರಳಿ ವೆಕೇಷನ್​ ಫೋಟೋ ಹಾಕುತ್ತಿದ್ದಾರೆ. ಇದಕ್ಕೆ ಬಾಲಿವುಡ್​ ಹಿರಿಯ ನಟ ನವಾಜುದ್ದೀನ್​ ಸಿದ್ಧಿಕಿ ಸಿಟ್ಟಾಗಿದ್ದು, ಸ್ವಲ್ಪವಾದರೂ ನಾಚಿಕೆ ಇರಲಿ ಎಂದಿದ್ದಾರೆ.

ದೇಶದಲ್ಲಿ ಪ್ರತಿ ನಿತ್ಯ ಲಕ್ಷ ಲಕ್ಷ ಕೊರೊನಾ ಕೇಸ್​ಗಳು ಬರುತ್ತಿವೆ. ಇದನ್ನು ನಿಯಂತ್ರಣ ಮಾಡೋಕೆ ಸರ್ಕಾರಗಳು ಒದ್ದಾಡುತ್ತಿವೆ. ಆಸ್ಪತ್ರೆಗಳಲ್ಲಿ ಬೆಡ್​ಗಳು ಸಿಗುತ್ತಿಲ್ಲ ಎಂಬುದು ಒಂದು ಕಡೆಯಾದರೆ, ಸಾವಿನ ಸಂಖ್ಯೆ ಏರುತ್ತಿರುವುದು ಮತ್ತೊಂದು ಕಡೆ. ಈ ಮಧ್ಯೆ ಕೆಲವರು ವಿದೇಶಕ್ಕೆ ಹಾರಿದ್ದಾರೆ. ಅಲ್ಲಿ ಹಾಯಾಗಿ ದಿನ ಕಳೆಯುತ್ತಿದ್ದಾರೆ. ಇದು ನವಾಜುದ್ದೀನ್​ ಸಿದ್ಧಿಕಿಗೆ ಬೇಸರ ತರಿಸಿದೆ.

ಲಸಿಕೆ ಪಡೆಯುವ ಸಂದರ್ಭದಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳು ಕ್ಯಾಮೆರಾಗೆ ಪೋಸ್​ ನೀಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈಗ ಸಾಮಾನ್ಯರು ಹೊತ್ತಿನ ಊಟಕ್ಕೂ ಒದ್ದಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಸೆಲೆಬ್ರಿಟಿಗಳು ವಿದೇಶಕ್ಕೆ ತೆರಳಿ ಹಣವನ್ನು ದುಂದುವೆಚ್ಛ ಮಾಡುತ್ತಿದ್ದಾರೆ. ಸ್ವಲ್ಪವಾದರೂ ನಾಚಿಕೆ ಇಟ್ಟುಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.

ದಯವಿಟ್ಟು ಒಳ್ಳೆಯ ಮನಸ್ಸು ಇಟ್ಟುಕೊಳ್ಳಿ. ಇಡೀ ದೇಶ ಕೊರೊನಾಗೆ ತತ್ತರಿಸಿದೆ. ಕೊರೊನಾದಿಂದ ಬಳಲುತ್ತಿರುವವರಿಗೆ ಟಾಂಟ್ ಕೊಡಬೇಡಿ ಎಂದು ಸಿದ್ಧಿಕಿ ಕೋರಿದ್ದಾರೆ. ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಮಾಲ್ಡೀವ್ಸ್​ಗೆ ತೆರಳಿ ಫೋಟೋ ಹಂಚಿಕೊಂಡಿದ್ದರು. ಇಂಥ ಕಷ್ಟ ಸಮಯದಲ್ಲಿ ಅವರು ದೇಶ ಬಿಟ್ಟು ಹೋದ ಬಗ್ಗೆ ಅಭಿಮನಿಗಳು ಬೇಸರ ಹೊರ ಹಾಕಿದ್ದರು.

ಇದನ್ನೂ ಓದಿ: ಕೊರೊನಾದಿಂದ ಗುಣಮುಖರಾಗುತ್ತಿದ್ದಂತೆಯೇ ಮಾಲ್ಡೀವ್ಸ್​ಗೆ ಹಾರಿದ ರಣಬೀರ್ ಮತ್ತು ಆಲಿಯಾ; ಸಾಮಾಜಿಕ ಜಾಲತಾಣದಲ್ಲಿ ಫುಲ್​ ಟ್ರೋಲ್

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ