AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

khushbu sundar: ‘ದೇಹದಲ್ಲಿ ಕೊಲ್ಲುವಂಥ ನೋವು’; ಆಸ್ಪತ್ರೆ ಸೇರಿದ ನಟಿ ಖುಷ್ಬೂ ಸುಂದರ್

Khushbu Sundar Health: ಆಸ್ಪತ್ರೆಯ ಕೆಲ ಫೋಟೋಗಳನ್ನು ಖುಷ್ಬೂ ಸೋಶಿಯಲ್​ ಮೀಡಿಯಾದಲ್ಲಿ ಅಪ್​​ಲೋಡ್ ಮಾಡಿದ್ದಾರೆ. ಜೊತೆಗೆ ದೇಹದಲ್ಲಿ ತೀವ್ರ ನೋವು ಹಾಗೂ ದೌರ್ಬಲ್ಯ ಕಾಡುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

khushbu sundar: ‘ದೇಹದಲ್ಲಿ ಕೊಲ್ಲುವಂಥ ನೋವು’; ಆಸ್ಪತ್ರೆ ಸೇರಿದ ನಟಿ ಖುಷ್ಬೂ ಸುಂದರ್
ಖುಷ್ಬೂ
ರಾಜೇಶ್ ದುಗ್ಗುಮನೆ
|

Updated on: Apr 08, 2023 | 7:11 AM

Share

ಬಿಜೆಪಿ ನಾಯಕಿ, ಹಿರಿಯ ನಟಿ ಖುಷ್ಬೂ ಸುಂದರ್ (khushbu sundar) ಅವರು ಇತ್ತೀಚೆಗಷ್ಟೇ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಆಗಿ ಅವರು ನೇಮಕಗೊಂಡಿದ್ದರು. ಈ ಬೆನ್ನಲ್ಲೇ ಅಭಿಮಾನಿಗಳಿಗೆ ಆತಂಕದ ಸುದ್ದಿ ಸಿಕ್ಕಿದೆ. ಖುಷ್ಬೂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ಜ್ವರದಿಂದ ಆಸ್ಪತ್ರೆ ಸೇರಿರುವುದಾಗಿ ಖುಷ್ಬೂ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಅನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಆಸ್ಪತ್ರೆಯ ಕೆಲ ಫೋಟೋಗಳನ್ನು ಖುಷ್ಬೂ ಸೋಶಿಯಲ್​ ಮೀಡಿಯಾದಲ್ಲಿ ಅಪ್​​ಲೋಡ್ ಮಾಡಿದ್ದಾರೆ. ಜೊತೆಗೆ ದೇಹದಲ್ಲಿ ತೀವ್ರ ನೋವು ಹಾಗೂ ದೌರ್ಬಲ್ಯ ಕಾಡುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.  ‘ನಾನು ಹೇಳಿದಂತೆ, ಜ್ವರ ಕೆಟ್ಟದಾಗಿದೆ. ಪರಿಣಾಮ ತುಂಬಾನೇ ಗಂಭೀರವಾಗಿದೆ. ತೀವ್ರ ಜ್ವರ ಹಾಗೂ ಸಾಯಿಸುವಂತಹ ದೇಹದ ನೋವಿನಿಂದ ನಾನು ಆಸ್ಪತ್ರೆ ಸೇರಿದ್ದೇನೆ. ಒಳ್ಳೆಯ ಚಿಕಿತ್ಸೆ ಸಿಗುತ್ತಿದೆ’ ಎಂದಿದ್ದಾರೆ ಖುಷ್ಬೂ.

‘ಅನಾರೋಗ್ಯದ ಚಿಹ್ನೆ ಕಾಣಿಸಿದಾಗ ಅದನ್ನು ನಿರ್ಲಕ್ಷಿಸಬೇಡಿ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಇದಕ್ಕೆ ಇನ್ನೂ ಬಹಳ ಸಮಯ ಬೇಕಿದೆ’ ಎಂದು ಖುಷ್ಬೂ ಬರೆದುಕೊಂಡಿದ್ದಾರೆ. ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚುತ್ತಿದೆ. ಖುಷ್ಬೂಗೆ ಅಂಟಿರುವುದು ಕೊರೊನಾ ಸೋಂಕೆ ಎಂಬ ಪ್ರಶ್ನೆಯೂ ಮೂಡಿದೆ. ನಟಿಯ ಕಡೆಯಿಂದ ಇದಕ್ಕೆ ಸ್ಪಷ್ಟನೆ ಸಿಕ್ಕಿಲ್ಲ. ಖುಷ್ಬೂ ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಶುಭ ಹಾರೈಸುತ್ತಿದ್ದಾರೆ. ‘ಬೇಗ ಸುಧಾರಿಸಿಕೊಳ್ಳಿ. ಮತ್ತೆ ಮೊದಲಿನಂತೆ ಓಡಾಡುವಂತಾಗಲಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ರಾಶಿ ಖನ್ನಾ ಕೂಡ ನಟಿಗೆ ವಿಶ್ ಮಾಡಿದ್ದಾರೆ.

ಇದನ್ನೂ ಓದಿ: Khushbu Sundar: ಮೋದಿ ಅಂದರೆ ಭ್ರಷ್ಟಾಚಾರ ಎಂದು ಟ್ವೀಟ್ ಮಾಡಿದ್ದ ಖುಷ್ಬೂ ಸುಂದರ್; ಈ ಬಗ್ಗೆ ಏನಂತೀರಿ ಎಂದು ಕೇಳಿದ ಕಾಂಗ್ರೆಸ್

ಖುಷ್ಬೂ ಸದ್ಯ ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ದಳಪತಿ ವಿಜಯ್ ಅಭಿನಯದ ‘ವಾರಿಸು’ ಚಿತ್ರದಲ್ಲಿ ಅವರು ನಟಿಸಿದ್ದಾರೆ ಎನ್ನಲಾಗಿತ್ತು. ವಿಜಯ್, ರಶ್ಮಿಕಾ ಮಂದಣ್ಣ ಹಾಗೂ ಖುಷ್ಬೂ ಅವರ ಫೋಟೋ ವೈರಲ್ ಆಗಿತ್ತು. ಆದರೆ, ಸಿನಿಮಾದಲ್ಲಿ ಅವರು ಎಲ್ಲಿಯೂ ಕಾಣಿಸಿಕೊಳ್ಳಲೇ ಇಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಸಿನಿಮಾದ ಅವಧಿ ದೀರ್ಘ ಆದ ಕಾರಣ ಅವರ ಪಾತ್ರಕ್ಕೆ ಕತ್ತರಿ ಹಾಕಲಾಗಿದೆ ಅನ್ನೋದು ಬಳಿಕ ಗೊತ್ತಾಯಿತು.  ಖುಷ್ಬೂ ಅವರು ಕನ್ನಡ ಮಂದಿಗೂ ಪರಿಚಿತ. ಕನ್ನಡದಲ್ಲೂ ಅವರು ಸಿನಿಮಾ ಮಾಡಿ ಜನಪ್ರಿಯತೆ ಪಡೆದಿದ್ದಾರೆ. ಅವರಿಗೆ ಇಲ್ಲಿಯೂ ದೊಡ್ಡ ಅಭಿಮಾನಿ ಬಳಗ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ