Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯರು ಈ ಸಿನಿಮಾ ನೋಡಬೇಡಿ: ‘ದಿಯಾ’ ನಟಿಯ ಹೊಸ ಚಿತ್ರ ‘ಪಿಂಡಂ’ ಬಗ್ಗೆ ಎಚ್ಚರಿಕೆ

ಇತ್ತೀಚೆಗೆ ಸೆನ್ಸಾರ್​ ಪ್ರಕ್ರಿಯೆ ಪೂರ್ಣಗೊಳಿಸಿರುವ ‘ಪಿಂಡಂ’ ಸಿನಿಮಾ ‘ಎ’ ಪ್ರಮಾಣ ಪತ್ರ ಪಡೆದಿದೆ. ಭಯಾನಕ ದೃಶ್ಯಗಳು ಈ ಸಿನಿಮಾದಲ್ಲಿ ಇವೆ ಎಂಬ ಕಾರಣಕ್ಕೆ ‘ಎ’ ಪ್ರಮಾಣ ಪತ್ರ ಸಿಕ್ಕಿದೆ. ಅಲ್ಲದೇ, ಇದು ಗರ್ಭಿಣಿಯರಿಗೆ ಸೂಕ್ತವಲ್ಲ ಎಂದು ಕೂಡ ಚಿತ್ರತಂಡದವರು ಸೋಶಿಯಲ್​ ಮೀಡಿಯಾದಲ್ಲಿ ಮೊದಲೇ ಎಚ್ಚರಿಕೆ ನೀಡಿದ್ದಾರೆ.

ಗರ್ಭಿಣಿಯರು ಈ ಸಿನಿಮಾ ನೋಡಬೇಡಿ: ‘ದಿಯಾ’ ನಟಿಯ ಹೊಸ ಚಿತ್ರ ‘ಪಿಂಡಂ’ ಬಗ್ಗೆ ಎಚ್ಚರಿಕೆ
‘ಪಿಂಡಂ’ ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on:Dec 13, 2023 | 12:45 PM

ಕನ್ನಡದ ನಟಿ ಖುಷಿ ರವಿ (Kushee Ravi) ಅವರು ‘ದಿಯಾ’ ಸಿನಿಮಾದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಪರಭಾಷೆಯಿಂದಲೂ ಅವಕಾಶಗಳು ಬರಲು ಆರಂಭಿಸಿದರು. ತೆಲುಗಿನಲ್ಲಿ ಅವರು ಅಭಿನಯಿಸಿದ್ದಾರೆ. ಖುಷಿ ರವಿ ನಟನೆಯ ಟಾಲಿವುಡ್​ ಸಿನಿಮಾ ‘ಪಿಂಡಂ’ (Pindam Movie) ಈ ವಾರ ಬಿಡುಗಡೆ ಆಗಲಿದೆ. ಡಿಸೆಂಬರ್​​ 15ರಂದು ಈ ಚಿತ್ರ ತೆರೆಕಾಣಲಿದೆ. ಇದು ಹಾರರ್​ ಸಿನಿಮಾ ಆಗಿದ್ದು, ಬಿಡುಗಡೆಗೂ ಮುನ್ನವೇ ಚಿತ್ರತಂಡದವರು ಒಂದು ಎಚ್ಚರಿಕೆ ನೀಡಿದ್ದಾರೆ. ಗರ್ಭಿಣಿಯರು (Pregnant ladies) ಈ ಸಿನಿಮಾ ನೋಡಬಾರದು ಎಂದು ವಿಶೇಷ ಸೂಚನೆ ನೀಡಲಾಗಿದೆ.

‘ಪಿಂಡಂ’ ಸಿನಿಮಾದಲ್ಲಿ ಶ್ರೀರಾಮ್​, ಖುಷಿ ರವಿ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಮೂಲಕ ಈ ಸಿನಿಮಾ ನಿರೀಕ್ಷೆ ಮೂಡಿಸಿದೆ. ಹಾರರ್​ ಸಿನಿಮಾವನ್ನು ಇಷ್ಟಪಡುವ ಪ್ರೇಕ್ಷಕರಿಗೆ ‘ಪಿಂಡಂ’ ಭರ್ಜರಿ ಟ್ರೀಟ್​ ನೀಡಲಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಆ ಕಾರಣದಿಂದಲೂ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಬಾಕ್ಸ್​ ಆಫೀಸ್​ನಲ್ಲಿ ಹೇಗೆ ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದು ನೋಡಬೇಕು.

ಇತ್ತೀಚೆಗೆ ಸೆನ್ಸಾರ್​ ಪ್ರಕ್ರಿಯೆ ಮುಗಿಸಿಕೊಂಡಿರುವ ‘ಪಿಂಡಂ’ ಸಿನಿಮಾ ‘ಎ’ ಪ್ರಮಾಣ ಪತ್ರ ಪಡೆದಿದೆ. ಭಯಾನಕ ದೃಶ್ಯಗಳು ಈ ಸಿನಿಮಾದಲ್ಲಿ ಇವೆ ಎಂಬ ಕಾರಣಕ್ಕೆ ‘ಎ’ ಪ್ರಮಾಣ ಪತ್ರ ಸಿಕ್ಕಿದೆ. ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ಸೆನ್ಸಾರ್​ ಸದಸ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ, ಇದು ಗರ್ಭಿಣಿಯರಿಗೆ ಸೂಕ್ತವಲ್ಲ ಎಂದು ಕೂಡ ಚಿತ್ರತಂಡದವರು ಸೋಶಿಯಲ್​ ಮೀಡಿಯಾದಲ್ಲಿ ಮೊದಲೇ ಎಚ್ಚರಿಕೆ ನೀಡಿದ್ದಾರೆ. ಈ ಕ್ಯಾಪ್ಷನ್​ ನೋಡಿದ ಬಳಿಕ ಸಿನಿಪ್ರಿಯರ ಕೌತುಕ ಇನ್ನಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಿಮಗೆ ಭೂತ ಕಂಡಿತ್ತಾ? ಈ ಸೆಲೆಬ್ರಿಟಿಗಳಿಗೆ ಆಗಿತ್ತು ಹಾರರ್​ ಅನುಭವ

‘ಅತಿ ಹೆಚ್ಚು ಹೆದರಿಸುವ ಸಿನಿಮಾ’ ಎಂಬ ಟ್ಯಾಗ್​ ಲೈನ್​ ಕೂಡ ‘ಪಿಂಡಂ’ ಸಿನಿಮಾದ ಪೋಸ್ಟರ್​ನಲ್ಲಿ ಹೈಲೈಟ್​ ಆಗಿದೆ. ಸಾಯಿಕಿರಣ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಿವಿಧ ಕಾಲಘಟದಲ್ಲಿ ಈ ಸಿನಿಮಾದ ಕಥೆ ಸಾಗಲಿದೆ ಎಂದು ಹೇಳಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:41 pm, Wed, 13 December 23

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?