AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖುಷಿ’ ಪ್ರಚಾರಕ್ಕೆ ಚಕ್ಕರ್​ ಹಾಕಿ, ಹಾಲಿವುಡ್​ ಚಿತ್ರಕ್ಕೆ ಆಡಿಷನ್​ ನೀಡುತ್ತಿದ್ದಾರಾ ಸಮಂತಾ?

ಸಮಂತಾ ರುತ್​ ಪ್ರಭು ಅವರು ಚಿಕಿತ್ಸೆ ಪಡೆಯುವ ಸಲುವಾಗಿ ಅಮೆರಿಕಕ್ಕೆ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಅಲ್ಲಿ ಬಹಳ ಸಂಭ್ರಮದಿಂದ ಅನೇಕ ಸ್ಥಳಗಳಿಗೆ ತೆರಳಿದ್ದಾರೆ. ಹಾಲಿವುಡ್​ನ ಕೆಲವು ಪ್ರಮುಖ ನಿರ್ಮಾಣ ಸಂಸ್ಥೆಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ಅಲ್ಲಿ ಆಡಿಷನ್​ ಬಗ್ಗೆ ಮಾತುಕಥೆ ನಡೆದಿದೆ ಎಂದು ಹೇಳಲಾಗುತ್ತಿದೆ.

‘ಖುಷಿ’ ಪ್ರಚಾರಕ್ಕೆ ಚಕ್ಕರ್​ ಹಾಕಿ, ಹಾಲಿವುಡ್​ ಚಿತ್ರಕ್ಕೆ ಆಡಿಷನ್​ ನೀಡುತ್ತಿದ್ದಾರಾ ಸಮಂತಾ?
ಸಮಂತಾ ರುತ್​ ಪ್ರಭು
ಮದನ್​ ಕುಮಾರ್​
|

Updated on: Aug 30, 2023 | 11:09 AM

Share

ಖ್ಯಾತ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಪ್ರತಿ ದಿನವೂ ಒಂದಿಲ್ಲೊಂದ ಕಾರಣಕ್ಕೆ ಅಭಿಮಾನಿಗಳ ವಲಯದಲ್ಲಿ ಚರ್ಚೆಗೆ ಒಳಗಾಗುತ್ತಾರೆ. ಅವರು ನಟಿಸಿರುವ ‘ಖುಷಿ’ ಸಿನಿಮಾ (Kushi Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಸೆಪ್ಟೆಂಬರ್​ 1ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ. ವಿಜಯ್​ ದೇವರಕೊಂಡ (Vijay Deverakonda) ಮತ್ತು ಸಮಂತಾ ರುತ್ ಪ್ರಭು ಅವರು ಜೋಡಿಯಾಗಿ ನಟಿಸಿರುವ ಈ ಚಿತ್ರಕ್ಕೆ ಪ್ರಚಾರದ ಅಗತ್ಯ ತುಂಬ ಇದೆ. ಆದರೂ ಕೂಡ ಸಮಂತಾ ಅವರು ಸರಿಯಾಗಿ ಪ್ರಚಾರದಲ್ಲಿ ಭಾಗಿ ಆಗುತ್ತಿಲ್ಲ. ಅವರು ಈಗ ಅಮೆರಿಕಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಹಾಲಿವುಡ್​ ಸಿನಿಮಾಗಳಿಗೆ ಆಡಿಷನ್​ ನೀಡುತ್ತಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಸಮಂತಾ ರುತ್​ ಪ್ರಭು ಅವರು ಚಿಕಿತ್ಸೆ ಪಡೆಯುವ ಸಲುವಾಗಿ ಅಮೆರಿಕಕ್ಕೆ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಅಲ್ಲಿ ಬಹಳ ಸಂಭ್ರಮದಿಂದ ಅನೇಕ ಸ್ಥಳಗಳಿಗೆ ತೆರಳಿದ್ದಾರೆ. ಹಾಲಿವುಡ್​ನ ಕೆಲವು ಪ್ರಮುಖ ನಿರ್ಮಾಣ ಸಂಸ್ಥೆಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ಅಲ್ಲಿ ಆಡಿಷನ್​ ಬಗ್ಗೆ ಮಾತುಕಥೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಸಮಂತಾ ಅವರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ಸಮಂತಾಗೆ ವಿಡಿಯೋ ಕಾಲ್ ಮಾಡಿದ ವಿಜಯ್ ದೇವರಕೊಂಡ, ಹೇಳಿದ ಜೋಕ್ ಯಾವುದು?

ವಿಜಯ್​ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಆ ಚಿತ್ರದ ಸೋಲಿನಿಂದ ಅವರಿಗೆ ಹಿನ್ನಡೆ ಆಯಿತು. ಈಗ ಅವರು ‘ಖುಷಿ’ ಸಿನಿಮಾದ ಮೂಲಕ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಆದರೆ ಪ್ರಚಾರ ಕಾರ್ಯದಲ್ಲಿ ಅವರಿಗೆ ಸಮಂತಾ ಕಡೆಯಿಂದ ಪೂರ್ತಿ ಸಹಕಾರ ಸಿಕ್ಕಿಲ್ಲ. ‘ಖುಷಿ’ ಚಿತ್ರದ ಮ್ಯೂಸಿಕಲ್​ ನೈಟ್​ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಬಿಟ್ಟರೆ ಬೇರೆ ಯಾವುದೇ ಪ್ರಚಾರ ಕಾರ್ಯಕ್ಕೂ ಸಮಂತಾ ಬಂದಿಲ್ಲ. ಹಾಗಾಗಿ ಈ ಸಿನಿಮಾದ ಪ್ರಚಾರದ ಪೂರ್ತಿ ಹೊಣೆಯನ್ನು ವಿಜಯ್​ ದೇವರಕೊಂಡ ಅವರು ತಮ್ಮ ಹೆಗಲ ಮೇಲೆ ಹಾಕಿಕೊಂಡಿದ್ದಾರೆ.

ಸಮಂತಾ ರುತ್​ ಪ್ರಭು ಸೋಶಿಯಲ್​ ಮೀಡಿಯಾ ಪೋಸ್ಟ್​:

ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ‘ಖುಷಿ’ ಸಿನಿಮಾ ಮೂಡಿಬಂದಿದೆ. ಸೆಪ್ಟೆಂಬರ್​ 1ರಂದು ಈ ಎಲ್ಲ ಭಾಷೆಯಲ್ಲೂ ಚಿತ್ರ ರಿಲೀಸ್​ ಆಗಲಿದೆ. ಅದೇ ದಿನ ಕನ್ನಡದಲ್ಲಿ ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಿಡುಗಡೆ ಆಗುತ್ತಿದೆ. ಹಾಗಾಗಿ ಕರುನಾಡಿನಲ್ಲಿ ಈ ಸಿನಿಮಾಗಳ ನಡುವೆ ಪೈಪೋಟಿ ಏರ್ಪಡಲಿದೆ. ‘ಖುಷಿ’ ಸಿನಿಮಾಗೆ ಶಿವ ನಿರ್ವಾಣ ಅವರು ನಿರ್ದೇಶನ ಮಾಡಿದ್ದಾರೆ. ‘ಹೃದಯಂ’ ಖ್ಯಾತಿಯ ಹೇಷಂ ಅಬ್ದುಲ್​ ವಹಾಬ್​ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಹಾಡುಗಳು ಗಮನ ಸೆಳೆಯುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ