‘ಖುಷಿ’ ಪ್ರಚಾರಕ್ಕೆ ಚಕ್ಕರ್​ ಹಾಕಿ, ಹಾಲಿವುಡ್​ ಚಿತ್ರಕ್ಕೆ ಆಡಿಷನ್​ ನೀಡುತ್ತಿದ್ದಾರಾ ಸಮಂತಾ?

ಸಮಂತಾ ರುತ್​ ಪ್ರಭು ಅವರು ಚಿಕಿತ್ಸೆ ಪಡೆಯುವ ಸಲುವಾಗಿ ಅಮೆರಿಕಕ್ಕೆ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಅಲ್ಲಿ ಬಹಳ ಸಂಭ್ರಮದಿಂದ ಅನೇಕ ಸ್ಥಳಗಳಿಗೆ ತೆರಳಿದ್ದಾರೆ. ಹಾಲಿವುಡ್​ನ ಕೆಲವು ಪ್ರಮುಖ ನಿರ್ಮಾಣ ಸಂಸ್ಥೆಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ಅಲ್ಲಿ ಆಡಿಷನ್​ ಬಗ್ಗೆ ಮಾತುಕಥೆ ನಡೆದಿದೆ ಎಂದು ಹೇಳಲಾಗುತ್ತಿದೆ.

‘ಖುಷಿ’ ಪ್ರಚಾರಕ್ಕೆ ಚಕ್ಕರ್​ ಹಾಕಿ, ಹಾಲಿವುಡ್​ ಚಿತ್ರಕ್ಕೆ ಆಡಿಷನ್​ ನೀಡುತ್ತಿದ್ದಾರಾ ಸಮಂತಾ?
ಸಮಂತಾ ರುತ್​ ಪ್ರಭು

Updated on: Aug 30, 2023 | 11:09 AM

ಖ್ಯಾತ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಪ್ರತಿ ದಿನವೂ ಒಂದಿಲ್ಲೊಂದ ಕಾರಣಕ್ಕೆ ಅಭಿಮಾನಿಗಳ ವಲಯದಲ್ಲಿ ಚರ್ಚೆಗೆ ಒಳಗಾಗುತ್ತಾರೆ. ಅವರು ನಟಿಸಿರುವ ‘ಖುಷಿ’ ಸಿನಿಮಾ (Kushi Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಸೆಪ್ಟೆಂಬರ್​ 1ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ. ವಿಜಯ್​ ದೇವರಕೊಂಡ (Vijay Deverakonda) ಮತ್ತು ಸಮಂತಾ ರುತ್ ಪ್ರಭು ಅವರು ಜೋಡಿಯಾಗಿ ನಟಿಸಿರುವ ಈ ಚಿತ್ರಕ್ಕೆ ಪ್ರಚಾರದ ಅಗತ್ಯ ತುಂಬ ಇದೆ. ಆದರೂ ಕೂಡ ಸಮಂತಾ ಅವರು ಸರಿಯಾಗಿ ಪ್ರಚಾರದಲ್ಲಿ ಭಾಗಿ ಆಗುತ್ತಿಲ್ಲ. ಅವರು ಈಗ ಅಮೆರಿಕಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಹಾಲಿವುಡ್​ ಸಿನಿಮಾಗಳಿಗೆ ಆಡಿಷನ್​ ನೀಡುತ್ತಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಸಮಂತಾ ರುತ್​ ಪ್ರಭು ಅವರು ಚಿಕಿತ್ಸೆ ಪಡೆಯುವ ಸಲುವಾಗಿ ಅಮೆರಿಕಕ್ಕೆ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಅಲ್ಲಿ ಬಹಳ ಸಂಭ್ರಮದಿಂದ ಅನೇಕ ಸ್ಥಳಗಳಿಗೆ ತೆರಳಿದ್ದಾರೆ. ಹಾಲಿವುಡ್​ನ ಕೆಲವು ಪ್ರಮುಖ ನಿರ್ಮಾಣ ಸಂಸ್ಥೆಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ಅಲ್ಲಿ ಆಡಿಷನ್​ ಬಗ್ಗೆ ಮಾತುಕಥೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಸಮಂತಾ ಅವರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ಸಮಂತಾಗೆ ವಿಡಿಯೋ ಕಾಲ್ ಮಾಡಿದ ವಿಜಯ್ ದೇವರಕೊಂಡ, ಹೇಳಿದ ಜೋಕ್ ಯಾವುದು?

ವಿಜಯ್​ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಆ ಚಿತ್ರದ ಸೋಲಿನಿಂದ ಅವರಿಗೆ ಹಿನ್ನಡೆ ಆಯಿತು. ಈಗ ಅವರು ‘ಖುಷಿ’ ಸಿನಿಮಾದ ಮೂಲಕ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಆದರೆ ಪ್ರಚಾರ ಕಾರ್ಯದಲ್ಲಿ ಅವರಿಗೆ ಸಮಂತಾ ಕಡೆಯಿಂದ ಪೂರ್ತಿ ಸಹಕಾರ ಸಿಕ್ಕಿಲ್ಲ. ‘ಖುಷಿ’ ಚಿತ್ರದ ಮ್ಯೂಸಿಕಲ್​ ನೈಟ್​ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಬಿಟ್ಟರೆ ಬೇರೆ ಯಾವುದೇ ಪ್ರಚಾರ ಕಾರ್ಯಕ್ಕೂ ಸಮಂತಾ ಬಂದಿಲ್ಲ. ಹಾಗಾಗಿ ಈ ಸಿನಿಮಾದ ಪ್ರಚಾರದ ಪೂರ್ತಿ ಹೊಣೆಯನ್ನು ವಿಜಯ್​ ದೇವರಕೊಂಡ ಅವರು ತಮ್ಮ ಹೆಗಲ ಮೇಲೆ ಹಾಕಿಕೊಂಡಿದ್ದಾರೆ.

ಸಮಂತಾ ರುತ್​ ಪ್ರಭು ಸೋಶಿಯಲ್​ ಮೀಡಿಯಾ ಪೋಸ್ಟ್​:

ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ‘ಖುಷಿ’ ಸಿನಿಮಾ ಮೂಡಿಬಂದಿದೆ. ಸೆಪ್ಟೆಂಬರ್​ 1ರಂದು ಈ ಎಲ್ಲ ಭಾಷೆಯಲ್ಲೂ ಚಿತ್ರ ರಿಲೀಸ್​ ಆಗಲಿದೆ. ಅದೇ ದಿನ ಕನ್ನಡದಲ್ಲಿ ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಿಡುಗಡೆ ಆಗುತ್ತಿದೆ. ಹಾಗಾಗಿ ಕರುನಾಡಿನಲ್ಲಿ ಈ ಸಿನಿಮಾಗಳ ನಡುವೆ ಪೈಪೋಟಿ ಏರ್ಪಡಲಿದೆ. ‘ಖುಷಿ’ ಸಿನಿಮಾಗೆ ಶಿವ ನಿರ್ವಾಣ ಅವರು ನಿರ್ದೇಶನ ಮಾಡಿದ್ದಾರೆ. ‘ಹೃದಯಂ’ ಖ್ಯಾತಿಯ ಹೇಷಂ ಅಬ್ದುಲ್​ ವಹಾಬ್​ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಹಾಡುಗಳು ಗಮನ ಸೆಳೆಯುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us