AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ದಿನದಲ್ಲಿ 51 ಕೋಟಿ ರೂಪಾಯಿ ಬಾಚಿಕೊಂಡ ‘ಖುಷಿ’; ವಿಜಯ್​ ದೇವರಕೊಂಡ ಮುಖದಲ್ಲಿ ಗೆಲುವಿನ ನಗು

ನಿರೀಕ್ಷೆಯಂತೆಯೇ ‘ಖುಷಿ’ ಚಿತ್ರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಎರಡು ದಿನ ಉತ್ತಮವಾಗಿ ಪ್ರದರ್ಶನ ಕಂಡಿರುವ ಈ ಸಿನಿಮಾ ವಿಶ್ವಾದ್ಯಂತ 51 ಕೋಟಿ ರೂಪಾಯಿ ಗಳಿಸಿದೆ. ಮುಂದಿನ ದಿನಗಳಲ್ಲಿ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ಕಾದು ನೋಡಬೇಕು. ಸೆ. 4ರಂದು ಸಂಜೆ 6 ಗಂಟೆಗೆ ಈ ಸಿನಿಮಾದ ಸಕ್ಸಸ್​ ಮೀಟ್​ ನಡೆಯಲಿದೆ.

2 ದಿನದಲ್ಲಿ 51 ಕೋಟಿ ರೂಪಾಯಿ ಬಾಚಿಕೊಂಡ ‘ಖುಷಿ’; ವಿಜಯ್​ ದೇವರಕೊಂಡ ಮುಖದಲ್ಲಿ ಗೆಲುವಿನ ನಗು
ವಿಜಯ್​ ದೇವರಕೊಂಡ, ಸಮಂತಾ ರುತ್​ ಪ್ರಭು
ಮದನ್​ ಕುಮಾರ್​
|

Updated on: Sep 03, 2023 | 2:07 PM

Share

ನಟ ವಿಜಯ್​ ದೇವರಕೊಂಡ (Vijay Devarakonda) ಅವರು ‘ಖುಷಿ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಗುತ್ತಿದೆ. ಸೆಪ್ಟೆಂಬರ್​ 1ರಂದು ಅದ್ದೂರಿಯಾಗಿ ಈ ಚಿತ್ರ ರಿಲೀಸ್​ ಆಯಿತು. ತೆಲುಗಿನ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದ ಅನೇಕ ಕಡೆಗಳಲ್ಲಿ ‘ಖುಷಿ’ ಸಿನಿಮಾ ಪ್ರದರ್ಶನ ಕಾಣುತ್ತಿದೆ. 2 ದಿನಕ್ಕೆ ಈ ಸಿನಿಮಾ ಎಷ್ಟು ಕಲೆಕ್ಷನ್​ (Kushi Box Office Collection) ಮಾಡಿದೆ ಎಂಬ ಮಾಹಿತಿ ಈಗ ಲಭ್ಯವಾಗಿದೆ. ಬರೋಬ್ಬರಿ 51 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ ಎಂದು ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ (Mythri Movie Makers) ಹೇಳಿಕೊಂಡಿದೆ. ಈ ಸುದ್ದಿ ಕೇಳಿ ವಿಜಯ್​ ದೇವರಕೊಂಡ ಅಭಿಮಾನಿಗಳು ಖುಷಿಯಾಗಿದ್ದಾರೆ.

‘ಲೈಗರ್​’ ಸಿನಿಮಾ ಕಳೆದ ವರ್ಷ ಆಗಸ್ಟ್​ನಲ್ಲಿ ಬಿಡುಗಡೆ ಆಗಿತ್ತು. ಆ ಸಿನಿಮಾದ ಮೇಲೆ ವಿಜಯ್​ ದೇವರಕೊಂಡ ಅವರು ಬಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅದು ನಿಜವಾಗಲಿಲ್ಲ. ಆದ್ದರಿಂದ ಈ ವರ್ಷ ‘ಖುಷಿ’ ಸಿನಿಮಾದ ಮೂಲಕ ಗೆಲ್ಲುವುದು ವಿಜಯ್​ ದೇವರಕೊಂಡ ಅವರಿಗೆ ಅನಿವಾರ್ಯ ಆಗಿತ್ತು. ನಿರೀಕ್ಷೆಯಂತೆಯೇ ‘ಖುಷಿ’ ಚಿತ್ರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಎರಡು ದಿನ ಉತ್ತಮವಾಗಿ ಪ್ರದರ್ಶನ ಕಂಡಿರುವ ಈ ಸಿನಿಮಾ ವಿಶ್ವಾದ್ಯಂತ 51 ಕೋಟಿ ರೂಪಾಯಿ ಗಳಿಸಿದೆ. ಮುಂದಿನ ದಿನಗಳಲ್ಲಿ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ಕಾದು ನೋಡಬೇಕು.

‘ಮೈತ್ರಿ ಮೂವೀ ಮೇಕರ್ಸ್​’ ಟ್ವೀಟ್​:

‘ಖುಷಿ’ ಸಿನಿಮಾಗೆ ಶಿವ ನಿರ್ವಾಣ ಅವರು ನಿರ್ದೇಶನ ಮಾಡಿದ್ದಾರೆ. ವಿಜಯ್​ ದೇವರಕೊಂಡ ಅವರಿಗೆ ಜೋಡಿಯಾಗಿ ಸಮಂತಾ ರುತ್​ ಪ್ರಭು ನಟಿಸಿದ್ದಾರೆ. ಇಬ್ಬರ ನಡುವಿನ ಕೆಮಿಸ್ಟ್ರಿ ನೋಡಿ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಒಂದು ಹೊಸ ಪ್ರೇಮಕಥೆಯನ್ನು ಈ ಸಿನಿಮಾದ ಮೂಲಕ ಹೇಳಲಾಗಿದೆ. ಫ್ಯಾಮಿಲಿ ಪ್ರೇಕ್ಷಕರಿಗೆ ‘ಖುಷಿ’ ಸಿನಿಮಾ ಹೆಚ್ಚು ಇಷ್ಟವಾಗಿದೆ. ಹಾಗಾಗಿ ಇದನ್ನು ‘ಬ್ಲಾಕ್​ ಬಸ್ಟರ್​ ಫ್ಯಾಮಿಲಿ ಎಂಟರ್​ಟೇನರ್​’ ಎಂದು ನಿರ್ಮಾಪಕರು ಹೇಳಿದ್ದಾರೆ. ಹಾಡುಗಳು ಕೂಡ ಸಿನಿಮಾದ ಗೆಲುವಿಗೆ ಕಾರಣ ಆಗಿವೆ.

ಇದನ್ನೂ ಓದಿ: ‘ಖುಷಿ’ ಚಿತ್ರಕ್ಕೆ ವಿಜಯ್​ ದೇವರಕೊಂಡ-ಸಮಂತಾ ಪಡೆದ ಸಂಭಾವನೆ ಎಷ್ಟು? ಇಬ್ಬರ ಸಂಬಳದ ನಡುವೆ ಇದೆ ದೊಡ್ಡ ಅಂತರ

ಸಮಂತಾ ರುತ್​ ಪ್ರಭು ಅವರು ಈಗ ಅಮೆರಿಕದಲ್ಲಿದ್ದಾರೆ. ಭಾರತದಲ್ಲಿ ಅವರು ‘ಖುಷಿ’ ಸಿನಿಮಾದ ಪ್ರಚಾರವನ್ನು ಅಷ್ಟಾಗಿ ಮಾಡಿಲ್ಲ. ಆದ್ದರಿಂದ ವಿಜಯ್​ ದೇವರಕೊಂಡ ಅವರೇ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಚಿತ್ರಕ್ಕೆ ಒಳ್ಳೆಯ ಓಪನಿಂಗ್​ ಸಿಕ್ಕಿರುವುದರಿಂದ ಅವರ ಮುಖದಲ್ಲಿ ನಗು ಮೂಡಿದೆ.

ಇದನ್ನೂ ಓದಿ: ‘ಖುಷಿ’ ಚಿತ್ರದ ಬೆಡ್​ ರೂಮ್​ ದೃಶ್ಯ ವೈರಲ್: ಸಮಂತಾ, ವಿಜಯ್ ದೇವರಕೊಂಡ ಬಗ್ಗೆ ಜನರ ಕಮೆಂಟ್​ ಏನು?

ಸೋಮವಾರ (ಸೆಪ್ಟೆಂಬರ್​ 4) ಸಂಜೆ 6 ಗಂಟೆಗೆ ವಿಶಾಖಪಟ್ಟಣದಲ್ಲಿ ‘ಖುಷಿ’ ಸಿನಿಮಾದ ಸಕ್ಸಸ್​ ಮೀಟ್​ ನಡೆಯಲಿದೆ. ಸಿನಿಮಾ ಹಿಟ್​ ಆಗಿರುವ ಸಂತಸದಲ್ಲಿ ವಿಜಯ್​ ದೇವರಕೊಂಡ ಅವರು ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ