AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖುಷಿ’ ಕಥೆಯಲ್ಲಿ ಬದಲಾವಣೆ ಕೇಳಿದ ಸಮಂತಾ; ನೋ ಎಂದ ನಿರ್ದೇಶಕನಿಗೆ ಡೇಟ್ಸ್ ನಿರಾಕರಿಸಿದ ನಟಿ?

2019ರಲ್ಲಿ ತೆರೆಗೆ ಬಂದ ಸಮಂತಾ-ನಾಗ ಚೈತನ್ಯ ನಟನೆಯ ‘ಮಜಿಲಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದ ಶಿವ ನಿರ್ವಾಣ ಅವರೇ ‘ಖುಷಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

‘ಖುಷಿ’ ಕಥೆಯಲ್ಲಿ ಬದಲಾವಣೆ ಕೇಳಿದ ಸಮಂತಾ; ನೋ ಎಂದ ನಿರ್ದೇಶಕನಿಗೆ ಡೇಟ್ಸ್ ನಿರಾಕರಿಸಿದ ನಟಿ?
ವಿಜಯ್ ದೇವರಕೊಂಡ-ಸಮಂತಾ
ರಾಜೇಶ್ ದುಗ್ಗುಮನೆ
|

Updated on: Jan 25, 2023 | 6:30 AM

Share

ನಟಿ ಸಮಂತಾ (Samantha) ಅವರು ಅಪರೂಪ ಹಾಗೂ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರಿಂದ ಅವರಿಗೆ ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುತ್ತಿದೆ. ಅವರು ಸಂಪೂರ್ಣವಾಗಿ ಚೇತರಿಕೆ ಕಾಣಲು ಇನ್ನೂ ಸಮಯ ಬೇಕಿದೆ. ಈಗ ಸಮಂತಾ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕೆಲವು ಪ್ರಾಜೆಕ್ಟ್​​ಗೆ ಅವರು ಡೇಟ್ಸ್ ನೀಡಿದ್ದಾರೆ. ಆದರೆ, ಅವರ ನಟನೆಯ ‘ಖುಷಿ’ ಚಿತ್ರಕ್ಕೆ (Khushi Movie) ಸಮಂತಾ ಡೇಟ್ಸ್ ನೀಡೋಕೆ ಹಿಂಜರಿಯುತ್ತಿದ್ದಾರೆ ಎಂದು ವರದಿ ಆಗಿದೆ. ಸಮಂತಾ ಕಥೆಯಲ್ಲಿ ಬದಲಾವಣೆ ಕೇಳಿದ್ದು, ಇದನ್ನು ಮಾಡೋಕೆ ನಿರ್ದೇಶಕರು ನಿರಾಕರಿಸಿದ್ದು ಕಾರಣ ಎನ್ನಲಾಗುತ್ತಿದೆ.

2019ರಲ್ಲಿ ತೆರೆಗೆ ಬಂದ ಸಮಂತಾ-ನಾಗ ಚೈತನ್ಯ ನಟನೆಯ ‘ಮಜಿಲಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದ ಶಿವ ನಿರ್ವಾಣ ಅವರೇ ‘ಖುಷಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಈಗ ಎರಡನೇ ಹಂತದ ಶೂಟಿಂಗ್ ನಡೆಯಬೇಕು ಎನ್ನುವಾಗಲೇ ಸಮಂತಾಗೆ ಅನಾರೋಗ್ಯ ಕಾಡಿತು. ಈಗ ಅವರು ಬೇರೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಈ ಚಿತ್ರಕ್ಕೆ ಅವರು ಸಮಯ ನೀಡುತ್ತಿಲ್ಲ.

ಮೂಲಗಳ ಪ್ರಕಾರ ‘ಖುಷಿ’ ಚಿತ್ರದಲ್ಲಿ ಸಮಂತಾ ಪಾತ್ರಕ್ಕೆ ಹೆಚ್ಚು ತೂಕವಿಲ್ಲ. ಹೀಗಾಗಿ, ಕಥೆಯಲ್ಲಿ ಬದಲಾವಣೆ ಮಾಡಿ ಪಾತ್ರಕ್ಕೆ ಹೆಚ್ಚಿನ ತೂಕ ಕೊಡುವಂತೆ ಸಮಂತಾ ಕೇಳಿದ್ದಾರೆ. ಆದರೆ, ಇದನ್ನು ನಿರ್ದೇಶಕರು ನಿರಾಕರಿಸಿದ್ದಾರೆ. ಹೀಗಾಗಿ ಸಮಂತಾ ಡೇಟ್ಸ್ ನೀಡೋಕೆ ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Samantha: ಶಾಕುಂತಲೆ ಆಗಿ ಮಿಂಚಿದ ನಟಿ ಸಮಂತಾ; ಇಲ್ಲಿದೆ ಕ್ಯೂಟ್ ಫೋಟೋಸ್​

ಆದರೆ, ತಂಡದವರು ಹೇಳೋದೆ ಬೇರೆ. ಸಮಂತಾ ಅವರು ಇಷ್ಟು ದಿನ ವಿಶ್ರಾಂತಿಯಲ್ಲಿದ್ದರು. ಫೆಬ್ರವರಿ ಮಧ್ಯದಿಂದ ಸಮಂತಾ ಅವರು ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರದ ಬಗ್ಗೆ ಸಮಂತಾ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ