AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖುಷಿ’ ಕಥೆಯಲ್ಲಿ ಬದಲಾವಣೆ ಕೇಳಿದ ಸಮಂತಾ; ನೋ ಎಂದ ನಿರ್ದೇಶಕನಿಗೆ ಡೇಟ್ಸ್ ನಿರಾಕರಿಸಿದ ನಟಿ?

2019ರಲ್ಲಿ ತೆರೆಗೆ ಬಂದ ಸಮಂತಾ-ನಾಗ ಚೈತನ್ಯ ನಟನೆಯ ‘ಮಜಿಲಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದ ಶಿವ ನಿರ್ವಾಣ ಅವರೇ ‘ಖುಷಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

‘ಖುಷಿ’ ಕಥೆಯಲ್ಲಿ ಬದಲಾವಣೆ ಕೇಳಿದ ಸಮಂತಾ; ನೋ ಎಂದ ನಿರ್ದೇಶಕನಿಗೆ ಡೇಟ್ಸ್ ನಿರಾಕರಿಸಿದ ನಟಿ?
ವಿಜಯ್ ದೇವರಕೊಂಡ-ಸಮಂತಾ
Follow us
ರಾಜೇಶ್ ದುಗ್ಗುಮನೆ
|

Updated on: Jan 25, 2023 | 6:30 AM

ನಟಿ ಸಮಂತಾ (Samantha) ಅವರು ಅಪರೂಪ ಹಾಗೂ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರಿಂದ ಅವರಿಗೆ ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುತ್ತಿದೆ. ಅವರು ಸಂಪೂರ್ಣವಾಗಿ ಚೇತರಿಕೆ ಕಾಣಲು ಇನ್ನೂ ಸಮಯ ಬೇಕಿದೆ. ಈಗ ಸಮಂತಾ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕೆಲವು ಪ್ರಾಜೆಕ್ಟ್​​ಗೆ ಅವರು ಡೇಟ್ಸ್ ನೀಡಿದ್ದಾರೆ. ಆದರೆ, ಅವರ ನಟನೆಯ ‘ಖುಷಿ’ ಚಿತ್ರಕ್ಕೆ (Khushi Movie) ಸಮಂತಾ ಡೇಟ್ಸ್ ನೀಡೋಕೆ ಹಿಂಜರಿಯುತ್ತಿದ್ದಾರೆ ಎಂದು ವರದಿ ಆಗಿದೆ. ಸಮಂತಾ ಕಥೆಯಲ್ಲಿ ಬದಲಾವಣೆ ಕೇಳಿದ್ದು, ಇದನ್ನು ಮಾಡೋಕೆ ನಿರ್ದೇಶಕರು ನಿರಾಕರಿಸಿದ್ದು ಕಾರಣ ಎನ್ನಲಾಗುತ್ತಿದೆ.

2019ರಲ್ಲಿ ತೆರೆಗೆ ಬಂದ ಸಮಂತಾ-ನಾಗ ಚೈತನ್ಯ ನಟನೆಯ ‘ಮಜಿಲಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದ ಶಿವ ನಿರ್ವಾಣ ಅವರೇ ‘ಖುಷಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಈಗ ಎರಡನೇ ಹಂತದ ಶೂಟಿಂಗ್ ನಡೆಯಬೇಕು ಎನ್ನುವಾಗಲೇ ಸಮಂತಾಗೆ ಅನಾರೋಗ್ಯ ಕಾಡಿತು. ಈಗ ಅವರು ಬೇರೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಈ ಚಿತ್ರಕ್ಕೆ ಅವರು ಸಮಯ ನೀಡುತ್ತಿಲ್ಲ.

ಮೂಲಗಳ ಪ್ರಕಾರ ‘ಖುಷಿ’ ಚಿತ್ರದಲ್ಲಿ ಸಮಂತಾ ಪಾತ್ರಕ್ಕೆ ಹೆಚ್ಚು ತೂಕವಿಲ್ಲ. ಹೀಗಾಗಿ, ಕಥೆಯಲ್ಲಿ ಬದಲಾವಣೆ ಮಾಡಿ ಪಾತ್ರಕ್ಕೆ ಹೆಚ್ಚಿನ ತೂಕ ಕೊಡುವಂತೆ ಸಮಂತಾ ಕೇಳಿದ್ದಾರೆ. ಆದರೆ, ಇದನ್ನು ನಿರ್ದೇಶಕರು ನಿರಾಕರಿಸಿದ್ದಾರೆ. ಹೀಗಾಗಿ ಸಮಂತಾ ಡೇಟ್ಸ್ ನೀಡೋಕೆ ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Samantha: ಶಾಕುಂತಲೆ ಆಗಿ ಮಿಂಚಿದ ನಟಿ ಸಮಂತಾ; ಇಲ್ಲಿದೆ ಕ್ಯೂಟ್ ಫೋಟೋಸ್​

ಆದರೆ, ತಂಡದವರು ಹೇಳೋದೆ ಬೇರೆ. ಸಮಂತಾ ಅವರು ಇಷ್ಟು ದಿನ ವಿಶ್ರಾಂತಿಯಲ್ಲಿದ್ದರು. ಫೆಬ್ರವರಿ ಮಧ್ಯದಿಂದ ಸಮಂತಾ ಅವರು ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರದ ಬಗ್ಗೆ ಸಮಂತಾ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!