AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖುಷಿ’ ಕಥೆಯಲ್ಲಿ ಬದಲಾವಣೆ ಕೇಳಿದ ಸಮಂತಾ; ನೋ ಎಂದ ನಿರ್ದೇಶಕನಿಗೆ ಡೇಟ್ಸ್ ನಿರಾಕರಿಸಿದ ನಟಿ?

2019ರಲ್ಲಿ ತೆರೆಗೆ ಬಂದ ಸಮಂತಾ-ನಾಗ ಚೈತನ್ಯ ನಟನೆಯ ‘ಮಜಿಲಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದ ಶಿವ ನಿರ್ವಾಣ ಅವರೇ ‘ಖುಷಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

‘ಖುಷಿ’ ಕಥೆಯಲ್ಲಿ ಬದಲಾವಣೆ ಕೇಳಿದ ಸಮಂತಾ; ನೋ ಎಂದ ನಿರ್ದೇಶಕನಿಗೆ ಡೇಟ್ಸ್ ನಿರಾಕರಿಸಿದ ನಟಿ?
ವಿಜಯ್ ದೇವರಕೊಂಡ-ಸಮಂತಾ
ರಾಜೇಶ್ ದುಗ್ಗುಮನೆ
|

Updated on: Jan 25, 2023 | 6:30 AM

Share

ನಟಿ ಸಮಂತಾ (Samantha) ಅವರು ಅಪರೂಪ ಹಾಗೂ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರಿಂದ ಅವರಿಗೆ ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುತ್ತಿದೆ. ಅವರು ಸಂಪೂರ್ಣವಾಗಿ ಚೇತರಿಕೆ ಕಾಣಲು ಇನ್ನೂ ಸಮಯ ಬೇಕಿದೆ. ಈಗ ಸಮಂತಾ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕೆಲವು ಪ್ರಾಜೆಕ್ಟ್​​ಗೆ ಅವರು ಡೇಟ್ಸ್ ನೀಡಿದ್ದಾರೆ. ಆದರೆ, ಅವರ ನಟನೆಯ ‘ಖುಷಿ’ ಚಿತ್ರಕ್ಕೆ (Khushi Movie) ಸಮಂತಾ ಡೇಟ್ಸ್ ನೀಡೋಕೆ ಹಿಂಜರಿಯುತ್ತಿದ್ದಾರೆ ಎಂದು ವರದಿ ಆಗಿದೆ. ಸಮಂತಾ ಕಥೆಯಲ್ಲಿ ಬದಲಾವಣೆ ಕೇಳಿದ್ದು, ಇದನ್ನು ಮಾಡೋಕೆ ನಿರ್ದೇಶಕರು ನಿರಾಕರಿಸಿದ್ದು ಕಾರಣ ಎನ್ನಲಾಗುತ್ತಿದೆ.

2019ರಲ್ಲಿ ತೆರೆಗೆ ಬಂದ ಸಮಂತಾ-ನಾಗ ಚೈತನ್ಯ ನಟನೆಯ ‘ಮಜಿಲಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದ ಶಿವ ನಿರ್ವಾಣ ಅವರೇ ‘ಖುಷಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಈಗ ಎರಡನೇ ಹಂತದ ಶೂಟಿಂಗ್ ನಡೆಯಬೇಕು ಎನ್ನುವಾಗಲೇ ಸಮಂತಾಗೆ ಅನಾರೋಗ್ಯ ಕಾಡಿತು. ಈಗ ಅವರು ಬೇರೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಈ ಚಿತ್ರಕ್ಕೆ ಅವರು ಸಮಯ ನೀಡುತ್ತಿಲ್ಲ.

ಮೂಲಗಳ ಪ್ರಕಾರ ‘ಖುಷಿ’ ಚಿತ್ರದಲ್ಲಿ ಸಮಂತಾ ಪಾತ್ರಕ್ಕೆ ಹೆಚ್ಚು ತೂಕವಿಲ್ಲ. ಹೀಗಾಗಿ, ಕಥೆಯಲ್ಲಿ ಬದಲಾವಣೆ ಮಾಡಿ ಪಾತ್ರಕ್ಕೆ ಹೆಚ್ಚಿನ ತೂಕ ಕೊಡುವಂತೆ ಸಮಂತಾ ಕೇಳಿದ್ದಾರೆ. ಆದರೆ, ಇದನ್ನು ನಿರ್ದೇಶಕರು ನಿರಾಕರಿಸಿದ್ದಾರೆ. ಹೀಗಾಗಿ ಸಮಂತಾ ಡೇಟ್ಸ್ ನೀಡೋಕೆ ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Samantha: ಶಾಕುಂತಲೆ ಆಗಿ ಮಿಂಚಿದ ನಟಿ ಸಮಂತಾ; ಇಲ್ಲಿದೆ ಕ್ಯೂಟ್ ಫೋಟೋಸ್​

ಆದರೆ, ತಂಡದವರು ಹೇಳೋದೆ ಬೇರೆ. ಸಮಂತಾ ಅವರು ಇಷ್ಟು ದಿನ ವಿಶ್ರಾಂತಿಯಲ್ಲಿದ್ದರು. ಫೆಬ್ರವರಿ ಮಧ್ಯದಿಂದ ಸಮಂತಾ ಅವರು ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರದ ಬಗ್ಗೆ ಸಮಂತಾ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್