AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಅನಾರೋಗ್ಯದಿಂದ ವಿಜಯ್ ದೇವರಕೊಂಡ ಕನಸು ಭಗ್ನ; ಬೇಸರ ಹೊರಹಾಕಿದ ನಟ

ವಿಜಯ್ ದೇವರಕೊಂಡ ಹಾಗೂ ಸಮಂತಾ ‘ಖುಷಿ’ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಇನ್ನೂ ಕೆಲವು ಹಂತದ ಶೂಟಿಂಗ್ ಬಾಕಿ ಇದೆ.

ಸಮಂತಾ ಅನಾರೋಗ್ಯದಿಂದ ವಿಜಯ್ ದೇವರಕೊಂಡ ಕನಸು ಭಗ್ನ; ಬೇಸರ ಹೊರಹಾಕಿದ ನಟ
ಸಮಂತಾ-ವಿಜಯ್
TV9 Web
| Edited By: |

Updated on: Nov 02, 2022 | 8:21 PM

Share

ನಟಿ ಸಮಂತಾ (Samantha) ಅವರು ಸದ್ಯ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಅಪರೂಪದ ಕಾಯಿಲೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಸಮಂತಾ ಇತ್ತೀಚೆಗೆ ಘೋಷಣೆ ಮಾಡಿದ್ದರು. ಸಮಂತಾಗೆ ಅನಾರೋಗ್ಯ ಕಾಡಿರುವುದರಿಂದ ನಟ ವಿಜಯ್ ದೇವರಕೊಂಡ (Vijay Devarakonda) ಕೂಡ ತೊಂದರೆಗೆ ಸಿಲುಕಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ವಿಜಯ್ ಅವರ ಹೊಸ ಘೋಷಣೆಯಿಂದ ಫ್ಯಾನ್ಸ್​ಗೆ ಸಖತ್ ಬೇಸರ ಆಗಿದೆ.

ವಿಜಯ್ ದೇವರಕೊಂಡ ಹಾಗೂ ಸಮಂತಾ ‘ಖುಷಿ’ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಇನ್ನೂ ಕೆಲವು ಹಂತದ ಶೂಟಿಂಗ್ ಬಾಕಿ ಇದೆ. ಈಗಾಗಲೇ ಶೂಟಿಂಗ್ ಆರಂಭಗೊಳ್ಳಬೇಕಿತ್ತು. ಆದರೆ, ಸಮಂತಾಗೆ ಅನಾರೋಗ್ಯ ಕಾಡಿರುವುದರಿಂದ ಚಿತ್ರೀಕರಣ ಮುಂದೂಡುವುದು ಅನಿವಾರ್ಯ ಆಗಿದೆ.

ಸಮಂತಾ ಅವರಿಗೆ ಸ್ನಾಯುಗಳಲ್ಲಿ ಸೆಳೆತ ಶುರುವಾಗಿದೆ. ಇದಕ್ಕಾಗಿ ಅವರು ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದರು. ಇಷ್ಟೇ ಅಲ್ಲ ಸಮಂತಾ ಅವರಿಗೆ ಚರ್ಮದ ಅಲರ್ಜಿ ಕೂಡ ಆಗಿದೆ. ಈ ಎಲ್ಲಾ ಕಾರಣದಿಂದ ಸಮಂತಾ ಅವರಿಗೆ ಸಾಕಷ್ಟು ವಿಶ್ರಾಂತಿ ಬೇಕಿದೆ. ಇತ್ತೀಚೆಗೆ ಡ್ರಿಪ್ ಹಾಕಿಕೊಂಡು ಅವರು ‘ಯಶೋದ’ ಚಿತ್ರಕ್ಕೆ ಡಬ್ಬಿಂಗ್ ಮಾಡಿದ್ದರು. ಹೀಗಾಗಿ, ಸದ್ಯಕ್ಕಂತೂ ಅವರ ‘ಖುಷಿ’ ಚಿತ್ರದ ಕೆಲಸ ಪೂರ್ಣಗೊಳ್ಳಲ್ಲ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟ ಬಗ್ಗೆ ವಿಜಯ್ ದೇವರಕೊಂಡ ಅವರು ಇಂಗ್ಲಿಷ್ ವೆಬ್​ಸೈಟ್ ನ್ಯೂಸ್18ಗೆ ಮಾಹಿತಿ ನೀಡಿದ್ದಾರೆ. ‘ನಾವು ಶೇ.60 ಶೂಟಿಂಗ್ ಪೂರ್ಣಗೊಳಿಸಿದ್ದೀವಿ. ಆರಂಭದಲ್ಲಿ ಚಿತ್ರವನ್ನು ಡಿಸೆಂಬರ್​​ನಲ್ಲೇ ರಿಲೀಸ್ ಮಾಡುವ ಪ್ಲ್ಯಾನ್ ಇತ್ತು. ಆದರೆ, ಹಲವು ಕಾರಣದಿಂದ ಚಿತ್ರ ಫೆಬ್ರವರಿಗೆ ಮುಂದೂಡಲ್ಪಟ್ಟಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಮಂತಾಗೆ ಅಪರೂಪದ ಕಾಯಿಲೆ ಅಂಟೋಕೆ ಕಾರಣವಾಯ್ತು ಆ ಒಂದು ತಪ್ಪು?

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಹಿಂದಿಯಲ್ಲಿ ಅವರ ಮೊದಲ ಚಿತ್ರ ಇದಾಗಿತ್ತು. ಆದರೆ, ಈ ಚಿತ್ರ ಹೀನಾಯವಾಗಿ ಸೋತಿದೆ. ಈ ಸೋಲನ್ನು ಮರೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ‘ಖುಷಿ’ ಚಿತ್ರದ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದರು. ಈ ವರ್ಷ ಮತ್ತೊಂದು ಗೆಲುವು ಕಾಣಬೇಕು ಎಂಬ ಕನಸು ಭಗ್ನವಾಗಿದೆ.