AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಕೊನೆಯ ಸಿನಿಮಾ ಸ್ಮರಣೀಯಗೊಳಿಸಲಿರುವ ಕೆವಿಎನ್

KVN Production: ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ಅನ್ನು ಕೆವಿಎನ್ ಪ್ರೊಡಕ್ಷನ್ಸ್​ನ ವೆಂಕಟ್ ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್​ರ ಕೊನೆಯ ಸಿನಿಮಾ ಇದಾಗಿರುವ ಕಾರಣ ಭಾರಿ ದೊಡ್ಡ ಮಟ್ಟದಲ್ಲಿ ಸಿನಿಮಾ ನಿರ್ಮಾಣವನ್ನು ಕೆವಿಎನ್ ಪ್ರೊಡಕ್ಷನ್ಸ್​ ಮುಂದಾಗಿದೆ. ವಿಜಯ್​ರ ವೃತ್ತಿ ಜೀವನದಲ್ಲಿಯೇ ದೊಡ್ಡ ಬಜೆಟ್​ನ ಸಿನಿಮಾ ಇದಾಗಿರಲಿದೆ ಎನ್ನಲಾಗುತ್ತಿದೆ.

ವಿಜಯ್ ಕೊನೆಯ ಸಿನಿಮಾ ಸ್ಮರಣೀಯಗೊಳಿಸಲಿರುವ ಕೆವಿಎನ್
Kvn Productions
ಮಂಜುನಾಥ ಸಿ.
|

Updated on: Jan 30, 2025 | 3:22 PM

Share

ದಳಪತಿ ವಿಜಯ್ ನಟನೆಯ 69ನೇ ಸಿನಿಮಾಕ್ಕೆ ‘ಜನನಾಯಗನ್’ ಎಂದು ಹೆಸರಿಡಲಾಗಿದೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಎಂದು ಖುದ್ದು ಅವರೇ ಘೋಷಿಸಿದ್ದಾರೆ. ವಿಜಯ್ ರಾಜಕೀಯ ಪ್ರವೇಶ ಮಾಡಿರುವ ಕಾರಣ ಚಿತ್ರರಂಗದಿಂದ ದೂರಾಗುತ್ತಿದ್ದಾರೆ. ವಿಜಯ್​ರ ಕೊನೆಯ ಸಿನಿಮಾ ಅನ್ನು ಕರ್ನಾಟಕದ ಹೆಮ್ಮೆಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ವಿಜಯ್​ರ ಕೊನೆಯ ಸಿನಿಮಾವನ್ನು ಸ್ಮರಣೀಯಗೊಳಿಸುವ ನಿರ್ಧಾರ ಮಾಡಿದೆ ಕೆವಿಎನ್ ನಿರ್ಮಾಣ ಸಂಸ್ಥೆ.

‘ಜನನಾಯಗನ್’ ಸಿನಿಮಾಕ್ಕೆ ಭಾರಿ ಬಂಡವಾಳವನ್ನು ಕೆವಿಎನ್​ನ ವೆಂಕಟ್ ಕೆ ನಾರಾಯಣ್ ಹೂಡುತ್ತಿದ್ದು, ಭಾರಿ ದೊಡ್ಡ ಪ್ರಮಾಣದಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅದ್ಧೂರಿ ಸೆಟ್​ಗಳು, ಅದ್ಧೂರಿ ವಿಎಫ್​ಎಕ್ಸ್​ ಮಾತ್ರವೇ ಅಲ್ಲದೆ ಭಾರಿ ಸಂಖ್ಯೆಯ ಜನರನ್ನು ಸೇರಿಸಿ ಚಿತ್ರೀಕರಣ ಮಾಡಲು ಸಜ್ಜಾಗಿದ್ದಾರೆ. ಭಾರತ ಮಾತ್ರವೇ ಅಲ್ಲದೆ ವಿದೇಶಗಳಲ್ಲಿಯೂ ಚಿತ್ರೀಕರಣ ಮಾಡಲಾಗುತ್ತಿದ್ದು, ವಿಜಯ್​ರ ವೃತ್ತಿ ಜೀವನದ ಭಾರಿ ಬಜೆಟ್ ಸಿನಿಮಾ ಇದಾಗಿರಲಿದೆ.

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಅತ್ಯುತ್ತಮ ಸಿನಿಮಾಗಳನ್ನು ನಿರ್ಮಾಣ ಮಾಡಿದೆ. ಗಣೇಶ್ ನಟನೆಯ ‘ಸಖತ್’ ಮೂಲಕ ಸಿನಿಮಾ ನಿರ್ಮಾಣ ಆರಂಭಿಸಿದ ವೆಂಕಟ್ ಅವರು ಆ ನಂತರ ‘ಬೈ ಟು ಲವ್’ ನಿರ್ಮಾಣ ಮಾಡಿ ಹಿಟ್ ನೀಡಿದರು. ಇದೀಗ ಕೆವಿಎನ್ ಪ್ರೊಡಕ್ಷನ್​ನಿಂದ ಸಾಲು ಸಾಲು ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ. ಧ್ರುವ ಸರ್ಜಾ ನಟಿಸಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’, ಯಶ್ ನಟಿಸಿ, ಗೀತು ಮೋಹನ್​ದಾಸ್ ನಿರ್ದೇಶನ ಮಾಡಿರುವ ಇಡೀ ಭಾರತವೇ ಎದುರು ನೋಡುತ್ತಿರುವ ‘ಟಾಕ್ಸಿಕ್’ ಸಿನಿಮಾ ಅನ್ನೂ ಸಹ ನಿರ್ಮಾಣ ಮಾಡುತ್ತಿರುವುದು ಕೆವಿಎನ್​ನ ವೆಂಟಕ್ ಅವರೇ. ಇದರ ಜೊತೆಗೆ ಮಲಯಾಳಂ ಸಿನಿಮಾ ಒಂದಕ್ಕೂ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ:

ವಿಜಯ್ ನಟನೆಯ ‘ಜನನಾಯಗನ್’ ಸಿನಿಮಾದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಹಿಂದೆ ನಿಂತ ಅಗಣಿತ ಜನಸಾಗರದ ಮುಂದೆ ವಿಜಯ್ ಅವರು ಸೊಂಟದ ಮೇಲೆ ಕೈಯಿಟ್ಟುಕೊಂಡು ನಿಂತು ಸೆಲ್ಫೀ ತೆಗೆದುಕೊಳ್ಳುತ್ತಿರುವ ಫೋಟೋವನ್ನು ಪೋಸ್ಟರಿನಲ್ಲಿ ಬಳಸಲಾಗಿದೆ. ವಿಜಯ್​ರ ರಾಜಕೀಯ ಪ್ರವೇಶವನ್ನು ಗಮನದಲ್ಲಿಟ್ಟುಕೊಂಡು ‘ಜನ ನಾಯಗನ್’ ಹೆಸರನ್ನು ಸಿನಿಮಾಕ್ಕೆ ಇಡಲಾಗಿದೆ.

‘ಜನ ನಾಯಗನ್’ ಸಿನಿಮಾ ಅನ್ನು ತಮಿಳಿನ ಖ್ಯಾತ ನಿರ್ದೇಶಕ ಹೆಚ್ ವಿನೋದ್ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಅನಿರುದ್ಧ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸತ್ಯನ್ ಸೂರ್ಯನ್ ಸಿನಿಮಾಟೊಗ್ರಫಿ, ಅನಲ್ ಅರಸು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಇದೀಗ ಚಾಲ್ತಿಯಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು