AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕೇಶ್ ಕನಗರಾಜ್ ಸಿನಿಮಾಗೆ ಕನ್ನಡಿಗನ ಬಂಡವಾಳ; ಯಾವುದು ಈ ಚಿತ್ರ?

ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ನರ್ತನ್ ಒಟ್ಟಾಗಿ ಸಿನಿಮಾ ಮಾಡಬೇಕಿತ್ತು. ಆದರೆ, ಯಶ್​ಗೆ ಕಥೆ ಇಷ್ಟವಾಗಿಲ್ಲ. ಹೀಗಾಗಿ ನರ್ತನ್ ಸ್ಥಾನಕ್ಕೆ ಗೀತು ಮೋಹನ್​ದಾಸ್ ಅವರ ಆಗಮನ ಆಯಿತು. ಆ ಬಳಿಕ ಕೆವಿಎನ್ ಅವರು ರಾಮ್ ಚರಣ್​ಗೆ ಕಥೆ ಹೇಳುವಂತೆ ನರ್ತನ್​ಗೆ ಸೂಚಿಸಿದರು. ಇದು ಕೂಡ ಫೈನಲ್ ಆಗಿಲ್ಲ ಎನ್ನಲಾಗಿದೆ. ಈಗ ಲೋಕೇಶ್ ಕನಗರಾಜ್ ಅವರ ಹೆಸರು ನಿರ್ಮಾಣ ಸಂಸ್ಥೆ ಜೊತೆ ತಳುಕು ಹಾಕಿಕೊಂಡಿದೆ.

ಲೋಕೇಶ್ ಕನಗರಾಜ್ ಸಿನಿಮಾಗೆ ಕನ್ನಡಿಗನ ಬಂಡವಾಳ; ಯಾವುದು ಈ ಚಿತ್ರ?
ಲೋಕೇಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 15, 2024 | 11:58 AM

Share

ಕನ್ನಡದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಸಾಕಷ್ಟು ಸಿನಿಮಾಗಳನ್ನು ಹಂಚಿಕೆ ಮಾಡಿದೆ. ಸದ್ಯ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ (Toxic Movie) ಈ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಮೂಡಿಬರುತ್ತಿದೆ. ನಿರ್ಮಾಪಕ ವೆಂಕಟ್ ನಾರಾಯಣ್ ಅವರು ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮಧ್ಯೆ ಲೋಕೇಶ್ ಕನಗರಾಜ್ ಬರ್ತ್​​ಡೇಗೆ ಕೆವಿಎನ್​ ಕಡೆಯಿಂದ ವಿಶೇಷ ವಿಶ್ ಬಂದಿದೆ. ಇದರಿಂದ ಇಬ್ಬರೂ ಸಿನಿಮಾ ಮಾಡೋದು ಪಕ್ಕಾ ಆಗಿದೆ. ಇದರ ಜೊತೆ ಸಾಕಷ್ಟು ವದಂತಿಗಳು ಹುಟ್ಟಿಕೊಂಡಿವೆ.

ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ನರ್ತನ್ ಒಟ್ಟಾಗಿ ಸಿನಿಮಾ ಮಾಡಬೇಕಿತ್ತು. ಇದಕ್ಕೆ ಯಶ್ ಹೀರೋ ಎಂದು ಹೇಳಲಾಗಿತ್ತು. ಆದರೆ, ಯಶ್​ಗೆ ಕಥೆ ಇಷ್ಟವಾಗಿಲ್ಲ. ಹೀಗಾಗಿ ನರ್ತನ್ ಸ್ಥಾನಕ್ಕೆ ಗೀತು ಮೋಹನ್​ದಾಸ್ ಅವರ ಆಗಮನ ಆಯಿತು. ಆ ಬಳಿಕ ಕೆವಿಎನ್ ಅವರು ರಾಮ್ ಚರಣ್​ಗೆ ಕಥೆ ಹೇಳುವಂತೆ ನರ್ತನ್​ಗೆ ಸೂಚಿಸಿದರು. ಇದು ಕೂಡ ಫೈನಲ್ ಆಗಿಲ್ಲ ಎನ್ನಲಾಗಿದೆ. ಈಗ ಲೋಕೇಶ್ ಕನಗರಾಜ್ ಅವರ ಹೆಸರು ನಿರ್ಮಾಣ ಸಂಸ್ಥೆ ಜೊತೆ ತಳುಕು ಹಾಕಿಕೊಂಡಿದೆ.

ಲೋಕೇಶ್ ಅವರು ಪ್ರಭಾಸ್ ಅಥವಾ ಜೂನಿಯರ್​ ಎನ್​ಟಿಆರ್ ಜೊತೆ ಕೆಲಸ ಮಾಡಲಿದ್ದಾರೆ ಎಂದು ಸುದ್ದಿ ಹರಡಿದೆ. ಆದರೆ, ಇದರಲ್ಲಿ ಯಾವುದೇ ನಿಜ ಇಲ್ಲ ಎಂದು ಹೇಳಲಾಗುತ್ತಿದೆ. ಕೆವಿಎನ್ ನಿರ್ಮಾಣ ಸಂಸ್ಥೆ ‘ಖೈದಿ 2’ ಚಿತ್ರವನ್ನು ನಿರ್ಮಾಣ ಮಾಡಲಿದೆಯಂತೆ. ಈ ಸಿನಿಮಾ ‘ಲೋಕೇಶ್ ಕನಗರಾಜ್ ಯೂನಿವರ್ಸ್’ ಅಡಿಯಲ್ಲಿ ಮೂಡಿ ಬರುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಸಿಗಬೇಕಿದೆ.

ಲೋಕೇಶ್ ಕನಗರಾಜ್ ಅವರು ಸದ್ಯ ರಜನಿಕಾಂತ್ ಅವರ ‘ತಲೈವರ್ 171’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದು ಕೂಡ ಸಿನಿಮ್ಯಾಟಿಕ್ ಯೂನಿವರ್ಸ್​ ಅಡಿಯಲ್ಲಿ ಸಿದ್ಧವಾಗುತ್ತಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಕುತೂಹಲ ಹೆಚ್ಚಿದೆ. ಈಗಾಗಲೇ ಅವರು ನಿರ್ದೇಶನ ಮಾಡಿದ ‘ಖೈದಿ’, ‘ವಿಕ್ರಮ್’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ‘ಲಿಯೋ’ ಸಾಧಾರಣ ಗೆಲುವು ಕಂಡಿದೆ. ಎಲ್ಲಾ ಸಿನಿಮಾಗಳಿಗೆ ಒಂದು ಕನೆಕ್ಷನ್ ಇದೆ.

ಇದನ್ನೂ ಓದಿ: ‘ಖೈದಿ 2’ ಚಿತ್ರಕ್ಕೆ ಶೂಟಿಂಗ್ ಆರಂಭ ಆಗೋದು ಯಾವಾಗ? ಉತ್ತರ ಕೊಟ್ಟ ಕಾರ್ತಿ

‘ಖೈದಿ’ ಸಿನಿಮಾದಲ್ಲಿ ಕಾರ್ತಿ ನಟಿಸಿದ್ದಾರೆ. ಜೈಲಿನಿಂದ ಪೆರೋಲ್​ ಮೇಲೆ ಹೊರ ಬರುವ ಖೈದಿಯ ಕಥೆಯನ್ನು ಈ ಸಿನಿಮಾ ಹೊಂದಿತ್ತು. ಕಥಾ ನಾಯಕ ಜೈಲಿಗೆ ಹೋಗಿದ್ದು ಏಕೆ? ಹಿಂದೆ ಏನಾಗಿತ್ತು ಎಂಬುದರ ಕಥೆನ್ನು ‘ಖೈದಿ 2’ ಚಿತ್ರದಲ್ಲಿ ತೋರಿಸಲಾಗುತ್ತಿದೆ. ಇದು ‘ಖೈದಿ’ ಚಿತ್ರದ ಪ್ರೀಕ್ವೆಲ್ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ