AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಂಪುರಾನ್’ ಚಿತ್ರಕ್ಕೆ ಬಿಜೆಪಿ ವಿರೋಧ ಬೆನ್ನಲ್ಲೇ ನಿರ್ಮಾಪಕನ ಕಚೇರಿ ಮೇಲೆ ಇಡಿ ದಾಳಿ

‘ಎಲ್2: ಎಂಪುರಾನ್’ ಚಿತ್ರಕ್ಕೆ ಬಿಜೆಪಿ ವಿರೋಧದ ಮಾಡಿತ್ತು. ಈ ಬೆನ್ನಲ್ಲೆ ಚಿತ್ರದ ನಿರ್ಮಾಪಕ ಗೋಕುಲಂ ಗೋಪಾಲನ್ ಅವರ ಮನೆ ಮೇಲೆ ಇಡಿ ದಾಳಿ ನಡೆದಿದೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಚಿತ್ರದಲ್ಲಿನ ಹಿಂದೂ ವಿರೋಧಿ ದೃಶ್ಯಗಳ ಆರೋಪದಿಂದ 24 ಕಡೆಗಳಲ್ಲಿ ಸಿನಿಮಾಗೆ ಕತ್ತರಿ ಹಾಕಲಾಗಿತ್ತು.

‘ಎಂಪುರಾನ್’ ಚಿತ್ರಕ್ಕೆ ಬಿಜೆಪಿ ವಿರೋಧ ಬೆನ್ನಲ್ಲೇ ನಿರ್ಮಾಪಕನ ಕಚೇರಿ ಮೇಲೆ ಇಡಿ ದಾಳಿ
ಎಂಪುರಾನ್
Follow us
ರಾಜೇಶ್ ದುಗ್ಗುಮನೆ
|

Updated on:Apr 04, 2025 | 12:59 PM

‘ಎಲ್​ 2: ಎಂಪುರಾನ್’ (L2: Empuraan) ಸಿನಿಮಾ ಸದ್ಯ ಸಾಕಷ್ಟು ಸುದ್ದಿಯಲ್ಲಿದೆ. ಒಂದು ಕಡೆ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತದೆ. ಮತ್ತೊಂದು ಕಡೆ ‘ಎಂಪುರಾನ್ ಚಿತ್ರದಲ್ಲಿ ಹಿಂದೂ ವಿರೋಧಿ ದೃಶ್ಯಗಳು ಇದೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ಕಾರಣಕ್ಕೆ ಬರೋಬ್ಬರಿ 24 ಕಡೆಗಳಲ್ಲಿ ಕತ್ತರಿ ಹಾಕಲಾಗಿತ್ತು. ಈ ಘಟನೆ ಬೆನ್ನಲ್ಲೇ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಚೆನ್ನೈ ಹಾಗೂ ಕೊಚ್ಚಿಯಲ್ಲಿರುವ ಗೋಪಾಲನ್ ಅವರ ಕಚೇರಿ ಮೇಲೆ ಈ ದಾಳಿ ನಡೆದಿದೆ. ಗೋಪಾಲನ್ ಅವರ ನೇತೃತ್ವದಲ್ಲಿ ಶ್ರೀ ಗೋಕುಲಂ ಚಿಟ್ಸ್ ಹಾಗೂ ಫೈನಾನ್ಸ್ ಪ್ರಮುಖ ಸಂಸ್ಥೆಗಳಾಗಿವೆ. ಇವರು ಆಸ್ಪತ್ರೆ, ಮಾಧ್ಯಮ, ಆರೋಗ್ಯ ಕ್ಷೇತ್ರ, ಶಿಕ್ಷಣ ಮತ್ತು ಲಾಜಿಸ್ಟಿಕ್ ಕ್ಷೇತ್ರಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ವಿದೇಶಿ ವಿನಿಯಮದಲ್ಲಿ ನಿಯಮ ಉಲ್ಲಂಘನೆ ಆಗಿದೆ ಎಂದು ಹೇಳಲಾಗಿದೆ.

‘ಎಲ್​ 2: ಎಂಪುರಾನ್’ ಚಿತ್ರವನ್ನು ಆ್ಯಂಟೋನಿ ಪೆರಂಬವೂರ್, ಸುಬಾಸ್ಕರನ್ ಅಲಿರಾಜಾ, ಗೋಕುಲಂ ಗೋಪಾಲನ್ ಒಟ್ಟಾಗಿ ನಿರ್ಮಾಣ ಮಾಡಿದ್ದರು. ಪೃಥ್ವಿರಾಜ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಮೋಹನ್​ಲಾಲ್ ಹಾಗೂ ಪೃಥ್ವಿರಾಜ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಆರ್​ಎಸ್​ಎಸ್ ಸೇರಿದಂತೆ ಅನೇಕ ಬಲ ಪಂಥೀಯ ಸಂಘಟನೆಗಳು ಸಿನಿಮಾನ ವಿರೋಧಿಸಿದ್ದರು. ಈ ಬೆನ್ನಲ್ಲೇ ಇಡಿ ದಾಳಿ ನಡೆದಿದ್ದು ಸಹಜವಾಗಿಯೇ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ
Image
‘ಬಾಯ್ಸ್ vs ಗರ್ಲ್ಸ್’ ಶೋಗೆ ರಜತ್ ಹಾಜರ್; ವಿನಯ್ ಗೌಡ ಅಬ್ಸೆಂಟ್
Image
‘ಎಷ್ಟೇ ಎತ್ತರಕ್ಕೆ ಬೆಳೆದರೂ..’; ಯಶ್ ಸಹಾಯ ನೆನೆದ ಅಜಯ್ ರಾವ್
Image
‘ಬಜರಂಗಿ ಭಾಯಿಜಾನ್’ ಆಫರ್ ಮೊದಲು ಹೋಗಿದ್ದು ಆಮಿರ್ ಬಳಿ
Image
ಎಲ್2: ಎಂಪುರಾನ್: ಬಿಜೆಪಿ ವಿರೋಧಕ್ಕೆ ಮಣಿದ ಮೋಹನ್​ಲಾಲ್ 24 ಕಡೆ ಕತ್ತರಿ

ಇದನ್ನೂ ಓದಿ: ಎಲ್2: ಎಂಪುರಾನ್: ಬಿಜೆಪಿ ವಿರೋಧಕ್ಕೆ ಮಣಿದ ಮೋಹನ್​ಲಾಲ್ 24 ಕಡೆ ಕತ್ತರಿ

ವಿರೋಧಾತ್ಮಕ ದೃಶ್ಯ ಏನಿತ್ತು?

ಹಿಂದೂ ತೀವ್ರಗಾಮಿತನವನ್ನು ಟೀಕಿಸುವ ರೀತಿಯಲ್ಲಿ ಕೆಲವು ದೃಶ್ಯಗಳು ಚಿತ್ರದಲ್ಲಿ ಇವೆ ಎನ್ನಲಾಗಿದೆ. ಹಿಂದೂ ಒಬ್ಬನನ್ನು ಮುಸ್ಲಿಂ ವಿರೋಧಿಯಾಗಿ ತೋರಿಸಲಾಗಿದೆ. ಬಾಬಾ ಒಬ್ಬರು ಮುಸ್ಲಿಂ ಗರ್ಭಿಣಿಯನ್ನು ಕೊಲ್ಲುವ ದೃಶ್ಯವಿದೆ. ಈ ರೀತಿಯ ಅನೇಕ ದೃಶ್ಯಗಳು ಸಿನಿಮಾದಲ್ಲಿ ಇತ್ತು ಎನ್ನಲಾಗಿದೆ. ಹೀಗಾಗಿ, ‘ಎಂಪುರಾನ್’ ಸಿನಿಮಾ ಬಿಜೆಪಿಗೆ ಹಾಗೂ ಹಿಂದೂ ರಕ್ಷಕರಿಗೆ ವ್ಯತಿರಿಕ್ತವಾಗಿ ಮಾಡಲಾಗಿದೆ ಎಂಬ ಆರೋಪ ಎದುರಾಯಿತು. ಆ ಬಳಿಕ ಕ್ಷಮೆ ಕೇಳಿದ್ದ ತಂಡ, ದೃಶ್ಯಕ್ಕೆ ಕತ್ತರಿ ಹಾಕಲು ಒಪ್ಪಿತ್ತು. ಈ ರೀತಿಯ ದೃಶ್ಯಗಳನ್ನು ಕತ್ತರಿಸಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:59 pm, Fri, 4 April 25

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ