Laal Salaam Movie: ಮೊಹಿದ್ದೀನ್ ಭಾಯ್ ಆಗಿ ಬಂದ ರಜನಿಕಾಂತ್; ‘ಲಾಲ್ ಸಲಾಮ್’ ಚಿತ್ರದಲ್ಲಿ ಹೊಸ ಗೆಟಪ್

ರಜನಿಕಾಂತ್ ಅವರು ‘ಲಾಲ್ ಸಲಾಮ್’ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಪಾತ್ರ ಮಾಡುತ್ತಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ರಜನಿಕಾಂತ್ ಅವರು ತಲೆಗೆ ಟೋಪಿ ಧರಿಸಿದ್ದಾರೆ.

Laal Salaam Movie: ಮೊಹಿದ್ದೀನ್ ಭಾಯ್ ಆಗಿ ಬಂದ ರಜನಿಕಾಂತ್; ‘ಲಾಲ್ ಸಲಾಮ್’ ಚಿತ್ರದಲ್ಲಿ ಹೊಸ ಗೆಟಪ್
ರಜನಿಕಾಂತ್
Follow us
|

Updated on:May 08, 2023 | 8:41 AM

ನಟ ರಜನಿಕಾಂತ್​ಗೆ (Rajinikanth) ಈಗ ವಯಸ್ಸು 72. ಆದಾಗ್ಯೂ ಅವರು ಸಿನಿಮಾ ಕೃಷಿಯನ್ನು ನಿಲ್ಲಿಸಿಲ್ಲ. ಈಗಲೂ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಹೊಸಹೊಸ ಪಾತ್ರ ಮಾಡುತ್ತಿದ್ದಾರೆ. ಅವರ ಎನರ್ಜಿ ಕಡಿಮೆ ಆಗುವಂಥದ್ದಲ್ಲ. ಈಗ ರಜನಿಕಾಂತ್ ಅವರು ‘ಲಾಲ್ ಸಲಾಮ್’ ಸಿನಿಮಾದಲ್ಲಿ (Laal Salaam Movie) ನಟಿಸುತ್ತಿದ್ದಾರೆ. ಅವರ ಮಗಳು ಐಶ್ವರ್ಯಾ ರಜನಿಕಾಂತ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಒಂದು ಮುಖ್ಯ ಅತಿಥಿ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ.

ರಜನಿಕಾಂತ್ ಅವರು ‘ಲಾಲ್ ಸಲಾಮ್’ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಪಾತ್ರ ಮಾಡುತ್ತಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ರಜನಿಕಾಂತ್ ಅವರು ತಲೆಗೆ ಟೋಪಿ ಧರಿಸಿದ್ದಾರೆ. ಹಿಂಭಾಗದಲ್ಲಿ ಜನರು ಧಂಗೆ ಎದ್ದಿರುವ ಫೋಟೋ ಇದೆ. ತಳ್ಳುವ ಗಾಡಿಗಳಿಗೆ ಬೆಂಕಿ ಇಡಲಾಗಿದೆ. ಅಷ್ಟೇ ಅಲ್ಲ ಪತ್ರಿಕೆ ಒಂದನ್ನು ತೋರಿಸಲಾಗಿದ್ದು, ‘ಮುಂಬೈ ನಿಯಂತ್ರಣದಲ್ಲಿದೆ’ ಎಂದು ಬರೆಯಲಾಗಿದೆ. ಜೊತೆಗೆ ‘ಮೊಹಿದ್ದೀನ್​ ಬಂದಾಗಿದೆ’ ಎನ್ನುವ ಕ್ಯಾಪ್ಶನ್ ಇದೆ.

‘ಲಾಲ್ ಸಲಾಮ್’ ಸಿನಿಮಾದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಅವರು ಮುಖ್ಯಭೂಮಿಕೆಯಲ್ಲಿದ್ದಾರೆ. ಆಸ್ಕರ್ ವಿಜೇತ ಎಆರ್​ ರೆಹಮಾನ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ವಿಷ್ಣು ರಂಗಸ್ವಾಮಿ ಅವರ ಛಾಯಾಗ್ರಹಣ ಇದೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ: ಐಶ್ವರ್ಯಾ ರಜನಿಕಾಂತ್​ ಮನೆಯಲ್ಲಿ ಕಳ್ಳತನ ಮಾಡಿದ ಆರೋಪದಲ್ಲಿ ಇಬ್ಬರ ಬಂಧನ

ರಜನಿಕಾಂತ್ ಹಿರಿ ಮಗಳು ಐಶ್ವರ್ಯಾ ಅವರು ‘ಲಾಲ್ ಸಲಾಮ್’ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಅವರು ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಮಗಳಿಗೋಸ್ಕರ ಅವರು ಈ ಸಿನಿಮಾ ಒಪ್ಪಿಕೊಂಡಿದ್ದಾರೆ. ಇನ್ನು ರಜನಿಕಾಂತ್ ಹಾಗೂ ಲೈಕಾ ಪ್ರೊಡಕ್ಷನ್ ಜೊತೆ ಒಳ್ಳೆಯ ನಂಟಿದೆ. ಅವರ ಕೆಲವು ಸಿನಿಮಾಗಳಿಗೆ ಈ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಿತ್ತು. ಈಗ ಅವರು ಮತ್ತೊಮ್ಮೆ ಲೈಕಾ ಜೊತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:22 am, Mon, 8 May 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ