AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬ್ಯಾಕ್​ಗೆ ಶಾರುಖ್ ಖಾನ್ ತಂತ್ರವನ್ನೇ ಬಳಸಲಿದ್ದಾರೆ ಆಮಿರ್ ಖಾನ್? ಕಾಯಬೇಕು ಇನ್ನಷ್ಟು ವರ್ಷ

‘ಥಗ್ಸ್ ಆಫ್ ಹಿಂದೂಸ್ತಾನ್​’ ಸಿನಿಮಾ ಸೋತಿತ್ತು. 2018ರಲ್ಲಿ ಬಂದ ಈ ಚಿತ್ರದಿಂದ ಆಮಿರ್ ಖಾನ್​ ವೃತ್ತಿಜೀವನಕ್ಕೆ ಹಿನ್ನಡೆ ಆಯಿತು. ಆದರೂ ಅವರು ಸುಮ್ಮನೆ ಕೂತಿರಲಿಲ್ಲ. ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಒಪ್ಪಿಕೊಂಡರು.

ಕಂಬ್ಯಾಕ್​ಗೆ ಶಾರುಖ್ ಖಾನ್ ತಂತ್ರವನ್ನೇ ಬಳಸಲಿದ್ದಾರೆ ಆಮಿರ್ ಖಾನ್? ಕಾಯಬೇಕು ಇನ್ನಷ್ಟು ವರ್ಷ
ಆಮಿರ್ ಖಾನ್-ಶಾರುಖ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Jan 28, 2023 | 5:00 PM

ಚಿತ್ರರಂಗದಲ್ಲಿ ಯಶಸ್ಸು ಯಾವಾಗಲೂ ಜೊತೆಯಲ್ಲೇ ಇರುವುದಿಲ್ಲ. ಕೆಲವೊಮ್ಮೆ ಸೋಲು ಬೆನ್ನು ಹತ್ತಿದರೆ ಯಶಸ್ಸು ಸಿಗುವುದು ಅಷ್ಟು ಸುಲಭವಲ್ಲ. ಶಾರುಖ್ ಖಾನ್ (Shah Rukh Khan) ಅವರಿಗೂ ಹೀಗೆಯೇ ಆಗಿತ್ತು. ಅವರ ನಟನೆಯ ಸಾಲು ಸಾಲು ಸಿನಿಮಾಗಳು ಸೋತವು. 2018ರಲ್ಲಿ ಬಂದ ‘ಜೀರೋ’ ಸಿನಿಮಾ (Zero Movie) ಹೀನಾಯವಾಗಿ ಸೋಲು ಕಂಡಿತು. ಇದು ಅವರಿಗೆ ಬೇಸರ ಮೂಡಿಸಿತ್ತು. ಈ ಕಾರಣಕ್ಕೆ ಅವರು ನಾಲ್ಕು ವರ್ಷ ಬ್ರೇಕ್ ತೆಗೆದುಕೊಂಡರು. ಈಗ ಆಮಿರ್ ಖಾನ್ ಕೂಡ ಇದೇ ತಂತ್ರ ಉಪಯೋಗಿಸಲಿದ್ದಾರೆ ಎನ್ನಲಾಗುತ್ತಿದೆ.

‘ಥಗ್ಸ್ ಆಫ್ ಹಿಂದೂಸ್ತಾನ್​’ ಸಿನಿಮಾ ಸೋತಿತ್ತು. 2018ರಲ್ಲಿ ಬಂದ ಈ ಚಿತ್ರದಿಂದ ಆಮಿರ್ ಖಾನ್​ ವೃತ್ತಿಜೀವನಕ್ಕೆ ಹಿನ್ನಡೆ ಆಯಿತು. ಆದರೂ ಅವರು ಸುಮ್ಮನೆ ಕೂತಿರಲಿಲ್ಲ. ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಒಪ್ಪಿಕೊಂಡರು. ಈ ಚಿತ್ರ ಕೂಡ ನೆಲಕಚ್ಚಿತು. ​ಇದರಿಂದ ಆಮಿರ್ ಖಾನ್ ಬೇಸರಗೊಂಡಿದ್ದಾರೆ. ಹೀಗಾಗಿ, ಅವರು ಲಾಂಗ್ ಬ್ರೇಕ್​ ತೆಗೆದುಕೊಂಡಿದ್ದಾರೆ.

ಶಾರುಖ್ ಖಾನ್ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡ ನಂತರದಲ್ಲಿ ಸಾಕಷ್ಟು ಆಲೋಚಿಸಿ ‘ಪಠಾಣ್​’ ಚಿತ್ರವನ್ನು ಒಪ್ಪಿಕೊಂಡಿದ್ದರು. ಅದೇ ರೀತಿ ಆಮಿರ್ ಖಾನ್ ಕೂಡ ಈ ಲಾಂಗ್​ ಬ್ರೇಕ್​​ನಲ್ಲಿ ಹೆಚ್ಚು ಆಲೋಚಿಸಿ ಹೊಸ ಸಿನಿಮಾ ಒಪ್ಪಿಕೊಳ್ಳಲಿದ್ದಾರಂತೆ. ಅಲ್ಲಿಯವರೆಗೆ ಕುಟುಂಬದ ಜತೆ ಅವರು ಸಮಯ ಕಳೆಯಲಿದ್ದಾರೆ. ಇತ್ತೀಚೆಗೆ ಅವರು ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು.

ಆಮಿರ್ ಏನ್ ಹೇಳಿದ್ರು?

‘ನಟನಾಗಿ ಸಿನಿಮಾ ಮಾಡುತ್ತಿದ್ದೇನೆ ಎಂದಾಗ ನಾನು ಅದರಲ್ಲೇ ಕಳೆದು ಹೋಗುತ್ತೇನೆ. ಆಗ ನನ್ನ ಜೀವನದಲ್ಲಿ ಬೇರೆ ಏನೂ ಇರುವುದಿಲ್ಲ. ‘ಲಾಲ್ ಸಿಂಗ್ ಚಡ್ಡಾ’ ನಂತರ ‘ಚಾಂಪಿಯನ್ಸ್​’ ಹೆಸರಿನ ಸಿನಿಮಾ ಮಾಡಬೇಕಿತ್ತು. ಅದು ಅದ್ಭುತ ಸ್ಕ್ರಿಪ್ಟ್ ಆಗಿತ್ತು. ಆದರೆ, ನನಗೆ ಬ್ರೇಕ್ ತೆಗೆದುಕೊಳ್ಳಬೇಕು ಎಂದು ಅನಿಸುತ್ತಿದೆ. ನನ್ನ ಕುಟುಂಬದ ಜತೆ ಸಮಯ ಕಳೆಯಬೇಕಿದೆ’ ಎಂದು ಆಮಿರ್ ಖಾನ್ ಹೇಳಿದ್ದರು.

‘ಕಳೆದ 35 ವರ್ಷಗಳಿಂದ ದುಡಿಯುತ್ತಿದ್ದೇನೆ. ಅಷ್ಟೂ ವರ್ಷ ನಾನು ನನ್ನ ಕೆಲಸದಮೇಲೆ ಗಮನ ಹರಿಸಿದೆ. ನನ್ನ ಜತೆ ಕ್ಲೋಸ್ ಆಗಿರುವವರಿಗೆ ನಾನು ಅನ್ಯಾಯ ಮಾಡುತ್ತಿದ್ದೇನೆ ಅನಿಸಿತು. ಅವರ ಜತೆ ಸಮಯ ಕಳೆಯಬೇಕಿದೆ. ಒಂದೂವರೆ ವರ್ಷ ನಾನು ಸಿನಿಮಾ ಮಾಡುವುದಿಲ್ಲ’ ಎಂದಿದ್ದರು ಆಮಿರ್ ಖಾನ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ