ಸಮಂತಾ ದೂರಾದ ಬಳಿಕ ನಾಗ ಚೈತನ್ಯ ಜತೆ ಖಾಸಗಿ ವಿಮಾನದಲ್ಲಿ ಕಾಣಿಸಿಕೊಂಡ ಈ ಸುಂದರಿ ಯಾರು?

ನಾಗ ಚೈತನ್ಯ ಮತ್ತು ನಾಗಾರ್ಜುನ ಅವರನ್ನು ಕಂಡರೆ ಲಹರಿ ಶರಿ ಅವರಿಗೆ ಸಖತ್​ ಅಭಿಮಾನ. ಈ ಸೆಲೆಬ್ರಿಟಿಗಳ ಜೊತೆ ದಿನ ಕಳೆಯಬೇಕು ಎಂಬುದು ಅವರ ಕನಸಾಗಿತ್ತು.

ಸಮಂತಾ ದೂರಾದ ಬಳಿಕ ನಾಗ ಚೈತನ್ಯ ಜತೆ ಖಾಸಗಿ ವಿಮಾನದಲ್ಲಿ ಕಾಣಿಸಿಕೊಂಡ ಈ ಸುಂದರಿ ಯಾರು?
ನಾಗ ಚೈತನ್ಯ, ಲಹರಿ ಶರಿ, ನಾಗಾರ್ಜುನ
Follow us
| Updated By: ಮದನ್​ ಕುಮಾರ್​

Updated on: Jan 09, 2022 | 8:58 AM

ಟಾಲಿವುಡ್​ ನಟ ನಾಗ ಚೈತನ್ಯ (Naga Chaitanya) ಅವರ ಬದುಕಿನಲ್ಲಿ ಈ ರೀತಿ ಆಗುತ್ತದೆ ಎಂದು ಅವರ ಫ್ಯಾನ್ಸ್​ ಊಹಿಸಿರಲಿಲ್ಲ. ಪ್ರೀತಿಸಿ ಮದುವೆಯಾದ ಸಮಂತಾ (Samantha) ಅವರು ವಿಚ್ಛೇದನ ಪಡೆದು ದೂರಾದರು. ಡಿವೋರ್ಸ್​ ಆದ ಬಳಿಕ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಅನೇಕ ಚಟುವಟಿಕೆಗಳಲ್ಲಿ ಅವರು ಭಾಗವಹಿಸುತ್ತಿದ್ದಾರೆ. ಆದರೆ ನಾಗ ಚೈತನ್ಯ ಸ್ವಲ್ಪ ಸೈಲೆಂಟ್​ ಆಗಿದ್ದಾರೆ. ಅವರು ಯಾರನ್ನು ಕೈ ಹಿಡಿಯಬಹುದು ಎಂಬ ದೊಡ್ಡ ಪ್ರಶ್ನೆ ಎಲ್ಲರ ಮುಂದಿದೆ. ಈ ಸಂದರ್ಭದಲ್ಲಿ ನಾಗ ಚೈತನ್ಯ ಯಾವುದೇ ಹುಡುಗಿಯ ಜೊತೆ ಕಾಣಿಸಿಕೊಂಡರೂ ಜನರು ಕಣ್ಣರಳಿಸಿ ನೋಡುತ್ತಾರೆ. ಈಗ ನಟಿ, ನಿರೂಪಕಿ ಲಹರಿ ಶರಿ (Lahari Shari) ಅವರು ನಾಗ ಚೈತನ್ಯ ಅವರ ಖಾಸಗಿ ವಿಮಾನದಲ್ಲಿ (Naga Chaitanya Private Flight) ಸುತ್ತಾಟ ನಡೆಸಿದ ಫೋಟೋ ವೈರಲ್​ ಆಗಿದೆ..

ತೆಲುಗು ಚಿತ್ರರಂಗದಲ್ಲಿ ಲಹರಿ ಶರಿ ಫೇಮಸ್​ ಆಗಿದ್ದಾರೆ. ನಟಿಯಾಗಿ, ನಿರೂಪಕಿಯಾಗಿ, ಬಿಗ್​ ಬಾಸ್​ ಸ್ಪರ್ಧಿಯಾಗಿ ಅವರು ಗಮನ ಸೆಳೆದಿದ್ದಾರೆ. ಈಗ ಲಹರಿ ಶರಿಗೆ ನಾಗ ಚೈತನ್ಯ ಅವರ ಖಾಸಗಿ ವಿಮಾನದಲ್ಲಿ ಹಾರಾಡುವ ಅವಕಾಶ ಸಿಕ್ಕಿದೆ. ಈ ವೇಳೆ ಅಕ್ಕಿನೇನಿ ನಾಗಾರ್ಜುನ ಕೂಡ ಜೊತೆಗಿದ್ದರು. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಏನಿದು ಸಮಾಚಾರ ಎಂದು ಕೆದಕಿ ನೋಡಿದರೆ ಅಸಲಿ ವಿಚಾರ ತಿಳಿಯುತ್ತದೆ.

ನಾಗ ಚೈತನ್ಯ ಮತ್ತು ನಾಗಾರ್ಜುನ ಅವರನ್ನು ಕಂಡರೆ ಲಹರಿ ಶರಿ ಅವರಿಗೆ ಸಖತ್​ ಅಭಿಮಾನ. ಈ ಸೆಲೆಬ್ರಿಟಿಗಳ ಜೊತೆ ದಿನ ಕಳೆಯಬೇಕು ಎಂಬುದು ಅವರ ಕನಸಾಗಿತ್ತು. ಅದೀಗ ಈಡೇರಿದೆ. ‘ಬಂಗಾರ‍್ರಾಜು’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಾಗ ಚೈತನ್ಯ ಮತ್ತು ನಾಗಾರ್ಜುನ ಭಾಗವಹಿಸುತ್ತಿದ್ದಾರೆ. ಅದರಲ್ಲಿ ಲಹರಿ ಶರಿ ಕೂಡ ಪಾಲ್ಗೊಂಡಿದ್ದಾರೆ. ಪ್ರಚಾರದ ಸಲುವಾಗಿ ಊರೂರು ಸುತ್ತುತ್ತಿರುವ ತಂದೆ-ಮಗನ ಜೊತೆ ಖಾಸಗಿ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಲಹರಿ ಶರಿ ಅವರಿಗೂ ಸಿಕ್ಕಿದೆ. ಆ ಫೋಟೋಗಳು ಈಗ ವೈರಲ್​ ಆಗಿವೆ.

‘ಕನಸು ನನಸಾಯಿತು. ಇಡೀ ದಿನ ನಿಮ್ಮ ಜೊತೆ ಕಳೆಯುವ ಅವಕಾಶ ನೀಡಿದ್ದಕ್ಕಾಗಿ ನಾಗಾರ್ಜುನ ಸರ್​ ಮತ್ತು ನಾಗ ಚೈತನ್ಯ ಸರ್​ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ದಿನವನ್ನು ಸ್ಮರಣೀಯವಾಗಿಸಿದ್ದೀರಿ. ಲವ್​ ಅಕ್ಕಿನೇನೀಸ್​’ ಎಂದು ಲಹರಿ ಶರಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ:

‘ಹು ಅಂತೀಯಾ ಮಾವ’ ಹಾಡಿನ ಮೇಲೆ ಕಾಪಿ ಆರೋಪ; ವೈರಲ್​ ಆಗುತ್ತಿದೆ ಹೋಲಿಕೆಯ ವಿಡಿಯೋ

‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು