AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ನಟಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಬಿಜೆಪಿ

ಐಷಾ ನೀಡಿದ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಅಲ್ಲದೆ, ಇದು ವಿವಾದಾತ್ಮಕ ಹೇಳಿಕೆ ಎಂದು ಲಕ್ಷದ್ವೀಪದಲ್ಲಿ ಪ್ರತಿಭಟನೆಗಳು ನಡೆದಿದ್ದವು.

ಕೊವಿಡ್​ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ನಟಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಬಿಜೆಪಿ
ಐಷಾ ಸುಲ್ತಾನ
ರಾಜೇಶ್ ದುಗ್ಗುಮನೆ
|

Updated on: Jun 11, 2021 | 6:58 PM

Share

ಕೊವಿಡ್​ ವಿಚಾರದಲ್ಲಿ ಕೇಂದ್ರದ ವಿರುದ್ಧ ಮಾತನಾಡಿದ್ದ ಲಕ್ಷದ್ವೀಪದ ಮಾಡೆಲ್​ ಹಾಗೂ ನಟಿ ಐಷಾ ಸಲ್ತಾನ​ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಸದ್ಯ, ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಅನೇಕರು ಟ್ವಿಟರ್​ನಲ್ಲಿ ಈ ಬಗ್ಗೆ ಪರ-ವಿರೋಧ ಚರ್ಚೆ ಮಾಡುತ್ತಿದ್ದಾರೆ.

ಐಷಾ ಇತ್ತೀಚೆಗೆ ಮಾಧ್ಯಮವೊಂದರ ಚರ್ಚೆಯಲ್ಲಿ ಭಾಗಿಯಾಗಿದ್ದರು. ಮಾತಿನ ಭರದಲ್ಲಿ, ‘ಲಕ್ಷದ್ವೀಪದಲ್ಲಿ ಕೊರೊನಾ ಹೆಚ್ಚಲು ಇಲ್ಲಿನ ಅಡ್ಮಿನಿಸ್ಟ್ರೇಟರ್​ ಪ್ರಫುಲ್​ ಪಟೇಲ್​ ಅವರ ನಿರ್ಧಾರವೇ ಕಾರಣ. ಮತ್ತು ಲಕ್ಷದ್ವೀಪದ ವಿರುದ್ಧ ಕೇಂದ್ರ ಸರ್ಕಾರ ಬಯೋ ವೆಪನ್​ ಬಳಕೆ ಮಾಡಿದೆ. ಆರಂಭದಲ್ಲಿ ಇಲ್ಲಿ ಕೊವಿಡ್​ ಕೇಸ್​ಗಳು ಇರಲೇ ಇಲ್ಲ. ಈಗ ನಿತ್ಯ ನೂರು ಪ್ರಕರಣಗಳು ಬರುತ್ತಿವೆ’ ಎಂದು ಹೇಳಿದ್ದರು.

ಐಷಾ ನೀಡಿದ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಅಲ್ಲದೆ, ಇದು ವಿವಾದಾತ್ಮಕ ಹೇಳಿಕೆ ಎಂದು ಲಕ್ಷದ್ವೀಪದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ದೇಶದ್ರೋಹ ಪ್ರಕರಣ ದಾಖಲಿಸಿದೆ.

‘ನನ್ನ ವಿರುದ್ಧ ಬಿಜೆಪಿ ಕಾರ್ಯಕರ್ತರು ದೇಶದ್ರೋಹದ ಪ್ರಕರಣ ದಾಖಲು ಮಾಡಿದ್ದಾರೆ. ಆದರೆ ಯಾವಾಗಲೂ ಸತ್ಯವೇ ಗೆಲುವು ಕಾಣುತ್ತದೆ.  ನಾನು ಹುಟ್ಟಿದ ಭೂಮಿಗಾಗಿ ಫೈಟ್​ ಮಾಡುತ್ತೇನೆ. ನನ್ನಲ್ಲಿ ಈಗ ಯಾವುದೇ ಭಯ ಉಳಿದುಕೊಂಡಿಲ್ಲ. ನನ್ನ ಧ್ವನಿ ಮತ್ತಷ್ಟು ದೊಡ್ಡದಾಗಲಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Rocketry Trailer: ದೇಶದ್ರೋಹ ಆರೋಪ ಹೊತ್ತಿದ್ದ ನಂಬಿ ನಾರಾಯಣ್​ ಬಗ್ಗೆ ಮಾಧವನ್​ ಸಿನಿಮಾ! ‘ರಾಕೆಟ್ರಿ’ ಚಿತ್ರದ ರಿಯಲ್​ ಕಥೆ ಏನು?

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ