AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exclusive: ಮದುವೆಗಾಗಿ ಸೀರಿಯಲ್​ ಬಿಟ್ಟುಬಂದ ಚಂದನ್​! ಹುಡುಗಿ ಕವಿತಾನಾ ಅಂತ ಕೇಳಿದ್ದಕ್ಕೆ ಅವರು ಹೇಳಿದ್ದೇನು?

‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ನಟ ಚಂದನ್​ ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ. ಮದುವೆ ಸಲುವಾಗಿ ಅವರು ನಟನೆಯಿಂದ ಸ್ವಲ್ಪ ದಿನ ಗ್ಯಾಪ್​ ತೆಗೆದುಕೊಳ್ಳುತ್ತಿದ್ದಾರೆ.

Exclusive: ಮದುವೆಗಾಗಿ ಸೀರಿಯಲ್​ ಬಿಟ್ಟುಬಂದ ಚಂದನ್​! ಹುಡುಗಿ ಕವಿತಾನಾ ಅಂತ ಕೇಳಿದ್ದಕ್ಕೆ ಅವರು ಹೇಳಿದ್ದೇನು?
ಚಂದನ್​ ಕುಮಾರ್​ ಕವಿತಾ ಗೌಡ
ಮದನ್​ ಕುಮಾರ್​
| Edited By: |

Updated on: Mar 12, 2021 | 8:08 AM

Share

ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಫೇಮಸ್​ ಆಗಿರುವ ನಟ ಚಂದನ್​ ಕುಮಾರ್​ ಅವರು ಈಗೊಂದು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಮದುವೆ ಮತ್ತು ವೈಯಕ್ತಿಕ ಜೀವನದ ಕಾರಣಕ್ಕಾಗಿ ತೆಲುಗಿನ ‘ಸಾವಿತ್ರಮ್ಮಗಾರಿಕಿ ಅಬ್ಬಾಯಿ’ ಸೀರಿಯಲ್​ನಿಂದ ಹೊರಬಂದಿದ್ದಾರೆ!

‘ಸಾವಿತ್ರಮ್ಮಗಾರಿಕಿ ಅಬ್ಬಾಯಿ’ ಧಾರಾವಾಹಿಯ 500ಕ್ಕೂ ಹೆಚ್ಚು ಎಪಿಸೋಡ್​ಗಳಲ್ಲಿ ಚಂದನ್​ ನಟಿಸಿದ್ದಾರೆ. ಆ ಧಾರಾವಾಹಿಯಲ್ಲಿ ಈಗ ಅವರ ಪಾತ್ರ ಅಂತ್ಯವಾಗುತ್ತಿದೆ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ಚಂದನ್​ ಟಿವಿ9 ಕನ್ನಡ ಡಿಜಿಟಲ್​​ಗೆ ಮಾಹಿತಿ ನೀಡಿದ್ದಾರೆ. ಮದುವೆ ಆಗಬೇಕು ಎಂದು ಅವರು ನಿರ್ಧರಿಸಿದ್ದಾರೆ. ಹಾಗಾದರೆ ಅವರನ್ನು ಕೈ ಹಿಡಿಯುವ ಹುಡುಗಿ ಯಾರು ಎಂಬ ಪ್ರಶ್ನೆ ಈಗ ಉದ್ಭವ ಆಗಿದೆ. ನಟಿ ಕವಿತಾ ಗೌಡ ಇರಬಹುದಾ ಎನ್ನುವ ಅನುಮಾನ ಕೂಡ ಮೂಡಿದೆ.

‘ಲಕ್ಷ್ಮೀ ಬಾರಮ್ಮ’ ಸೀರಿಯಲ್​ ಕಾಲದಿಂದಲೂ ಕವಿತಾ ಗೌಡ ಮತ್ತು ಚಂದನ್​ ನಡುವೆ ಸ್ನೇಹ ಬೆಳೆದಿತ್ತು. ಅವರಿಬ್ಬರು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್​ ಕೂಡ ಆಗಾಗ ಕೇಳಿಬರುತ್ತಲೇ ಇತ್ತು. ಒಬ್ಬರು ಜೊತೆಯಾಗಿ ಹಲವು ಬಾರಿ ಕಾಣಿಸಿಕೊಂಡಿದ್ದರು. ಇಬ್ಬರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅನೇಕ ಫೋಟೋಗಳು ಇದಕ್ಕೆ ಸಾಕ್ಷಿ ಒದಗಿಸುತ್ತಿವೆ. ಆದರೆ ಯಾವತ್ತೂ ಕೂಡ ಚಂದನ್​ ಮತ್ತು ಕವಿತಾ ಈ ಬಗ್ಗೆ ಅಧಿಕೃತವಾಗಿ ಬಾಯಿ ಬಿಟ್ಟಿರಲಿಲ್ಲ.

ಚಂದನ್​ ಗುರುವಾರ (ಮಾ.11) ತೆಲುಗು ಸೀರಿಯಲ್​ಗೆ ಕೊನೇ ದಿನದ ಶೂಟಿಂಗ್​ ಮುಗಿಸಿಕೊಟ್ಟು ಬಂದಿದ್ದಾರೆ. ಯಾಕೆ ಎಂದು ಕೇಳಿದ್ದಕ್ಕೆ ಅವರು ಮದುವೆ ಮತ್ತು ಪರ್ಸನಲ್​ ಲೈಫ್​ನ ಕಾರಣ ನೀಡಿದ್ದಾರೆ. ‘ನಂಗೆ ಸ್ವಲ್ಪ ಫ್ರೀಡಂ ಬೇಕಾಗಿತ್ತು. ಮದುವೆ ಪ್ಲ್ಯಾನ್​ ಕೂಡ ನಡೆಯುತ್ತಿದೆ. ಪರ್ಸನಲ್​ ಜೀವನದ ಕಡೆಗೆ ಗಮನ ಹರಿಸಬೇಕು. ಇದನ್ನು ನಾನು ಧಾರಾವಾಹಿ ಟೀಮ್​ನವರಿಗೆ ಮೊದಲೇ ಹೇಳಿದ್ದೆ. ಅದಕ್ಕೆ ತಕ್ಕಂತೆ ಕಥೆಯಲ್ಲಿ ಬದಲಾವಣೆ ಮಾಡಿಕೊಂಡರು’ ಎಂದು ಚಂದನ್ ಹೇಳಿದ್ದಾರೆ.

ಚಂದನ್​ ಲವ್​ ಮ್ಯಾರೇಜ್​ ಆಗುತ್ತಾರಾ? ಕವಿತಾ ಗೌಡ ಜೊತೆ ಹೊಸ ಜೀವನ ಆರಂಭಿಸುತ್ತಾರಾ? ಈ ಪ್ರಶ್ನೆಗಳಿಗೆ ಈಗಲೇ ಉತ್ತರ ಕೊಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಹಾಗಂತ ಅವರು ಎಲ್ಲವನ್ನೂ ಖಡಾಖಂಡಿತವಾಗಿ ನಿರಾಕರಿಸಿಲ್ಲ. ‘ಮದುವೆ ಆಗಬೇಕು ಅಂತ ನಿರ್ಧರಿಸಿರುವುದು ನಿಜ. ಸ್ವಲ್ಪ ದಿನ ಮುಂಚೆ ಆರಾಮಾಗಿ, ಸ್ಟೈಲಿಶ್​ ಆಗಿ ಓಡಾಡಿಕೊಂಡು ಇರೋಣ ಅಂದುಕೊಂಡಿದ್ದೇನೆ. ಸೀರಿಯಲ್​ ಮಾಡುವಾಗ ಆ ಪಾತ್ರಕ್ಕೆ ತಕ್ಕಂತೆ ನಾವು ಇರಬೇಕಾಗುತ್ತದೆ. ಅದರಿಂದ ಆಚೆ ಬಂದು ಇನ್ನು ಮೂರು-ನಾಲ್ಕು ತಿಂಗಳು ಆರಾಮಾಗಿದ್ದು, ಹೋಟೆಲ್​ ಬ್ಯುಸಿನೆಸ್​ ಇನ್ನಷ್ಟು ವಿಸ್ತರಿಸಿ, ಆಮೇಲೆ ಸಿನಿಮಾ ಕಡೆಗೆ ಗಮನ ಹರಿಸುತ್ತೇನೆ‘ ಎಂಬುದು ಚಂದನ್​ ಮಾತು.

ತಾವು ಮದುವೆ ಆಗುವ ಹುಡುಗಿ ಕವಿತಾ ಹೌದೋ ಅಲ್ಲವೋ ಎಂಬ ಬಗ್ಗೆ ಚಂದನ್​ ಹೌದು ಎಂದೂ ಹೇಳಿಲ್ಲ, ಅಲ್ಲ ಎಂದೂ ಹೇಳಿಲ್ಲ. ‘ಯೆಸ್​ ಎಂದರೆ ಅದೇ ಸುದ್ದಿ ಹಬ್ಬುತ್ತದೆ. ನೋ ಎಂದರೆ ಮತ್ತಿನ್ಯಾರು ಎಂಬ ಪ್ರಶ್ನೆ ಉದ್ಬವ ಆಗುತ್ತದೆ. ಈ ಎರಡೂ ಬೇಡ’ ಎನ್ನುವ ಮೂಲಕ ಕೌತುಕದ ಕಿಚ್ಚು ಹಚ್ಚಿದ್ದಾರೆ ಚಂದನ್​.

ಇದನ್ನೂ ಓದಿ: Roberrt Kannada Movie Review: ಒಂದೇ ಟಿಕೆಟ್​ನಲ್ಲಿ ದರ್ಶನ್​ ಫ್ಯಾನ್ಸ್​ಗೆ ರಾಬರ್ಟ್​ ಮತ್ತು ರಾಘವನ ಡಬಲ್​ ಧಮಾಕಾ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್