AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಧರಿಸಿ ಮನಬಂದಂತೆ ಕುಣಿದು ಕುಪ್ಪಳಿಸಿದ ನಟಿ; ಈ ಅವತಾರ ಕಂಡು ಫ್ಯಾನ್ಸ್​​ ಹೇಳಿದ್ದೇನು?

Lakshmi Manchu: ‘ಕ್ರೇಜಿ ಆಗಿರಿ. ನಿಮ್ಮನ್ನು ಯಾರೂ ನೋಡುತ್ತಿಲ್ಲ ಎಂಬಂತೆ ಡ್ಯಾನ್ಸ್​ ಮಾಡಿರಿ’ ಎಂದು ಈ ವಿಡಿಯೋಗೆ ಲಕ್ಷ್ಮೀ ಮಂಚು ಕ್ಯಾಪ್ಷನ್​ ನೀಡಿದ್ದಾರೆ. ಇದಕ್ಕೆ ಅನೇಕ ಅಭಿಮಾನಿಗಳು ಕಮೆಂಟ್​ಗಳ ಮೂಲಕ ತಮ್ಮ ಮೆಚ್ಚುಗೆ ತೋರಿಸಿದ್ದಾರೆ.

ಸೀರೆ ಧರಿಸಿ ಮನಬಂದಂತೆ ಕುಣಿದು ಕುಪ್ಪಳಿಸಿದ ನಟಿ; ಈ ಅವತಾರ ಕಂಡು ಫ್ಯಾನ್ಸ್​​ ಹೇಳಿದ್ದೇನು?
ವೈರಲ್​ ಡ್ಯಾನ್ಸ್​​ ವಿಡಿಯೋದಲ್ಲಿ ನಟಿ ಲಕ್ಷ್ಮೀ ಮಂಚು
ಮದನ್​ ಕುಮಾರ್​
|

Updated on: Jun 24, 2021 | 11:43 AM

Share

ದಕ್ಷಿಣ ಭಾರತದ ಜನಪ್ರಿಯ ನಟಿ ಲಕ್ಷ್ಮೀ ಮಂಚು ಅವರು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟೀವ್​ ಆಗಿದ್ದಾರೆ. ಸದಾ ಏನಾದರೊಂದು ಪೋಸ್ಟ್​ ಮಾಡುತ್ತ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಇತ್ತೀಚೆಗೆ ಅವರು ಮ್ಯೂಸಿಕ್​ ಡೇ ಪ್ರಯುಕ್ತ ಒಂದು ವಿಡಿಯೋ ಹಂಚಿಕೊಂಡಿದ್ದರು. ಅದನ್ನು ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಈ ವಿಡಿಯೋದಲ್ಲಿ ಲಕ್ಷ್ಮೀ ಮಂಚು ಡ್ಯಾನ್ಸ್​ ಮಾಡಿರುವ ಶೈಲಿಗೆ ಬಹುತೇಕರು ಬೆರಗಾಗಿದ್ದಾರೆ. ಚಂದದ ಸೀರೆ ಧರಿಸಿರುವ ಅವರು ತಮಗೆ ಇಷ್ಟ ಬಂದಂತೆ ಕುಣಿದಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗಿದೆ.

ಮ್ಯೂಸಿಕ್​ ಡೇ ಪ್ರಯುಕ್ತ ಕುಣಿದು ಕುಪ್ಪಳಿಸಲು ಲಕ್ಷ್ಮೀ ಮಂಚು ಆಯ್ಕೆ ಮಾಡಿಕೊಂಡಿರುವುದು ವಿಜಯ್​ ನಟನೆಯ ‘ಮಾಸ್ಟರ್​’ ಸಿನಿಮಾದ ‘ವಾಥಿ ಕಮಿಂಗ್​…’ ಹಾಡನ್ನು. ಮೂಲತಃ ತೆಲುಗು ನಟಿಯಾಗಿದ್ದರೂ ಕೂಡ ಅವರು ತಮಿಳು ಸಿನಿಮಾದ ಗೀತೆಯನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಸ್ಟೆಪ್ಸ್​ ಹಾಕಿದ್ದಾರೆ. ಹೆಚ್ಚೇನೂ ಆಡಂಬರ ಇಲ್ಲದೆ, ಮನೆಯಲ್ಲಿಯೇ ತಮಗೆ ಇಷ್ಟ ಬಂದಂತೆ ಅವರು ಕುಣಿದಿದ್ದಾರೆ. ಅದೇ ಈಗ ಹೈಲೈಟ್​ ಆಗಿದೆ. ಸಿಂಪಲ್​ ಆಗಿ ಸೀರೆ ಧರಿಸಿ ಅವರು ಮಸ್ತ್​ ಡ್ಯಾನ್ಸ್​ ಮಾಡಿದ್ದಾರೆ. ಅವರಿಗೆ ಮಗಳು ಕೂಡ ಸಾಥ್​ ನೀಡಿದ್ದಾಳೆ.

‘ಕ್ರೇಜಿ ಆಗಿರಿ. ನಿಮ್ಮನ್ನು ಯಾರೂ ನೋಡುತ್ತಿಲ್ಲ ಎಂಬಂತೆ ಡ್ಯಾನ್ಸ್​ ಮಾಡಿರಿ’ ಎಂದು ಆ ವಿಡಿಯೋಗೆ ಲಕ್ಷ್ಮೀ ಮಂಚು ಕ್ಯಾಪ್ಷನ್​ ನೀಡಿದ್ದಾರೆ. ಇದಕ್ಕೆ ಅನೇಕ ಅಭಿಮಾನಿಗಳು ಕಮೆಂಟ್​ಗಳ ಮೂಲಕ ತಮ್ಮ ಮೆಚ್ಚುಗೆ ತೋರಿಸಿದ್ದಾರೆ. ನೀವು ತುಂಬ ಹಾಟ್​ ಆಗಿ ಕಾಣುತ್ತೀರಿ, ಡ್ಯಾನ್ಸ್​ ಅದ್ಭುತವಾಗಿ ಮಾಡುತ್ತೀರಿ ಎಂದು 43ರ ಪ್ರಾಯದ ಲಕ್ಷ್ಮೀ ಮಂಚುಗೆ ಫ್ಯಾನ್ಸ್​ ಪ್ರಶಂಸೆ ನೀಡಿದ್ದಾರೆ.

ಇತ್ತೀಚೆಗೆ ನಟನೆಯಲ್ಲಿ ಲಕ್ಷ್ಮೀ ಮಂಚು ಅಷ್ಟೇನೂ ಬ್ಯುಸಿ ಆಗಿಲ್ಲ. ಸಿನಿಮಾಗಳಿಗಿಂತಲೂ ಅವರು ಜನಪರ ಕೆಲಸಗಳಲ್ಲಿ ಹೆಚ್ಚು ತೊಡಗಿಕೊಂಡಿದ್ದಾರೆ. ತಮ್ಮ ಎನ್​ಜಿಓ ಮೂಲಕ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೊವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ವಸತಿ, ಶಿಕ್ಷಣ ಮುಂತಾದ ಮೂಲಭೂತ ನೆರವುಗಳನ್ನು ನೀಡುವಲ್ಲಿ ಈ ಎನ್​ಜಿಓ ನಿರತವಾಗಿದೆ.

‘ವೈಯಕ್ತಿಕವಾಗಿ ನಾನು ಅನೇಕರಿಗೆ ಸಹಾಯ ಮಾಡುತ್ತಿದ್ದೇನೆ. ಬೆಡ್​ ವ್ಯವಸ್ಥೆ ಮಾಡುವುದರ ಜೊತೆಗೆ, ಔಷಧಿಗಳನ್ನು ಒದಗಿಸುತ್ತಿದ್ದೇನೆ. ಕೊವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಹೆಚ್ಚು ಕಷ್ಟ ಆಗುತ್ತಿದೆ. ನಮ್ಮ ಎನ್​ಜಿಓ ಕಡೆಯಿಂದ ಇಂಥ ಮಕ್ಕಳಿಗೆ ಶಿಕ್ಷಣ, ಟ್ಯೂಷನ್​, ಬಟ್ಟೆ ಮುಂತಾದನ್ನು ಒದಗಿಸುತ್ತೇವೆ’ ಎಂದು ಲಕ್ಷ್ಮೀ ಮಂಚು ಹೇಳಿದ್ದರು. ಅದರಂತೆ ಅನೇಕ ಕಾರ್ಯಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾದಿಂದ ತಂದೆ-ತಾಯಿಯನ್ನು ಕಳೆದುಕೊಂಡ ಸಾವಿರ ಮಕ್ಕಳಿಗೆ ಸಹಾಯ ಮಾಡುತ್ತಿರುವ ನಟಿ ಲಕ್ಷ್ಮೀ ಮಂಚು

‘ರಾಬರ್ಟ್​’ ಗಾಯಕಿ ಮಂಗ್ಲಿ ಹಾಡಿಗೆ ಕುಣಿದು ಕುಪ್ಪಳಿಸಿದ ಸದ್ಗುರು! ‘ಕಣ್ಣೇ ಅದಿರಿಂದಿ’ ಬಳಿಕ ಮತ್ತೊಮ್ಮೆ ಮೋಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ