AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು

ತೆಲುಗು ಸ್ಟಾರ್ಸ್​ಗಳು ಒಬ್ಬರ ಚಿತ್ರಕ್ಕೆ ಒಬ್ಬರು ಬೆಂಬಲವಾಗಿ ನಿಲ್ಲುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಟಾಲಿವುಡ್ ನಟಿ ಲಕ್ಷ್ಮಿ ಮಂಚು ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು ಕ್ರಿಯೇಟ್ ಮಾಡಿಕೊಂಡಿರೋ ವಾಟ್ಸಾಪ್ ಗ್ರೂಪ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು
ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು
ರಾಜೇಶ್ ದುಗ್ಗುಮನೆ
|

Updated on: Jul 01, 2024 | 2:29 PM

Share

ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಬೇರೆ ಚಿತ್ರರಂಗದಲ್ಲಿ ಸಾಕಷ್ಟು ಒಗ್ಗಟ್ಟಿದೆ. ಇದಕ್ಕೆ ಹೊಚ್ಚ ಹೊಸ ಉದಾಹರಣೆ ಸಿಕ್ಕಿದೆ. ಟಾಲಿವುಡ್ ನಟಿ ಲಕ್ಷ್ಮಿ ಮಂಚು ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಹೇಳಿಕೊಂಡಿರೋ ವಿಚಾರ ಅನೇಕರಿಗೆ ಅಚ್ಚರಿ ತರಿಸಿದೆ. ಅಷ್ಟಕ್ಕೂ ಅವರು ರಿವೀಲ್ ಮಾಡಿದ ವಿಚಾರ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಲಕ್ಷ್ಮಿ ಮಂಚು ಅವರು ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರು ಟಾಲಿವುಡ್ ಕಲಾವಿದರ ವಾಟ್ಸಾಪ್​ ಗ್ರೂಪ್ ಬಗ್ಗೆ ಮಾಹಿತಿ ರಿವೀಲ್ ಮಾಡಿದ್ದಾರೆ. ಅಲ್ಲು ಅರ್ಜುನ್, ರಾಮ್ ಚರಣ್, ರಾಣಾ ದಗ್ಗುಬಾಟಿ ಸೇರಿ 142 ಕಲಾವಿದರ ವಾಟ್ಸಾಪ್ ಗ್ರೂಪ್ ಇದೆ. ಹೊಸ ಪ್ರಾಜೆಕ್ಟ್​ಗಳ ಬಗ್ಗೆ ಈ ಗ್ರೂಪ್​ನಲ್ಲಿ ಮಾಹಿತಿ ನೀಡಲಾಗುತ್ತದೆಯಂತೆ.

‘ಈ ಗ್ರೂಪ್​ನಲ್ಲಿ ಇರುವ ಎಲ್ಲರೂ ಕಲಾವಿದರು. ಯಾವುದೇ ಸಿನಿಮಾದ ಟೀಸರ್​, ಟ್ರೇಲರ್ ಅಥವಾ ಸಿನಿಮಾ ರಿಲೀಸ್ ಇದ್ದರೆ ಆ ಬಗ್ಗೆ ಈ ಗ್ರೂಪ್​ನಲ್ಲಿ ಮಾಹಿತಿ ನೀಡಬೇಕು. ಎಲ್ಲರೂ ಕಡ್ಡಾಯವಾಗಿ ಪೋಸ್ಟ್ ಮಾಡಲೇಬೇಕು. ಆ ಮೆಸೇಜ್​ಗೆ ಎಲ್ಲರೂ ಉತ್ತರಿಸಬೇಕು. ಈ ವೈರತ್ವ ಸಾಕು ಎಂಬ ಸಾಲುಗಳೊಂದಿಗೆ ಈ ಗ್ರೂಪ್​ನ ಕ್ರಿಯೇಟ್ ಮಾಡಿದ್ದೇವೆ’ ಎಂದಿದ್ದಾರೆ ಲಕ್ಷ್ಮಿ ಮಂಚು.

‘ನನಗೆ ಈ ಗ್ರೂಪ್ ಜೊತೆ ಒಳ್ಳೆಯ ನಂಟಿದೆ. ರಾಮ್ ಚರಣ್, ರಾಣಾ ದಗ್ಗುಬಾಟಿ ಹಾಗೂ ನಾವೆಲ್ಲ ಒಟ್ಟಿಗೆ ಬೆಳೆದವರು. ಆ ಗುಂಪು ಯಾವಾಗಲೂ ಒಟ್ಟಿಗೆ ಇರುತ್ತದೆ. ನಾವು ಈ ಗುಂಪನ್ನು ಮತ್ತಷ್ಟು ಹಿರಿದಾಗಿಸಿದ್ದೇವೆ’ ಎಂದು ಲಕ್ಷ್ಮಿ ಮಂಚು ಹೇಳಿದ್ದಾರೆ.

ಇದನ್ನೂ ಓದಿ:  ಮದುವೆ ಸಂಭ್ರಮದಲ್ಲಿ ರಕುಲ್ ಪ್ರೀತ್ ಸಿಂಗ್, ಗೆಳತಿಯರೊಟ್ಟಿಗೆ ಬ್ಯಾಚುಲರ್ ಪಾರ್ಟಿ

‘ರಕುಲ್ ಪ್ರೀತ್ ಸಿಂಗ್ ಜೊತೆ ಒಳ್ಳೆಯ ಗೆಳೆತನ ಇದೆ. ನಾನು ಅವರ ಮನೆಯಲ್ಲೇ ಉಳಿದುಕೊಂಡಿದ್ದೆ. ಅವರು ಯಾವಾಗಲೂ ಮುಂಬೈಗೆ ಬರುವಂತೆ ಹೇಳುತ್ತಿದ್ದರು. ರಾಣಾ ದಗ್ಗುಬಾಟಿ ಬಳಿ ಈ ಬಗ್ಗೆ ಮಾತನಾಡಿದೆ. ನಾನು ಹೈದರಾಬಾದ್​ನಲ್ಲಿ ಯಾವಾಗಲೂ ಇರೋಕೆ ಸಾಧ್ಯವಿಲ್ಲ ಎಂದು ಹೇಳಿದರು. ಹೀಗಾಗಿ ನಾನು ಮುಂಬೈಗೆ ಶಿಫ್ಟ್ ಆದೆ. ಮುಂಬೈನಲ್ಲಿರೋ ರಾಮ್ ಚರಣ್ ನಿವಾಸದಲ್ಲಿ ನಾನು ಉಳಿದುಕೊಂಡಿದ್ದೆ’ ಎಂದಿದ್ದಾರೆ ಲಕ್ಷ್ಮಿ ಮಂಚು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು