ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು

ತೆಲುಗು ಸ್ಟಾರ್ಸ್​ಗಳು ಒಬ್ಬರ ಚಿತ್ರಕ್ಕೆ ಒಬ್ಬರು ಬೆಂಬಲವಾಗಿ ನಿಲ್ಲುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಟಾಲಿವುಡ್ ನಟಿ ಲಕ್ಷ್ಮಿ ಮಂಚು ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು ಕ್ರಿಯೇಟ್ ಮಾಡಿಕೊಂಡಿರೋ ವಾಟ್ಸಾಪ್ ಗ್ರೂಪ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು
ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು
Follow us
|

Updated on: Jul 01, 2024 | 2:29 PM

ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಬೇರೆ ಚಿತ್ರರಂಗದಲ್ಲಿ ಸಾಕಷ್ಟು ಒಗ್ಗಟ್ಟಿದೆ. ಇದಕ್ಕೆ ಹೊಚ್ಚ ಹೊಸ ಉದಾಹರಣೆ ಸಿಕ್ಕಿದೆ. ಟಾಲಿವುಡ್ ನಟಿ ಲಕ್ಷ್ಮಿ ಮಂಚು ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಹೇಳಿಕೊಂಡಿರೋ ವಿಚಾರ ಅನೇಕರಿಗೆ ಅಚ್ಚರಿ ತರಿಸಿದೆ. ಅಷ್ಟಕ್ಕೂ ಅವರು ರಿವೀಲ್ ಮಾಡಿದ ವಿಚಾರ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಲಕ್ಷ್ಮಿ ಮಂಚು ಅವರು ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರು ಟಾಲಿವುಡ್ ಕಲಾವಿದರ ವಾಟ್ಸಾಪ್​ ಗ್ರೂಪ್ ಬಗ್ಗೆ ಮಾಹಿತಿ ರಿವೀಲ್ ಮಾಡಿದ್ದಾರೆ. ಅಲ್ಲು ಅರ್ಜುನ್, ರಾಮ್ ಚರಣ್, ರಾಣಾ ದಗ್ಗುಬಾಟಿ ಸೇರಿ 142 ಕಲಾವಿದರ ವಾಟ್ಸಾಪ್ ಗ್ರೂಪ್ ಇದೆ. ಹೊಸ ಪ್ರಾಜೆಕ್ಟ್​ಗಳ ಬಗ್ಗೆ ಈ ಗ್ರೂಪ್​ನಲ್ಲಿ ಮಾಹಿತಿ ನೀಡಲಾಗುತ್ತದೆಯಂತೆ.

‘ಈ ಗ್ರೂಪ್​ನಲ್ಲಿ ಇರುವ ಎಲ್ಲರೂ ಕಲಾವಿದರು. ಯಾವುದೇ ಸಿನಿಮಾದ ಟೀಸರ್​, ಟ್ರೇಲರ್ ಅಥವಾ ಸಿನಿಮಾ ರಿಲೀಸ್ ಇದ್ದರೆ ಆ ಬಗ್ಗೆ ಈ ಗ್ರೂಪ್​ನಲ್ಲಿ ಮಾಹಿತಿ ನೀಡಬೇಕು. ಎಲ್ಲರೂ ಕಡ್ಡಾಯವಾಗಿ ಪೋಸ್ಟ್ ಮಾಡಲೇಬೇಕು. ಆ ಮೆಸೇಜ್​ಗೆ ಎಲ್ಲರೂ ಉತ್ತರಿಸಬೇಕು. ಈ ವೈರತ್ವ ಸಾಕು ಎಂಬ ಸಾಲುಗಳೊಂದಿಗೆ ಈ ಗ್ರೂಪ್​ನ ಕ್ರಿಯೇಟ್ ಮಾಡಿದ್ದೇವೆ’ ಎಂದಿದ್ದಾರೆ ಲಕ್ಷ್ಮಿ ಮಂಚು.

‘ನನಗೆ ಈ ಗ್ರೂಪ್ ಜೊತೆ ಒಳ್ಳೆಯ ನಂಟಿದೆ. ರಾಮ್ ಚರಣ್, ರಾಣಾ ದಗ್ಗುಬಾಟಿ ಹಾಗೂ ನಾವೆಲ್ಲ ಒಟ್ಟಿಗೆ ಬೆಳೆದವರು. ಆ ಗುಂಪು ಯಾವಾಗಲೂ ಒಟ್ಟಿಗೆ ಇರುತ್ತದೆ. ನಾವು ಈ ಗುಂಪನ್ನು ಮತ್ತಷ್ಟು ಹಿರಿದಾಗಿಸಿದ್ದೇವೆ’ ಎಂದು ಲಕ್ಷ್ಮಿ ಮಂಚು ಹೇಳಿದ್ದಾರೆ.

ಇದನ್ನೂ ಓದಿ:  ಮದುವೆ ಸಂಭ್ರಮದಲ್ಲಿ ರಕುಲ್ ಪ್ರೀತ್ ಸಿಂಗ್, ಗೆಳತಿಯರೊಟ್ಟಿಗೆ ಬ್ಯಾಚುಲರ್ ಪಾರ್ಟಿ

‘ರಕುಲ್ ಪ್ರೀತ್ ಸಿಂಗ್ ಜೊತೆ ಒಳ್ಳೆಯ ಗೆಳೆತನ ಇದೆ. ನಾನು ಅವರ ಮನೆಯಲ್ಲೇ ಉಳಿದುಕೊಂಡಿದ್ದೆ. ಅವರು ಯಾವಾಗಲೂ ಮುಂಬೈಗೆ ಬರುವಂತೆ ಹೇಳುತ್ತಿದ್ದರು. ರಾಣಾ ದಗ್ಗುಬಾಟಿ ಬಳಿ ಈ ಬಗ್ಗೆ ಮಾತನಾಡಿದೆ. ನಾನು ಹೈದರಾಬಾದ್​ನಲ್ಲಿ ಯಾವಾಗಲೂ ಇರೋಕೆ ಸಾಧ್ಯವಿಲ್ಲ ಎಂದು ಹೇಳಿದರು. ಹೀಗಾಗಿ ನಾನು ಮುಂಬೈಗೆ ಶಿಫ್ಟ್ ಆದೆ. ಮುಂಬೈನಲ್ಲಿರೋ ರಾಮ್ ಚರಣ್ ನಿವಾಸದಲ್ಲಿ ನಾನು ಉಳಿದುಕೊಂಡಿದ್ದೆ’ ಎಂದಿದ್ದಾರೆ ಲಕ್ಷ್ಮಿ ಮಂಚು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ