AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು

ತೆಲುಗು ಸ್ಟಾರ್ಸ್​ಗಳು ಒಬ್ಬರ ಚಿತ್ರಕ್ಕೆ ಒಬ್ಬರು ಬೆಂಬಲವಾಗಿ ನಿಲ್ಲುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಟಾಲಿವುಡ್ ನಟಿ ಲಕ್ಷ್ಮಿ ಮಂಚು ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು ಕ್ರಿಯೇಟ್ ಮಾಡಿಕೊಂಡಿರೋ ವಾಟ್ಸಾಪ್ ಗ್ರೂಪ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು
ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು
ರಾಜೇಶ್ ದುಗ್ಗುಮನೆ
|

Updated on: Jul 01, 2024 | 2:29 PM

Share

ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಬೇರೆ ಚಿತ್ರರಂಗದಲ್ಲಿ ಸಾಕಷ್ಟು ಒಗ್ಗಟ್ಟಿದೆ. ಇದಕ್ಕೆ ಹೊಚ್ಚ ಹೊಸ ಉದಾಹರಣೆ ಸಿಕ್ಕಿದೆ. ಟಾಲಿವುಡ್ ನಟಿ ಲಕ್ಷ್ಮಿ ಮಂಚು ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಹೇಳಿಕೊಂಡಿರೋ ವಿಚಾರ ಅನೇಕರಿಗೆ ಅಚ್ಚರಿ ತರಿಸಿದೆ. ಅಷ್ಟಕ್ಕೂ ಅವರು ರಿವೀಲ್ ಮಾಡಿದ ವಿಚಾರ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಲಕ್ಷ್ಮಿ ಮಂಚು ಅವರು ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರು ಟಾಲಿವುಡ್ ಕಲಾವಿದರ ವಾಟ್ಸಾಪ್​ ಗ್ರೂಪ್ ಬಗ್ಗೆ ಮಾಹಿತಿ ರಿವೀಲ್ ಮಾಡಿದ್ದಾರೆ. ಅಲ್ಲು ಅರ್ಜುನ್, ರಾಮ್ ಚರಣ್, ರಾಣಾ ದಗ್ಗುಬಾಟಿ ಸೇರಿ 142 ಕಲಾವಿದರ ವಾಟ್ಸಾಪ್ ಗ್ರೂಪ್ ಇದೆ. ಹೊಸ ಪ್ರಾಜೆಕ್ಟ್​ಗಳ ಬಗ್ಗೆ ಈ ಗ್ರೂಪ್​ನಲ್ಲಿ ಮಾಹಿತಿ ನೀಡಲಾಗುತ್ತದೆಯಂತೆ.

‘ಈ ಗ್ರೂಪ್​ನಲ್ಲಿ ಇರುವ ಎಲ್ಲರೂ ಕಲಾವಿದರು. ಯಾವುದೇ ಸಿನಿಮಾದ ಟೀಸರ್​, ಟ್ರೇಲರ್ ಅಥವಾ ಸಿನಿಮಾ ರಿಲೀಸ್ ಇದ್ದರೆ ಆ ಬಗ್ಗೆ ಈ ಗ್ರೂಪ್​ನಲ್ಲಿ ಮಾಹಿತಿ ನೀಡಬೇಕು. ಎಲ್ಲರೂ ಕಡ್ಡಾಯವಾಗಿ ಪೋಸ್ಟ್ ಮಾಡಲೇಬೇಕು. ಆ ಮೆಸೇಜ್​ಗೆ ಎಲ್ಲರೂ ಉತ್ತರಿಸಬೇಕು. ಈ ವೈರತ್ವ ಸಾಕು ಎಂಬ ಸಾಲುಗಳೊಂದಿಗೆ ಈ ಗ್ರೂಪ್​ನ ಕ್ರಿಯೇಟ್ ಮಾಡಿದ್ದೇವೆ’ ಎಂದಿದ್ದಾರೆ ಲಕ್ಷ್ಮಿ ಮಂಚು.

‘ನನಗೆ ಈ ಗ್ರೂಪ್ ಜೊತೆ ಒಳ್ಳೆಯ ನಂಟಿದೆ. ರಾಮ್ ಚರಣ್, ರಾಣಾ ದಗ್ಗುಬಾಟಿ ಹಾಗೂ ನಾವೆಲ್ಲ ಒಟ್ಟಿಗೆ ಬೆಳೆದವರು. ಆ ಗುಂಪು ಯಾವಾಗಲೂ ಒಟ್ಟಿಗೆ ಇರುತ್ತದೆ. ನಾವು ಈ ಗುಂಪನ್ನು ಮತ್ತಷ್ಟು ಹಿರಿದಾಗಿಸಿದ್ದೇವೆ’ ಎಂದು ಲಕ್ಷ್ಮಿ ಮಂಚು ಹೇಳಿದ್ದಾರೆ.

ಇದನ್ನೂ ಓದಿ:  ಮದುವೆ ಸಂಭ್ರಮದಲ್ಲಿ ರಕುಲ್ ಪ್ರೀತ್ ಸಿಂಗ್, ಗೆಳತಿಯರೊಟ್ಟಿಗೆ ಬ್ಯಾಚುಲರ್ ಪಾರ್ಟಿ

‘ರಕುಲ್ ಪ್ರೀತ್ ಸಿಂಗ್ ಜೊತೆ ಒಳ್ಳೆಯ ಗೆಳೆತನ ಇದೆ. ನಾನು ಅವರ ಮನೆಯಲ್ಲೇ ಉಳಿದುಕೊಂಡಿದ್ದೆ. ಅವರು ಯಾವಾಗಲೂ ಮುಂಬೈಗೆ ಬರುವಂತೆ ಹೇಳುತ್ತಿದ್ದರು. ರಾಣಾ ದಗ್ಗುಬಾಟಿ ಬಳಿ ಈ ಬಗ್ಗೆ ಮಾತನಾಡಿದೆ. ನಾನು ಹೈದರಾಬಾದ್​ನಲ್ಲಿ ಯಾವಾಗಲೂ ಇರೋಕೆ ಸಾಧ್ಯವಿಲ್ಲ ಎಂದು ಹೇಳಿದರು. ಹೀಗಾಗಿ ನಾನು ಮುಂಬೈಗೆ ಶಿಫ್ಟ್ ಆದೆ. ಮುಂಬೈನಲ್ಲಿರೋ ರಾಮ್ ಚರಣ್ ನಿವಾಸದಲ್ಲಿ ನಾನು ಉಳಿದುಕೊಂಡಿದ್ದೆ’ ಎಂದಿದ್ದಾರೆ ಲಕ್ಷ್ಮಿ ಮಂಚು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​