ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಬೇರೆ ಚಿತ್ರರಂಗದಲ್ಲಿ ಸಾಕಷ್ಟು ಒಗ್ಗಟ್ಟಿದೆ. ಇದಕ್ಕೆ ಹೊಚ್ಚ ಹೊಸ ಉದಾಹರಣೆ ಸಿಕ್ಕಿದೆ. ಟಾಲಿವುಡ್ ನಟಿ ಲಕ್ಷ್ಮಿ ಮಂಚು ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಹೇಳಿಕೊಂಡಿರೋ ವಿಚಾರ ಅನೇಕರಿಗೆ ಅಚ್ಚರಿ ತರಿಸಿದೆ. ಅಷ್ಟಕ್ಕೂ ಅವರು ರಿವೀಲ್ ಮಾಡಿದ ವಿಚಾರ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ಲಕ್ಷ್ಮಿ ಮಂಚು ಅವರು ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರು ಟಾಲಿವುಡ್ ಕಲಾವಿದರ ವಾಟ್ಸಾಪ್ ಗ್ರೂಪ್ ಬಗ್ಗೆ ಮಾಹಿತಿ ರಿವೀಲ್ ಮಾಡಿದ್ದಾರೆ. ಅಲ್ಲು ಅರ್ಜುನ್, ರಾಮ್ ಚರಣ್, ರಾಣಾ ದಗ್ಗುಬಾಟಿ ಸೇರಿ 142 ಕಲಾವಿದರ ವಾಟ್ಸಾಪ್ ಗ್ರೂಪ್ ಇದೆ. ಹೊಸ ಪ್ರಾಜೆಕ್ಟ್ಗಳ ಬಗ್ಗೆ ಈ ಗ್ರೂಪ್ನಲ್ಲಿ ಮಾಹಿತಿ ನೀಡಲಾಗುತ್ತದೆಯಂತೆ.
‘ಈ ಗ್ರೂಪ್ನಲ್ಲಿ ಇರುವ ಎಲ್ಲರೂ ಕಲಾವಿದರು. ಯಾವುದೇ ಸಿನಿಮಾದ ಟೀಸರ್, ಟ್ರೇಲರ್ ಅಥವಾ ಸಿನಿಮಾ ರಿಲೀಸ್ ಇದ್ದರೆ ಆ ಬಗ್ಗೆ ಈ ಗ್ರೂಪ್ನಲ್ಲಿ ಮಾಹಿತಿ ನೀಡಬೇಕು. ಎಲ್ಲರೂ ಕಡ್ಡಾಯವಾಗಿ ಪೋಸ್ಟ್ ಮಾಡಲೇಬೇಕು. ಆ ಮೆಸೇಜ್ಗೆ ಎಲ್ಲರೂ ಉತ್ತರಿಸಬೇಕು. ಈ ವೈರತ್ವ ಸಾಕು ಎಂಬ ಸಾಲುಗಳೊಂದಿಗೆ ಈ ಗ್ರೂಪ್ನ ಕ್ರಿಯೇಟ್ ಮಾಡಿದ್ದೇವೆ’ ಎಂದಿದ್ದಾರೆ ಲಕ್ಷ್ಮಿ ಮಂಚು.
‘ನನಗೆ ಈ ಗ್ರೂಪ್ ಜೊತೆ ಒಳ್ಳೆಯ ನಂಟಿದೆ. ರಾಮ್ ಚರಣ್, ರಾಣಾ ದಗ್ಗುಬಾಟಿ ಹಾಗೂ ನಾವೆಲ್ಲ ಒಟ್ಟಿಗೆ ಬೆಳೆದವರು. ಆ ಗುಂಪು ಯಾವಾಗಲೂ ಒಟ್ಟಿಗೆ ಇರುತ್ತದೆ. ನಾವು ಈ ಗುಂಪನ್ನು ಮತ್ತಷ್ಟು ಹಿರಿದಾಗಿಸಿದ್ದೇವೆ’ ಎಂದು ಲಕ್ಷ್ಮಿ ಮಂಚು ಹೇಳಿದ್ದಾರೆ.
ಇದನ್ನೂ ಓದಿ: ಮದುವೆ ಸಂಭ್ರಮದಲ್ಲಿ ರಕುಲ್ ಪ್ರೀತ್ ಸಿಂಗ್, ಗೆಳತಿಯರೊಟ್ಟಿಗೆ ಬ್ಯಾಚುಲರ್ ಪಾರ್ಟಿ
‘ರಕುಲ್ ಪ್ರೀತ್ ಸಿಂಗ್ ಜೊತೆ ಒಳ್ಳೆಯ ಗೆಳೆತನ ಇದೆ. ನಾನು ಅವರ ಮನೆಯಲ್ಲೇ ಉಳಿದುಕೊಂಡಿದ್ದೆ. ಅವರು ಯಾವಾಗಲೂ ಮುಂಬೈಗೆ ಬರುವಂತೆ ಹೇಳುತ್ತಿದ್ದರು. ರಾಣಾ ದಗ್ಗುಬಾಟಿ ಬಳಿ ಈ ಬಗ್ಗೆ ಮಾತನಾಡಿದೆ. ನಾನು ಹೈದರಾಬಾದ್ನಲ್ಲಿ ಯಾವಾಗಲೂ ಇರೋಕೆ ಸಾಧ್ಯವಿಲ್ಲ ಎಂದು ಹೇಳಿದರು. ಹೀಗಾಗಿ ನಾನು ಮುಂಬೈಗೆ ಶಿಫ್ಟ್ ಆದೆ. ಮುಂಬೈನಲ್ಲಿರೋ ರಾಮ್ ಚರಣ್ ನಿವಾಸದಲ್ಲಿ ನಾನು ಉಳಿದುಕೊಂಡಿದ್ದೆ’ ಎಂದಿದ್ದಾರೆ ಲಕ್ಷ್ಮಿ ಮಂಚು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.