Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆವಳಿಕೊಂಡು 10 ಕೋಟಿ ರೂಪಾಯಿ ಕ್ಲಬ್ ಸೇರಿದ ರಜನಿ ನಟನೆಯ ‘ಲಾಲ್ ಸಲಾಂ’ ಸಿನಿಮಾ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಂಕ್ರಾಂತಿ ಸಂದರ್ಭದಲ್ಲೇ ‘ಲಾಲ್ ಸಲಾಂ’ ರಿಲೀಸ್ ಆಗಬೇಕಿತ್ತು. ಸಾಲು ಸಾಲು ಸಿನಿಮಾಗಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಫೆಬ್ರವರಿ 9ಕ್ಕೆ ಸಿನಿಮಾನ ರಿಲೀಸ್ ಮಾಡಲಾಯಿತು. ಮೊದಲ ಮೂರು ದಿನ ತಲಾ 3 ಕೋಟಿ ರೂಪಾಯಿಯನ್ನು ಚಿತ್ರ ಗಳಿಕೆ ಮಾಡಿತ್ತು.

ತೆವಳಿಕೊಂಡು 10 ಕೋಟಿ ರೂಪಾಯಿ ಕ್ಲಬ್ ಸೇರಿದ ರಜನಿ ನಟನೆಯ ‘ಲಾಲ್ ಸಲಾಂ’ ಸಿನಿಮಾ
ರಜಿನಿಕಾಂತ್
Follow us
ರಾಜೇಶ್ ದುಗ್ಗುಮನೆ
|

Updated on: Feb 13, 2024 | 12:20 PM

ರಜನಿಕಾಂತ್ (Rajinikanth) ನಟನೆಯ ‘ಲಾಲ್ ಸಲಾಂ’ ಸಿಮಿಮಾ ಫೆಬ್ರವರಿ 9ರಂದು ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಮಂದಗತಿಯಲ್ಲಿ ಗಳಿಕೆ ಮಾಡುತ್ತಿದೆ. ಐಶ್ವರ್ಯಾ ರಜನಿಕಾಂತ್ ನಿರ್ದೇಶನದ ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ ಬಂಡವಾಳ ಹೂಡಿದೆ. ಸೋಮವಾರ (ಫೆಬ್ರವರಿ 12) ಈ ಚಿತ್ರ ಕೇವಲ 1.13 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ನಾಲ್ಕು ದಿನಕ್ಕೆ ಚಿತ್ರ 11 ಕೋಟಿ ರೂಪಾಯಿ ಗಳಿಕೆ ಮಾಡಿದಂತೆ ಆಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸಿನಿಮಾ ನಷ್ಟ ಅನುಭವಿಸಲಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಲಾಲ್ ಸಲಾಂ’ ಸಿನಿಮಾ ಸಂಕ್ರಾಂತಿ ಸಂದರ್ಭದಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ಸಾಲು ಸಾಲು ಸಿನಿಮಾಗಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಫೆಬ್ರವರಿ 9ಕ್ಕೆ ಸಿನಿಮಾನ ಮುಂದೂಡಲಾಗಿತ್ತು. ಮೊದಲ ಮೂರು ದಿನ ತಲಾ 3 ಕೋಟಿ ರೂಪಾಯಿಯನ್ನು ಚಿತ್ರ ಗಳಿಕೆ ಮಾಡಿತ್ತು. ಸೋಮವಾರ ಮತ್ತಷ್ಟು ಇಳಿಕೆ ಕಾಣುವ ಮೂಲಕ ಸಿನಿಮಾ ಸೋಮವಾರದ ಪರೀಕ್ಷೆಯಲ್ಲಿ ಫೇಲ್ ಆಗಿದೆ. ಚಿತ್ರದ ಒಟ್ಟಾರೆ ಗಳಿಕೆ 11 ಕೋಟಿ ರೂಪಾಯಿ ಆಗಿದೆ. ವಿದೇಶದಲ್ಲಿ ಈ ಚಿತ್ರ 3 ಕೋಟಿ ರೂಪಾಯಿ ಗಳಿಕೆ ಮಾಡಲಷ್ಟೇ ಸಾಧ್ಯವಾಗಿದೆ.

ಮುರ್ದಾಬಾದ್ ಎಂಬ ಗ್ರಾಮದ ಕಥೆಯನ್ನು ಹೇಳಲಾಗಿದೆ. ಹಿಂದೂಗಳು ಹಾಗೂ ಮುಸ್ಲಿಮರು ಒಟ್ಟಾಗಿ ಸಹಬಾಳ್ವೆ ನಡೆಸುತ್ತಾ ಇರುತ್ತಾರೆ. ರಾಜಕಾರಣಿಗಳು ಮಾಡುವ ಕುತಂತ್ರದಿಂದ ಇಬ್ಬರ ಮಧ್ಯೆ ಕಿತ್ತಾಟ ಆರಂಭ ಆಗುತ್ತದೆ. ಈ ರೀತಿಯಲ್ಲಿ ಕಥೆ ಮೂಡಿ ಬಂದಿದೆ. ರಜನಿಕಾಂತ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮೊಯಿದ್ದೀನ್ ಭಾಯ್ ಪಾತ್ರ ಮಾಡಿದ್ದಾರೆ. ವಿಷ್ಣು ವಿಶಾಲ್ ಕೂಡ ಚಿತ್ರದಲ್ಲಿದ್ದಾರೆ. ಖ್ಯಾತ ಕ್ರಿಕೆಟರ್ ಕಪಿಲ್ ದೇವ್ ಅತಿಥಿ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: ಮೂರು ದಿನಕ್ಕೆ 10 ಕೋಟಿ ರೂ. ಗಳಿಸಿಲ್ಲ ‘ಲಾಲ್ ಸಲಾಂ’; ಸಂಕಷ್ಟದಲ್ಲಿ ರಜನಿಕಾಂತ್ ಸಿನಿಮಾ

ರಜನಿಕಾಂತ್ ಹೀರೋ ಆಗಿ ಕಾಣಿಸಿಕೊಂಡ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ ಉದಾಹರಣೆ ಇದೆ. ಆದರೆ, ‘ಲಾಲ್ ಸಲಾಂ’ ಚಿತ್ರದಲ್ಲಿ ರಜನಿಯದ್ದು ಅತಿಥಿ ಪಾತ್ರ ಎಂಬ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ವೀಕ್ಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..