AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆವಳಿಕೊಂಡು 10 ಕೋಟಿ ರೂಪಾಯಿ ಕ್ಲಬ್ ಸೇರಿದ ರಜನಿ ನಟನೆಯ ‘ಲಾಲ್ ಸಲಾಂ’ ಸಿನಿಮಾ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಂಕ್ರಾಂತಿ ಸಂದರ್ಭದಲ್ಲೇ ‘ಲಾಲ್ ಸಲಾಂ’ ರಿಲೀಸ್ ಆಗಬೇಕಿತ್ತು. ಸಾಲು ಸಾಲು ಸಿನಿಮಾಗಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಫೆಬ್ರವರಿ 9ಕ್ಕೆ ಸಿನಿಮಾನ ರಿಲೀಸ್ ಮಾಡಲಾಯಿತು. ಮೊದಲ ಮೂರು ದಿನ ತಲಾ 3 ಕೋಟಿ ರೂಪಾಯಿಯನ್ನು ಚಿತ್ರ ಗಳಿಕೆ ಮಾಡಿತ್ತು.

ತೆವಳಿಕೊಂಡು 10 ಕೋಟಿ ರೂಪಾಯಿ ಕ್ಲಬ್ ಸೇರಿದ ರಜನಿ ನಟನೆಯ ‘ಲಾಲ್ ಸಲಾಂ’ ಸಿನಿಮಾ
ರಜಿನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Feb 13, 2024 | 12:20 PM

Share

ರಜನಿಕಾಂತ್ (Rajinikanth) ನಟನೆಯ ‘ಲಾಲ್ ಸಲಾಂ’ ಸಿಮಿಮಾ ಫೆಬ್ರವರಿ 9ರಂದು ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಮಂದಗತಿಯಲ್ಲಿ ಗಳಿಕೆ ಮಾಡುತ್ತಿದೆ. ಐಶ್ವರ್ಯಾ ರಜನಿಕಾಂತ್ ನಿರ್ದೇಶನದ ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ ಬಂಡವಾಳ ಹೂಡಿದೆ. ಸೋಮವಾರ (ಫೆಬ್ರವರಿ 12) ಈ ಚಿತ್ರ ಕೇವಲ 1.13 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ನಾಲ್ಕು ದಿನಕ್ಕೆ ಚಿತ್ರ 11 ಕೋಟಿ ರೂಪಾಯಿ ಗಳಿಕೆ ಮಾಡಿದಂತೆ ಆಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸಿನಿಮಾ ನಷ್ಟ ಅನುಭವಿಸಲಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಲಾಲ್ ಸಲಾಂ’ ಸಿನಿಮಾ ಸಂಕ್ರಾಂತಿ ಸಂದರ್ಭದಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ಸಾಲು ಸಾಲು ಸಿನಿಮಾಗಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಫೆಬ್ರವರಿ 9ಕ್ಕೆ ಸಿನಿಮಾನ ಮುಂದೂಡಲಾಗಿತ್ತು. ಮೊದಲ ಮೂರು ದಿನ ತಲಾ 3 ಕೋಟಿ ರೂಪಾಯಿಯನ್ನು ಚಿತ್ರ ಗಳಿಕೆ ಮಾಡಿತ್ತು. ಸೋಮವಾರ ಮತ್ತಷ್ಟು ಇಳಿಕೆ ಕಾಣುವ ಮೂಲಕ ಸಿನಿಮಾ ಸೋಮವಾರದ ಪರೀಕ್ಷೆಯಲ್ಲಿ ಫೇಲ್ ಆಗಿದೆ. ಚಿತ್ರದ ಒಟ್ಟಾರೆ ಗಳಿಕೆ 11 ಕೋಟಿ ರೂಪಾಯಿ ಆಗಿದೆ. ವಿದೇಶದಲ್ಲಿ ಈ ಚಿತ್ರ 3 ಕೋಟಿ ರೂಪಾಯಿ ಗಳಿಕೆ ಮಾಡಲಷ್ಟೇ ಸಾಧ್ಯವಾಗಿದೆ.

ಮುರ್ದಾಬಾದ್ ಎಂಬ ಗ್ರಾಮದ ಕಥೆಯನ್ನು ಹೇಳಲಾಗಿದೆ. ಹಿಂದೂಗಳು ಹಾಗೂ ಮುಸ್ಲಿಮರು ಒಟ್ಟಾಗಿ ಸಹಬಾಳ್ವೆ ನಡೆಸುತ್ತಾ ಇರುತ್ತಾರೆ. ರಾಜಕಾರಣಿಗಳು ಮಾಡುವ ಕುತಂತ್ರದಿಂದ ಇಬ್ಬರ ಮಧ್ಯೆ ಕಿತ್ತಾಟ ಆರಂಭ ಆಗುತ್ತದೆ. ಈ ರೀತಿಯಲ್ಲಿ ಕಥೆ ಮೂಡಿ ಬಂದಿದೆ. ರಜನಿಕಾಂತ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮೊಯಿದ್ದೀನ್ ಭಾಯ್ ಪಾತ್ರ ಮಾಡಿದ್ದಾರೆ. ವಿಷ್ಣು ವಿಶಾಲ್ ಕೂಡ ಚಿತ್ರದಲ್ಲಿದ್ದಾರೆ. ಖ್ಯಾತ ಕ್ರಿಕೆಟರ್ ಕಪಿಲ್ ದೇವ್ ಅತಿಥಿ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: ಮೂರು ದಿನಕ್ಕೆ 10 ಕೋಟಿ ರೂ. ಗಳಿಸಿಲ್ಲ ‘ಲಾಲ್ ಸಲಾಂ’; ಸಂಕಷ್ಟದಲ್ಲಿ ರಜನಿಕಾಂತ್ ಸಿನಿಮಾ

ರಜನಿಕಾಂತ್ ಹೀರೋ ಆಗಿ ಕಾಣಿಸಿಕೊಂಡ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ ಉದಾಹರಣೆ ಇದೆ. ಆದರೆ, ‘ಲಾಲ್ ಸಲಾಂ’ ಚಿತ್ರದಲ್ಲಿ ರಜನಿಯದ್ದು ಅತಿಥಿ ಪಾತ್ರ ಎಂಬ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ವೀಕ್ಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?