AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆವಳಿಕೊಂಡು 10 ಕೋಟಿ ರೂಪಾಯಿ ಕ್ಲಬ್ ಸೇರಿದ ರಜನಿ ನಟನೆಯ ‘ಲಾಲ್ ಸಲಾಂ’ ಸಿನಿಮಾ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಂಕ್ರಾಂತಿ ಸಂದರ್ಭದಲ್ಲೇ ‘ಲಾಲ್ ಸಲಾಂ’ ರಿಲೀಸ್ ಆಗಬೇಕಿತ್ತು. ಸಾಲು ಸಾಲು ಸಿನಿಮಾಗಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಫೆಬ್ರವರಿ 9ಕ್ಕೆ ಸಿನಿಮಾನ ರಿಲೀಸ್ ಮಾಡಲಾಯಿತು. ಮೊದಲ ಮೂರು ದಿನ ತಲಾ 3 ಕೋಟಿ ರೂಪಾಯಿಯನ್ನು ಚಿತ್ರ ಗಳಿಕೆ ಮಾಡಿತ್ತು.

ತೆವಳಿಕೊಂಡು 10 ಕೋಟಿ ರೂಪಾಯಿ ಕ್ಲಬ್ ಸೇರಿದ ರಜನಿ ನಟನೆಯ ‘ಲಾಲ್ ಸಲಾಂ’ ಸಿನಿಮಾ
ರಜಿನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Feb 13, 2024 | 12:20 PM

Share

ರಜನಿಕಾಂತ್ (Rajinikanth) ನಟನೆಯ ‘ಲಾಲ್ ಸಲಾಂ’ ಸಿಮಿಮಾ ಫೆಬ್ರವರಿ 9ರಂದು ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಮಂದಗತಿಯಲ್ಲಿ ಗಳಿಕೆ ಮಾಡುತ್ತಿದೆ. ಐಶ್ವರ್ಯಾ ರಜನಿಕಾಂತ್ ನಿರ್ದೇಶನದ ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ ಬಂಡವಾಳ ಹೂಡಿದೆ. ಸೋಮವಾರ (ಫೆಬ್ರವರಿ 12) ಈ ಚಿತ್ರ ಕೇವಲ 1.13 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ನಾಲ್ಕು ದಿನಕ್ಕೆ ಚಿತ್ರ 11 ಕೋಟಿ ರೂಪಾಯಿ ಗಳಿಕೆ ಮಾಡಿದಂತೆ ಆಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸಿನಿಮಾ ನಷ್ಟ ಅನುಭವಿಸಲಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಲಾಲ್ ಸಲಾಂ’ ಸಿನಿಮಾ ಸಂಕ್ರಾಂತಿ ಸಂದರ್ಭದಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ಸಾಲು ಸಾಲು ಸಿನಿಮಾಗಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಫೆಬ್ರವರಿ 9ಕ್ಕೆ ಸಿನಿಮಾನ ಮುಂದೂಡಲಾಗಿತ್ತು. ಮೊದಲ ಮೂರು ದಿನ ತಲಾ 3 ಕೋಟಿ ರೂಪಾಯಿಯನ್ನು ಚಿತ್ರ ಗಳಿಕೆ ಮಾಡಿತ್ತು. ಸೋಮವಾರ ಮತ್ತಷ್ಟು ಇಳಿಕೆ ಕಾಣುವ ಮೂಲಕ ಸಿನಿಮಾ ಸೋಮವಾರದ ಪರೀಕ್ಷೆಯಲ್ಲಿ ಫೇಲ್ ಆಗಿದೆ. ಚಿತ್ರದ ಒಟ್ಟಾರೆ ಗಳಿಕೆ 11 ಕೋಟಿ ರೂಪಾಯಿ ಆಗಿದೆ. ವಿದೇಶದಲ್ಲಿ ಈ ಚಿತ್ರ 3 ಕೋಟಿ ರೂಪಾಯಿ ಗಳಿಕೆ ಮಾಡಲಷ್ಟೇ ಸಾಧ್ಯವಾಗಿದೆ.

ಮುರ್ದಾಬಾದ್ ಎಂಬ ಗ್ರಾಮದ ಕಥೆಯನ್ನು ಹೇಳಲಾಗಿದೆ. ಹಿಂದೂಗಳು ಹಾಗೂ ಮುಸ್ಲಿಮರು ಒಟ್ಟಾಗಿ ಸಹಬಾಳ್ವೆ ನಡೆಸುತ್ತಾ ಇರುತ್ತಾರೆ. ರಾಜಕಾರಣಿಗಳು ಮಾಡುವ ಕುತಂತ್ರದಿಂದ ಇಬ್ಬರ ಮಧ್ಯೆ ಕಿತ್ತಾಟ ಆರಂಭ ಆಗುತ್ತದೆ. ಈ ರೀತಿಯಲ್ಲಿ ಕಥೆ ಮೂಡಿ ಬಂದಿದೆ. ರಜನಿಕಾಂತ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮೊಯಿದ್ದೀನ್ ಭಾಯ್ ಪಾತ್ರ ಮಾಡಿದ್ದಾರೆ. ವಿಷ್ಣು ವಿಶಾಲ್ ಕೂಡ ಚಿತ್ರದಲ್ಲಿದ್ದಾರೆ. ಖ್ಯಾತ ಕ್ರಿಕೆಟರ್ ಕಪಿಲ್ ದೇವ್ ಅತಿಥಿ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: ಮೂರು ದಿನಕ್ಕೆ 10 ಕೋಟಿ ರೂ. ಗಳಿಸಿಲ್ಲ ‘ಲಾಲ್ ಸಲಾಂ’; ಸಂಕಷ್ಟದಲ್ಲಿ ರಜನಿಕಾಂತ್ ಸಿನಿಮಾ

ರಜನಿಕಾಂತ್ ಹೀರೋ ಆಗಿ ಕಾಣಿಸಿಕೊಂಡ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ ಉದಾಹರಣೆ ಇದೆ. ಆದರೆ, ‘ಲಾಲ್ ಸಲಾಂ’ ಚಿತ್ರದಲ್ಲಿ ರಜನಿಯದ್ದು ಅತಿಥಿ ಪಾತ್ರ ಎಂಬ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ವೀಕ್ಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ