AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೈದ್ಯರು ಹೇಳಿದಾಗ ಅವರನ್ನು ಮನೆಗೆ ಕರೆತರುತ್ತೇವೆ’; ಲತಾ ಮಂಗೇಶ್ಕರ್​ ಆರೋಗ್ಯದ ಬಗ್ಗೆ ಹೊಸ ಮಾಹಿತಿ

ಜನವರಿ 9ರಂದು ಲತಾ ಮಂಗೇಶ್ಕರ್​ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊವಿಡ್​ ಲಕ್ಷಣ ಇದ್ದಿದ್ದರಿಂದ ಹೆಚ್ಚು ಆತಂಕ ಮೂಡಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊವಿಡ್​ ಇರುವ ವಿಚಾರ ಅಧಿಕೃತವಾಗಿತ್ತು.

‘ವೈದ್ಯರು ಹೇಳಿದಾಗ ಅವರನ್ನು ಮನೆಗೆ ಕರೆತರುತ್ತೇವೆ’; ಲತಾ ಮಂಗೇಶ್ಕರ್​ ಆರೋಗ್ಯದ ಬಗ್ಗೆ ಹೊಸ ಮಾಹಿತಿ
ಗಾಯಕಿ ಲತಾ ಮಂಗೇಶ್ಕರ್
TV9 Web
| Edited By: |

Updated on: Jan 20, 2022 | 2:40 PM

Share

ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ (Lata Mangeshkar) ಅವರು ಕೊವಿಡ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಹಲವು ದಿನಗಳು ಕಳೆದಿವೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವಿಶೇಷ ವೈದ್ಯರ ತಂಡ ಅವರನ್ನು ನೋಡಿಕೊಳ್ಳುತ್ತಿದೆ. ಈ ಮಧ್ಯೆ ಅವರ ಆರೋಗ್ಯದ ಬಗ್ಗೆ ಸಾಕಷ್ಟು ವದಂತಿಗಳು ಕೂಡ ಹಬ್ಬಿದ್ದವು. ಈ ಬಗ್ಗೆ ಲತಾ ಮಂಗೇಶ್ಕರ್​ ಅವರ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ. ಖ್ಯಾತ ಗಾಯಕಿಯ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಸಂತಸಗೊಂಡಿದ್ದಾರೆ. ಅವರು ಬೇಗ ಗುಣಮುಖರಾಗಿ ಮರಳಿ ಮನೆಗೆ ಬರಲಿ ಎನ್ನುವ ಪ್ರಾರ್ಥನೆ ಮುಂದುವರಿದಿದೆ.

ಜನವರಿ 9ರಂದು ಲತಾ ಮಂಗೇಶ್ಕರ್​ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊವಿಡ್​ ಲಕ್ಷಣ ಇದ್ದಿದ್ದರಿಂದ ಹೆಚ್ಚು ಆತಂಕ ಮೂಡಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊವಿಡ್​ ಇರುವ ವಿಚಾರ ಅಧಿಕೃತವಾಗಿತ್ತು. ಇದರ ಜತೆಗೆ ಅವರಿಗೆ ನ್ಯುಮೋನಿಯಾ ಕೂಡ ಅಂಟಿದೆ. ಹೀಗಾಗಿ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈಗ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.

‘ಲತಾ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ಸೂಚನೆ ನೀಡಿದ ನಂತರದಲ್ಲಿ ಅವರನ್ನು ಮನೆಗೆ ಕರೆ ತರಲಾಗುತ್ತದೆ’ ಎಂದು ಅನುಷಾ ಶ್ರೀನಿವಾಸ್​ ಅಯ್ಯರ್​ ಹೇಳಿದ್ದಾರೆ. ಲತಾ ಮಂಗೇಶ್ಕರ್​ ವಕ್ತಾರೆಯಾಗಿ ಅವರು ಕೆಲಸ ಮಾಡುತ್ತಿದ್ದಾರೆ.

ಲತಾ ಮಂಗೇಶ್ಕರ್​ ಆರೋಗ್ಯದ ಕುರಿತಂತೆ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್​ ಟೋಪೆ ಅವರು ಭಾನುವಾರ (ಜ.16) ಹೇಳಿಕೆ ನೀಡಿದ್ದರು. ‘ಲತಾ ಅವರ ಆರೋಗ್ಯ ಸುಧಾರಿಸುತ್ತಿದೆ. ಆಸ್ಪತ್ರೆಯ ಆಡಳಿತ ವರ್ಗದವರ ಜೊತೆ ನಾನು ಮಾತನಾಡಿದ್ದೇನೆ. ಜನರು ಹೆಲ್ತ್​ ಅಪ್​ಡೇಟ್​ ತಿಳಿಯಲು ಕಾಯುತ್ತ ಇರುತ್ತಾರೆ. ಹಾಗಾಗಿ ಆಸ್ಪತ್ರೆಯ ವಕ್ತಾರರು ಅಪ್​ಡೇಟ್​ ನೀಡುತ್ತಾ ಇರಬೇಕು ಅಂತ ಸೂಚಿಸಿದ್ದೇನೆ’ ಎಂದು ರಾಜೇಶ್​ ಟೋಪೆ ಹೇಳಿದ್ದರು.

ಇದನ್ನೂ ಓದಿ: Lata Mangeshkar: ಲತಾ ಮಂಗೇಶ್ಕರ್ ಆರೋಗ್ಯ ಹೇಗಿದೆ? ವೈದ್ಯರು ನೀಡಿದ ಮಾಹಿತಿ ಇಲ್ಲಿದೆ

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯ ಸುಧಾರಣೆಗೆ ಕುಟುಂಬವರಿಂದ ವಿಶೇಷ ಪೂಜೆ; ಸಹೋದರಿ ಆಶಾ ಬೋಸ್ಲೆ ಮಾಹಿತಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ