AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಗಲಿಕೆಯ ನೋವಿನಲ್ಲೂ ನಕ್ಕ ಪ್ರದೀಪ್ ರಾವತ್; ಟ್ರೋಲ್ ಖಂಡಿಸಿದ ಫ್ಯಾನ್ಸ್

ಖ್ಯಾತ ನಟ ಪ್ರದೀಪ್ ರಾವತ್ ನಿಧನದ ನಂತರ ಅವರ ಪುತ್ರ ವಿಕ್ರಮಾದಿತ್ಯ ಕ್ಯಾಮೆರಾ ಮುಂದೆ ನಕ್ಕಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿದ್ದಾರೆ. ನಂತರ ಅಂತಿಮ ಸಂಸ್ಕಾರದಲ್ಲಿ ಕಣ್ಣೀರಿಟ್ಟ ವಿಡಿಯೋ ವೈರಲ್ ಆಗಿದ್ದು, ನರ್ವಸ್‌ನೆಸ್‌ನಿಂದ ಹೀಗಾಗಿದೆ ಎಂದು ನೆಟ್ಟಿಗರು ವಿಕ್ರಮಾದಿತ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ.

ತಂದೆಯ ಅಗಲಿಕೆಯ ನೋವಿನಲ್ಲೂ ನಕ್ಕ ಪ್ರದೀಪ್ ರಾವತ್; ಟ್ರೋಲ್ ಖಂಡಿಸಿದ ಫ್ಯಾನ್ಸ್
ವಿಕ್ರಮ್-ಪ್ರದೀಪ್
ರಾಜೇಶ್ ದುಗ್ಗುಮನೆ
|

Updated on: Aug 08, 2026 | 11:44 AM

Share

ಖ್ಯಾತ ಹಿರಿಯ ನಟ ಪ್ರದೀಪ್ ರಾವತ್ (Pradeep Rawat) ಅಗಲಿಕೆಯ ನಂತರ ಇಡೀ ಚಿತ್ರರಂಗ ಹಾಗೂ ಕುಟುಂಬ ನೋವಿನಲ್ಲಿ ಇದೆ. ಈ ಮಧ್ಯೆ ಅವರ ಮನೆಗೆ ಪಾಪರಾಜಿಗಳು ಆಗಮಿಸುತ್ತಿದ್ದಾರೆ. ಈ ವೇಳೆ ಅವರ ಪುತ್ರ ವಿಕ್ರಮಾದಿತ್ಯ ರಾವತ್ ಕಾಣಿಸಿಕೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕ್ಯಾಮೆರಾಗಳ ಮುಂದೆ ಸಣ್ಣದಾಗಿ ನಕ್ಕಂತೆ ಕಾಣಿಸಿಕೊಂಡ ವಿಕ್ರಮಾದಿತ್ಯ ಅವರ ನಡೆಗೆ ನೆಟ್ಟಿಗರು ಕಠೋರ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಲು ಪ್ರಾರಂಭಿಸಿದ್ದಾರೆ.

ಮತ್ತೊಂದು ವಿಡಿಯೋದಲ್ಲಿ ತಂದೆಯ ಅಂತಿಮ ಸಂಸ್ಕಾರ ನೆರವೇರಿಸುವಾಗ ವಿಕ್ರಮಾದಿತ್ಯ ಅವರು ಕಣ್ಣೀರಿಟ್ಟು ಕಂಗಾಲಾಗಿದ್ದು ಕಂಡುಬಂದಿದೆ. ಕ್ಯಾಮೆರಾಗಳ ಸಮ್ಮುಖದಲ್ಲಿದ್ದಾಗ ಉಂಟಾದ ನರ್ವಸ್‌ನೆಸ್ ಹಾಗೂ ಏನು ಮಾಡಬೇಕೆಂದು ತಿಳಿಯದ ಸಂದರ್ಭದಲ್ಲಿ ಹೊರಬಂದ ಪ್ರತಿಕ್ರಿಯೆಯನ್ನು ಇಟ್ಟುಕೊಂಡು, ಒಬ್ಬ ವ್ಯಕ್ತಿಯ ದುಃಖ ಮತ್ತು ಭಾವನೆಗಳನ್ನು ಸೋಷಿಯಲ್ ಮೀಡಿಯಾದಲ್ಲಿ ನಿರ್ಧರಿಸುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಮೂಡಿವೆ. ದುಃಖದ ವಾತಾವರಣದಲ್ಲಿದ್ದಾಗ ಪ್ರತಿಯೊಬ್ಬ ವ್ಯಕ್ತಿಯು ಒಂದೇ ರೀತಿಯಾಗಿ ಪ್ರತಿಕ್ರಿಯಿಸುವುದಿಲ್ಲ ಎಂಬ ಕನಿಷ್ಠ ಮಾನವೀಯತೆಯನ್ನು ಅರ್ಥೈಸಿಕೊಳ್ಳಬೇಕು ಎಂದು ಹಲವರು ಅವರ ಬೆಂಬಲಕ್ಕೆ ನಿಂತಿದ್ದಾರೆ.

ಖ್ಯಾತ ನಟ ಪ್ರದೀಪ್ ರಾವತ್ ನಿಧನ

‘ಗಜನಿ’, ‘ಲಗಾನ್’ ಹಾಗೂ ಮಹಾಭಾರತ ಧಾರಾವಾಹಿಯ ಅಶ್ವತ್ಥಾಮ ಪಾತ್ರದ ಮೂಲಕ ಇಡೀ ಭಾರತೀಯ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದ ಹಿರಿಯ ನಟ ಪ್ರದೀಪ್ ರಾವತ್ (74) ಅವರು ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಇತ್ತೀಚೆಗೆ ಚಿಕಿತ್ಸೆ ಫಲಕಾರಿಯಾಗದೆ ಮುಂಬೈನಲ್ಲಿ ಕೊನೆಯುಸಿರೆಳೆದರು. ತಮ್ಮ ವಿಶಿಷ್ಟ ಖಳನಟನೆಯಿಂದ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಮನೆಯಲ್ಲಿ ಐಷಾರಾಮಿ ಜೀವನ ನಡೆಸಿದ್ದ ಪ್ರದೀಪ್ ರಾವತ್; ಹೊರ ಬಂದಿದ್ದೇಕೆ??

ಕನ್ನಡದಲ್ಲಿ ದರ್ಶನ್ ಹಾಗೂ ಸುದೀಪ್ ನಟನೆಯ ಸಿನಿಮಾಗಳಲ್ಲಿ ಪ್ರದೀಪ್ ರಾವತ್ ನಟಿಸಿದ್ದರು. ಬಾಲಿವುಡ್​​ನಲ್ಲಿ ಸಲ್ಮಾನ್ ಖಾನ್, ಆಮಿರ್ ಖಾನ್​ಗೆ ಅವರು ಆಪ್ತರಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು