AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ ಪತ್ನಿ ಲತಾಗೆ ಎದುರಾಯ್ತು ಸಂಕಷ್ಟ; ಫೋರ್ಜರಿ ಕೇಸ್ ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಅಸ್ತು

‘ಕೊಚಾಡಿಯನ್​’ ಸಿನಿಮಾ ನಿರ್ಮಾಣ ಮಾಡಿದ್ದ ಮೀಡಿಯಾ ಒನ್ ಲಿಮಿಟೆಡ್​ ಪರವಾಗಿ ಲತಾ ಗ್ಯಾರಂಟಿ ಸಹಿ ಮಾಡಿದ್ದರು. ಸಿನಿಮಾ ಸೋತರೆ ನಷ್ಟ ಭರಿಸುವ ಭರವಸೆ ನೀಡಿದ್ದರು.

ರಜನಿಕಾಂತ್ ಪತ್ನಿ ಲತಾಗೆ ಎದುರಾಯ್ತು ಸಂಕಷ್ಟ; ಫೋರ್ಜರಿ ಕೇಸ್ ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಅಸ್ತು
ರಜನಿಕಾಂತ್​-ಲತಾ
TV9 Web
| Edited By: |

Updated on: Aug 09, 2022 | 6:17 PM

Share

ನಟ ರಜನಿಕಾಂತ್ (Rajinikanth) ಅವರ ಪತ್ನಿ ಲತಾಗೆ ಸಂಕಷ್ಟ ಮುಂದುವರಿದಿದೆ. ‘ಕೊಚಾಡಿಯನ್​’ ಸಿನಿಮಾಗೆ ಸಂಬಂಧಿಸಿ ಹಣಕಾಸು ವಿವಾದ ಕೋರ್ಟ್ ಮೆಟ್ಟಿಲು ಏರಿತ್ತು. ಲತಾ ವಿರುದ್ಧ ಫೋರ್ಜರಿ, ವಂಚನೆ, ಸುಳ್ಳು ಹೇಳಿಕೆ ಕೇಸ್ ದಾಖಲಾಗಿತ್ತು. ಅವರ ವಿರುದ್ಧದ ವಂಚನೆ, ಸುಳ್ಳು ಹೇಳಿಕೆ ಪ್ರಕರಣಗಳನ್ನು ರದ್ದುಪಡಿಸಿರುವ ಕರ್ನಾಟಕ ಹೈಕೋರ್ಟ್, ಫೋರ್ಜರಿ ಕೇಸ್ ಮುಂದುವರಿಸಲು ಸೂಚನೆ ನೀಡಿದೆ. ಇದರಿಂದ ಲತಾ (Latha Rajinikanth) ಅವರಿಗೆ ಒಂದು ಕಡೆಯಲ್ಲಿ ರಿಲೀಫ್ ಸಿಕ್ಕರೆ, ಮತ್ತೊಂದೆಡೆ ಸಂಕಷ್ಟ ಮುಂದುವರಿದಿದೆ.

2014ರಲ್ಲಿ ರಜನಿಕಾಂತ್ ನಟನೆಯ ‘ಕೊಚಾಡಿಯನ್’ ಸಿನಿಮಾ ತೆರೆಗೆ ಬಂತು. ಈ ಚಿತ್ರಕ್ಕೆ ರಜನಿಕಾಂತ್ ಅವರ ಮಗಳು ಸೌಂದರ್ಯಾ ರಜನಿಕಾಂತ್ ನಿರ್ದೇಶನ ಮಾಡಿದ್ದರು. ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಈ ಚಿತ್ರದಲ್ಲಿ ನಟಿಸಿದ್ದರು. 125 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಗಳಿಕೆ ಮಾಡಿದ್ದು ಕೇವಲ 42 ಕೋಟಿ ರೂಪಾಯಿ ಮಾತ್ರ. ಇದರಿಂದ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸಿದ್ದರು.

‘ಕೊಚಾಡಿಯನ್​’ ಸಿನಿಮಾ ನಿರ್ಮಾಣ ಮಾಡಿದ್ದ ಮೀಡಿಯಾ ಒನ್ ಲಿಮಿಟೆಡ್​ ಪರವಾಗಿ ಲತಾ ಗ್ಯಾರಂಟಿ ಸಹಿ ಮಾಡಿದ್ದರು. ಸಿನಿಮಾ ಸೋತರೆ ನಷ್ಟ ಭರಿಸುವ ಭರವಸೆ ನೀಡಿದ್ದರು. ಈ ಸಿನಿಮಾ ಬಾಕ್ಸ್​ ಆಫೀಸ್​​ನಲ್ಲಿ ಸೋಲು ಕಂಡಿತು. ಆದರೆ, ಭರವಸೆಯಂತೆ ಲತಾ ನಷ್ಟ ಭರ್ತಿ ಮಾಡಿಲ್ಲವೆಂದು ಆರೋಪವಿದೆ.

ಇದನ್ನೂ ಓದಿ
Image
Jailer: ಶಿವಣ್ಣ-ರಜನಿಕಾಂತ್​ ಸಿನಿಮಾಗೆ ‘ಜೈಲರ್​’ ಶೀರ್ಷಿಕೆ: ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿಸಿದ ಪೋಸ್ಟರ್​
Image
ರಜನಿಕಾಂತ್​ಗೆ ನಾಯಕಿ ಆದ ಐಶ್ವರ್ಯಾ ರೈ; ಹೊಸ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ
Image
ಡಿವೋರ್ಸ್​ ಬಳಿಕ ರಜನಿ ಪುತ್ರಿಗೆ ಮತ್ತೆ ಕಂಟಕ; ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರಜನಿಕಾಂತ್​
Image
ಕೋಟ್ಯಂತರ ರೂ. ಸಂಭಾವನೆ ಪಡೆಯುವ ರಜನಿಕಾಂತ್​ ಎಷ್ಟು ಆಸ್ತಿ ಹೊಂದಿದ್ದಾರೆ? ಇಲ್ಲಿದೆ ವಿವರ..

ಈ ಪ್ರಕರಣದ ಬಗ್ಗೆ ವರದಿ ಮಾಡದಂತೆ ಲತಾ ತಡೆಯಾಜ್ಞೆ ಕೋರಿದ್ದರು. ಮಾಧ್ಯಮಗಳ ವಿರುದ್ಧ ಲತಾ ತಡೆಯಾಜ್ಞೆ ತಂದಿದ್ದರು. ಆದರೆ, ತಡೆಯಾಜ್ಞೆ ಪಡೆಯಲು ಅವರು ಬೆಂಗಳೂರು ಪ್ರೆಸ್ ಕ್ಲಬ್ ವಿಳಾಸಕ್ಕೆ ಸಂಬಂಧಿಸಿದ ನಕಲಿ ದಾಖಲೆ ಬಳಕೆ ಮಾಡಿದ್ದರು ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ಮೆ.ಆ್ಯಡ್ ಬ್ಯೂರೋ ಅಡ್ವರ್ಟೈಸಿಂಗ್ ಪ್ರೈ. ಲಿ ಖಾಸಗಿ ದೂರು ನೀಡಿತ್ತು. ಈ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

ಇದನ್ನೂ ಓದಿ: ರಾಜಕೀಯಕ್ಕೆ ಮರಳುವುದಿಲ್ಲ ಎಂದ ಸೂಪರ್​​ಸ್ಟಾರ್ ರಜನಿಕಾಂತ್

ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಲತಾ ರಜನಿಕಾಂತ್ ಅರ್ಜಿ ಸಲ್ಲಿಸಿದ್ದರು. ವಂಚನೆ, ಸುಳ್ಳು ಹೇಳಿಕೆ ಪ್ರಕರಣಗಳನ್ನು ರದ್ದುಪಡಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ, ಫೋರ್ಜರಿ ಕೇಸ್ ಮುಂದುವರಿಸಲು ಸೂಚನೆ ನೀಡಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ