AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Laththi: ಪೊಲೀಸ್ ಕಾನ್‌ ಸ್ಟೇಬಲ್ ಪಾತ್ರದಲ್ಲಿ ಲಾಠಿ ಹಿಡಿದು ಬಂದ ನಟ ವಿಶಾಲ್: ಡಿ. 22ಕ್ಕೆ ಚಿತ್ರ ರಿಲೀಸ್​

ಕಾಲಿವುಡ್ ಸ್ಟಾರ್​ ನಟ ವಿಶಾಲ್​ ಅಭಿನಯನದ 'ಲಾಠಿ' ಚಿತ್ರ ವಿಶ್ವದಾದ್ಯಂತ ತೆರೆಗೆ ಬರಲು ಸಿದ್ದವಾಗಿದ್ದು, ಡಿ. 22ರಂದು ಬಿಡುಗಡೆಯಾಗಲಿದೆ.

Laththi: ಪೊಲೀಸ್ ಕಾನ್‌ ಸ್ಟೇಬಲ್ ಪಾತ್ರದಲ್ಲಿ ಲಾಠಿ ಹಿಡಿದು ಬಂದ ನಟ ವಿಶಾಲ್: ಡಿ. 22ಕ್ಕೆ ಚಿತ್ರ ರಿಲೀಸ್​
ಲಾಠಿ ಚಿತ್ರದ ಪೋಸ್ಟರ್​, ನಟ ವಿಶಾಲ್​
TV9 Web
| Edited By: |

Updated on: Dec 17, 2022 | 7:36 PM

Share

ಕಾಲಿವುಡ್ ಸ್ಟಾರ್​ ನಟ ವಿಶಾಲ್​ ಅಭಿನಯನದ ‘ಲಾಠಿ’ (Laththi) ಚಿತ್ರ ವಿಶ್ವದಾದ್ಯಂತ ತೆರೆಗೆ ಬರಲು ಸಿದ್ದವಾಗಿದ್ದು, ಡಿ. 22ರಂದು ಬಿಡುಗಡೆಯಾಗಲಿದೆ. ಈಗಾಗಲೇ ನಟ ವಿಶಾಲ್​ ಕರ್ನಾಟಕದ ಹಲವೆಡೆ ಚಿತ್ರದ ಪ್ರಮೋಷನ್ ಕೂಡ ಮಾಡಿದ್ದಾರೆ. ಇಂದು (ಡಿ. 17) ಬೆಂಗಳೂರಿನಲ್ಲಿ ‘ಲಾಠಿ’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಮಾಡಲಾಗಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆಯಾಗುತ್ತಿದ್ದು, ಪ್ಯಾನ್ ಇಂಡಿಯಾ ರೇಂಜಿಗೆ ಬಿಡುಗಡೆ ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಈಗಾಗಲೇ ಚಿತ್ರದ ಫಸ್ಟ್​ ಲುಕ್​​ ಮತ್ತು ಟೀಸರ್​ನಿಂದಲೇ ‘ಲಾಠಿ’ ಚಿತ್ರ ಗಮನಸೆಳೆದಿದೆ.

‘ಲಾಠಿ’ ಚಿತ್ರದಲ್ಲಿ ನಟ ವಿಶಾಲ್​ ಅವರು ಪೊಲೀಸ್ ಕಾನ್‌ ಸ್ಟೇಬಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿನೋದ್ ಕುಮಾರ್ ನಿರ್ದೇಶಿಸಿದ್ದು, ಯುವನ್ ಶಂಕರ್ ರಾಜಾ ಸಂಗೀತ ಸಂಯೋಜಿಸಿದ್ದಾರೆ. ಇದೇ ವೇಳೆ ಮಾತನಾಡಿದ ನಟ ವಿಶಾಲ್​ ‘ಚಿತ್ರ ಉತ್ತಮ ಕಥಾಹಂದರ ಹೊಂದಿದೆ. ಈವರೆಗೂ ಮಾಡಿರದ ವಿಭಿನ್ನ ಪಾತ್ರದಲ್ಲಿ ನಟಿಸಿದ್ದು ಸಂತಸ ತಂದಿದೆ. ಅಭಿಮಾನಿಗಳಿಗೆ ತಮ್ಮ ನಟನೆ ಸಿಕ್ಕಾಪಟ್ಟೆ ಖುಷಿ ಕೊಡಲಿದೆ. ಒಂದು ವೇಳೆ ನಾನು ಕಮೀಷನರ್ ಆದರೆ ಕಾನ್‌ ಸ್ಟೇಬಲ್ಸ್​ಗೆ ಸಂಬಳ ಹೆಚ್ಚಿಸುವೆ’ ಎಂದರು.

ಇದನ್ನೂ ಓದಿ: Besharam Rang: ಕೇಸರಿ ಬಿಕಿನಿ ವಿವಾದ: `ಪಠಾಣ್’ ನಟಿ ದೀಪಿಕಾ ಪಡುಕೋಣೆ ಪರ ನಿಂತ ರಮ್ಯಾ

ಪುನೀತ್​ರಾಜ್​ ಕುಮಾರ್​​ನ ನೆನೆದ ನಟ ವಿಶಾಲ್

‘ಲಾಠಿ’ ಚಿತ್ರದ ಪ್ರೀ ರಿಲೀಸ್ ಇವೆಂಟ್ ವೇಳೆ ನಟ ವಿಶಾಲ್ ನಟ ಪುನೀತ್​ರಾಜ್​ ಕುಮಾರ್​ ಅವರನ್ನು ನೆನೆಪಿಸಿಕೊಂಡರು. ‘ಅಪ್ಪು ಅವರನ್ನು ಮರೆಯೋದಕ್ಕೆ ಸಾಧ್ಯವೆ ಇಲ್ಲ. 18 ವರ್ಷದಿಂದ ನನಗೆ ಪ್ರೀತಿ ಕೊಟ್ಟಿದ್ದೀರಾ. ನಾನು ಯಾವತ್ತು ಕನ್ನಡಿಗರನ್ನ ಮರೆಯಲ್ಲ. ಲಾಠಿ ಚಿತ್ರಕ್ಕೆ ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದೀನಿ. ತುಂಬಾ ಫಿಸಿಕಲ್ ಹರ್ಟ್ ಮಾಡಿಕೊಂಡಿದ್ದೇನೆ. ಡಿ. 30ಕ್ಕೆ ಲಾಠಿ ಚಿತ್ರ ಹಿಂದಿಯಲ್ಲೂ ರಿಲೀಸ್ ಆಗುತ್ತೆ. ಚಿತ್ರದ ಕ್ಲೈಮಾಕ್ಸ್ ಒಂದೇ ಸ್ಥಳದಲ್ಲಿ ಆಗಿದೆ. ಅದನ್ನ ನೀವು ತೆರೆಮೇಲೆ ನೋಡಬೇಕು’ ಎಂದು ಹೇಳಿದರು.

ಸದ್ಯದಲ್ಲೇ ಕನ್ನಡ ಸಿನಿಮಾದಲ್ಲಿ ನಟಿಸುತ್ತೇನೆ

ನಟ ಶಿವರಾಜ್​ಕುಮಾರ್ ನಟನೆಯ ‘ವೇದ’ ಚಿತ್ರ ಡಿ. 23ಕ್ಕೆ ಬಿಡುಗಡೆಯಾಗುತ್ತಿದೆ. ಹೀಗಾಗಿ ‘ಲಾಠಿ’ ಮತ್ತು ‘ವೇದ’ ಚಿತ್ರಗಳ ಮಧ್ಯೆ ವಾರ್​ ನಡೆಯಲಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಈ ಕುರಿತಾಗಿ ವಿಶಾಲ್​ ಪ್ರತಿಕ್ರಿಯೆ ನೀಡಿದ್ದು, ವೇದ ಸಿನಿಮಾ ಜೊತೆಗೆ ಬರುತ್ತಿದ್ದೇವೆ. ಆದರೆ ಇದು ಕಾಂಪೀಟೀಷನ್ ಅಲ್ಲ ಎಂದರು. ಸದ್ಯದಲ್ಲೇ ಕನ್ನಡ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ತಮ್ಮ ಆಸೆಯನ್ನು ಸಹ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ