AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಕರಣ್ ಜೋಹರ್​​ನಿಂದ ಐದು ಕೋಟಿ ರೂಪಾಯಿ ಸುಲಿಗೆ ಮಾಡಲು ನಡೆದಿತ್ತು ಪ್ಲ್ಯಾನ್​

ಕರಣ್ ಜೋಹರ್ ಅವರಿಗೆ ಬೆದರಿಕೆವೊಡ್ಡಿ ಹಣ ಕಿತ್ತುಕೊಳ್ಳಲು ಲಾರೆನ್ಸ್​​​ ಬಿಷ್ಣೋಯ್ ಗ್ಯಾಂಗ್​ನಲ್ಲಿ ಒಬ್ಬನಾದ ಸಿದ್ದೇಶ್​ ಕಾಂಬ್ಳೆ ಸಂಚು ರೂಪಿಸಿದ್ದ. ಈ ವಿಚಾರ ಕರಣ್ ಫ್ಯಾನ್ಸ್ ವಲಯದಲ್ಲಿ ಆತಂಕ ಮೂಡಿಸಿದೆ.

ನಿರ್ಮಾಪಕ ಕರಣ್ ಜೋಹರ್​​ನಿಂದ ಐದು ಕೋಟಿ ರೂಪಾಯಿ ಸುಲಿಗೆ ಮಾಡಲು ನಡೆದಿತ್ತು ಪ್ಲ್ಯಾನ್​
ಲಾರೆನ್ಸ್-ಕರಣ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 19, 2022 | 4:20 PM

ನಿರ್ಮಾಪಕ ಕರಣ್ ಜೋಹರ್ ಅವರು (Karan Johar) ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರ ಬರ್ತ್​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 55ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಕೊವಿಡ್ ಅಂಟಿತ್ತು. ಈ ವಿಚಾರದಲ್ಲಿ ಕರಣ್​ ಜೋಹರ್ ಅವರ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಇದಕ್ಕೆ ಕರಣ್ ಜೋಹರ್ ಅವರು ಅಸಮಾಧಾನ ಹೊರಹಾಕಿದ್ದರು. ಈ ಮಧ್ಯೆ ಶಾಕಿಂಗ್ ವಿಚಾರ ಒಂದು ಹೊರ ಬಿದ್ದಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದಲ್ಲಿ ಕೈವಾಡ ಇದೆ ಎನ್ನಲಾದ ಲಾರೆನ್ಸ್​​​ ಬಿಷ್ಣೋಯ್ (Lawrence Bishnoi ) ಗ್ಯಾಂಗ್​ನ ಕೆಲವರು ಕರಣ್​ ಜೋಹರ್ ಅವರಿಂದ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಪ್ಲ್ಯಾನ್ ರೂಪಿಸಿದ್ದರು ಎಂದು ವರದಿ ಆಗಿದೆ.

ಕರಣ್ ಜೋಹರ್ ಅವರು ನಿರ್ಮಾಪಕನಾಗಿ, ನಿರ್ದೇಶಕನಾಗಿ, ನಿರೂಪಕನಾಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ನೂರಾರು ಕೋಟಿ ರೂಪಾಯಿ ಆಸ್ತಿಗೆ ಅವರು ಒಡೆಯ. ಇವರಿಗೆ ಬೆದರಿಕೆವೊಡ್ಡಿ ಹಣ ಕಿತ್ತುಕೊಳ್ಳಲು ಲಾರೆನ್ಸ್​​​ ಬಿಷ್ಣೋಯ್ ಗ್ಯಾಂಗ್​ನಲ್ಲಿ ಒಬ್ಬನಾದ ಸಿದ್ದೇಶ್​ ಕಾಂಬ್ಳೆ ಸಂಚು ರೂಪಿಸಿದ್ದ. ಈ ವಿಚಾರ ಕರಣ್ ಫ್ಯಾನ್ಸ್ ವಲಯದಲ್ಲಿ ಆತಂಕ ಮೂಡಿಸಿದೆ.

ಸಿಧು ಅವರನ್ನು ಶೂಟರ್​ ಸಂತೋಷ್ ಜಾಧವ್​ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಸಂತೋಷ್ ಜತೆ ಸಿದ್ದೇಶ್​ ತುಂಬಾನೇ ಒಡನಾಟ ಹೊಂದಿದ್ದ. ಇಬ್ಬರೂ ಲಾರೆನ್ಸ್ ಗ್ಯಾಂಗ್​ನವರಾಗಿದ್ದಾರೆ. ವಿಚಾರಣೆ ವೇಳೆ ಸಿದ್ದೇಶ್ ಈ ವಿಚಾರ ಹೇಳಿಕೊಂಡಿದ್ದಾನೆ ಎಂದು ವರದಿ ಆಗಿದೆ. ಆದರೆ, ಪೊಲೀಸರು ಇದನ್ನು ಅಧಿಕೃತಗೊಳಿಸಿಲ್ಲ.

ಇದನ್ನೂ ಓದಿ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಇದನ್ನೂ ಓದಿ: ‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಅಸಮಾಧಾನ ಹೊರಹಾಕಿದ್ದ ಕರಣ್

ಕರಣ್ ಅವರು ಈ ಬಾರಿ 50ನೇ ವರ್ಷಕ್ಕೆ ಕಾಲಿಟ್ಟರು. ಹೀಗಾಗಿ ಬರ್ತ್​ಡೇ ಪಾರ್ಟಿ ಜೋರಾಗಿಯೇ ಇತ್ತು. ರಶ್ಮಿಕಾ ಮಂದಣ್ಣ, ಬಾಲಿವುಡ್​ ನಟ ಶಾರುಖ್ ಖಾನ್​, ಟಾಲಿವುಡ್​ ಹೀರೋ ವಿಜಯ್ ದೇವರಕೊಂಡ ಮೊದಲಾದವರು ಭಾಗಿ ಆಗಿದ್ದರು. ಪಾರ್ಟಿ ಮುಗಿದ ಕೆಲವೇ ದಿನಗಳಲ್ಲಿ ಕತ್ರಿನಾ ಹಾಗೂ ಶಾರುಖ್​ಗೆ ಕೊವಿಡ್ ಪಾಸಿಟಿವ್ ಆಯಿತು. ಇವರಲ್ಲದೆ ಇನ್ನೂ ಅನೇಕ ಸೆಲೆಬ್ರಿಟಿಗಳಿಗೆ ಕೊವಿಡ್ ಆಗಿತ್ತು ಎಂದು ವರದಿಗಳು ಹೇಳಿವೆ. ಇದನ್ನು ಕೆಲವರು ‘ಕರಣ್ ಜೋಹರ್ ಪಾರ್ಟಿ ಮಹಿಮೆ’ ಎಂದು ಲೇವಡಿ ಮಾಡಿದರು. ಈ ವಿಚಾರ ಕರಣ್​ಗೆ ಬೇಸರ ತರಿಸಿದೆ.

‘ಒಂದು ವಾರದಲ್ಲಿ ಸಾಕಷ್ಟು ವಿಚಾರಗಳು ನಡೆಯುತ್ತಿರುತ್ತವೆ. ಯಾರಿಗೆ ಎಲ್ಲಿ ಕೊವಿಡ್ ಅಂಟಿದೆ ಅಂತ ಹೇಗೆ ಹೇಳುವುದು?ಪಾರ್ಟಿ ಮಾತ್ರ ಅಲ್ಲ, ಮದುವೆಗಳಿದ್ದವು, ಅನೇಕ ಕಾರ್ಯಕ್ರಮಗಳಿದ್ದವು, ಶೂಟಿಂಗ್ ಇತ್ತು. ನನ್ನನ್ನು ಮಾತ್ರ ಏಕೆ ದೂಷಿಸಲಾಗುತ್ತಿದೆ? ಎಲ್ಲವೂ ನನಗೆ ಏಕೆ ಬರುತ್ತದೆ? ಕೊವಿಡ್​​ ಹರಡಿದ್ದಕ್ಕೂ ನನಗೆ ಯಾವುದೇ ಸಂಬಂಧವಿಲ್ಲ. ನಾನು ಇದಕ್ಕೆ ಪೂರ್ಣವಿರಾಮ ಇಡಲು ಬಯಸುತ್ತೇನೆ. ಅದು ಆಗಿದ್ದು ನನ್ನಿಂದ ಅಲ್ಲ. ಈ ಕೊವಿಡ್​ ಆರಂಭಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದಿದ್ದರು ಕರಣ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್