AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಕರಣ್ ಜೋಹರ್​​ನಿಂದ ಐದು ಕೋಟಿ ರೂಪಾಯಿ ಸುಲಿಗೆ ಮಾಡಲು ನಡೆದಿತ್ತು ಪ್ಲ್ಯಾನ್​

ಕರಣ್ ಜೋಹರ್ ಅವರಿಗೆ ಬೆದರಿಕೆವೊಡ್ಡಿ ಹಣ ಕಿತ್ತುಕೊಳ್ಳಲು ಲಾರೆನ್ಸ್​​​ ಬಿಷ್ಣೋಯ್ ಗ್ಯಾಂಗ್​ನಲ್ಲಿ ಒಬ್ಬನಾದ ಸಿದ್ದೇಶ್​ ಕಾಂಬ್ಳೆ ಸಂಚು ರೂಪಿಸಿದ್ದ. ಈ ವಿಚಾರ ಕರಣ್ ಫ್ಯಾನ್ಸ್ ವಲಯದಲ್ಲಿ ಆತಂಕ ಮೂಡಿಸಿದೆ.

ನಿರ್ಮಾಪಕ ಕರಣ್ ಜೋಹರ್​​ನಿಂದ ಐದು ಕೋಟಿ ರೂಪಾಯಿ ಸುಲಿಗೆ ಮಾಡಲು ನಡೆದಿತ್ತು ಪ್ಲ್ಯಾನ್​
ಲಾರೆನ್ಸ್-ಕರಣ್​
TV9 Web
| Edited By: |

Updated on: Jun 19, 2022 | 4:20 PM

Share

ನಿರ್ಮಾಪಕ ಕರಣ್ ಜೋಹರ್ ಅವರು (Karan Johar) ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರ ಬರ್ತ್​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 55ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಕೊವಿಡ್ ಅಂಟಿತ್ತು. ಈ ವಿಚಾರದಲ್ಲಿ ಕರಣ್​ ಜೋಹರ್ ಅವರ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಇದಕ್ಕೆ ಕರಣ್ ಜೋಹರ್ ಅವರು ಅಸಮಾಧಾನ ಹೊರಹಾಕಿದ್ದರು. ಈ ಮಧ್ಯೆ ಶಾಕಿಂಗ್ ವಿಚಾರ ಒಂದು ಹೊರ ಬಿದ್ದಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದಲ್ಲಿ ಕೈವಾಡ ಇದೆ ಎನ್ನಲಾದ ಲಾರೆನ್ಸ್​​​ ಬಿಷ್ಣೋಯ್ (Lawrence Bishnoi ) ಗ್ಯಾಂಗ್​ನ ಕೆಲವರು ಕರಣ್​ ಜೋಹರ್ ಅವರಿಂದ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಪ್ಲ್ಯಾನ್ ರೂಪಿಸಿದ್ದರು ಎಂದು ವರದಿ ಆಗಿದೆ.

ಕರಣ್ ಜೋಹರ್ ಅವರು ನಿರ್ಮಾಪಕನಾಗಿ, ನಿರ್ದೇಶಕನಾಗಿ, ನಿರೂಪಕನಾಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ನೂರಾರು ಕೋಟಿ ರೂಪಾಯಿ ಆಸ್ತಿಗೆ ಅವರು ಒಡೆಯ. ಇವರಿಗೆ ಬೆದರಿಕೆವೊಡ್ಡಿ ಹಣ ಕಿತ್ತುಕೊಳ್ಳಲು ಲಾರೆನ್ಸ್​​​ ಬಿಷ್ಣೋಯ್ ಗ್ಯಾಂಗ್​ನಲ್ಲಿ ಒಬ್ಬನಾದ ಸಿದ್ದೇಶ್​ ಕಾಂಬ್ಳೆ ಸಂಚು ರೂಪಿಸಿದ್ದ. ಈ ವಿಚಾರ ಕರಣ್ ಫ್ಯಾನ್ಸ್ ವಲಯದಲ್ಲಿ ಆತಂಕ ಮೂಡಿಸಿದೆ.

ಸಿಧು ಅವರನ್ನು ಶೂಟರ್​ ಸಂತೋಷ್ ಜಾಧವ್​ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಸಂತೋಷ್ ಜತೆ ಸಿದ್ದೇಶ್​ ತುಂಬಾನೇ ಒಡನಾಟ ಹೊಂದಿದ್ದ. ಇಬ್ಬರೂ ಲಾರೆನ್ಸ್ ಗ್ಯಾಂಗ್​ನವರಾಗಿದ್ದಾರೆ. ವಿಚಾರಣೆ ವೇಳೆ ಸಿದ್ದೇಶ್ ಈ ವಿಚಾರ ಹೇಳಿಕೊಂಡಿದ್ದಾನೆ ಎಂದು ವರದಿ ಆಗಿದೆ. ಆದರೆ, ಪೊಲೀಸರು ಇದನ್ನು ಅಧಿಕೃತಗೊಳಿಸಿಲ್ಲ.

ಇದನ್ನೂ ಓದಿ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಇದನ್ನೂ ಓದಿ: ‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಅಸಮಾಧಾನ ಹೊರಹಾಕಿದ್ದ ಕರಣ್

ಕರಣ್ ಅವರು ಈ ಬಾರಿ 50ನೇ ವರ್ಷಕ್ಕೆ ಕಾಲಿಟ್ಟರು. ಹೀಗಾಗಿ ಬರ್ತ್​ಡೇ ಪಾರ್ಟಿ ಜೋರಾಗಿಯೇ ಇತ್ತು. ರಶ್ಮಿಕಾ ಮಂದಣ್ಣ, ಬಾಲಿವುಡ್​ ನಟ ಶಾರುಖ್ ಖಾನ್​, ಟಾಲಿವುಡ್​ ಹೀರೋ ವಿಜಯ್ ದೇವರಕೊಂಡ ಮೊದಲಾದವರು ಭಾಗಿ ಆಗಿದ್ದರು. ಪಾರ್ಟಿ ಮುಗಿದ ಕೆಲವೇ ದಿನಗಳಲ್ಲಿ ಕತ್ರಿನಾ ಹಾಗೂ ಶಾರುಖ್​ಗೆ ಕೊವಿಡ್ ಪಾಸಿಟಿವ್ ಆಯಿತು. ಇವರಲ್ಲದೆ ಇನ್ನೂ ಅನೇಕ ಸೆಲೆಬ್ರಿಟಿಗಳಿಗೆ ಕೊವಿಡ್ ಆಗಿತ್ತು ಎಂದು ವರದಿಗಳು ಹೇಳಿವೆ. ಇದನ್ನು ಕೆಲವರು ‘ಕರಣ್ ಜೋಹರ್ ಪಾರ್ಟಿ ಮಹಿಮೆ’ ಎಂದು ಲೇವಡಿ ಮಾಡಿದರು. ಈ ವಿಚಾರ ಕರಣ್​ಗೆ ಬೇಸರ ತರಿಸಿದೆ.

‘ಒಂದು ವಾರದಲ್ಲಿ ಸಾಕಷ್ಟು ವಿಚಾರಗಳು ನಡೆಯುತ್ತಿರುತ್ತವೆ. ಯಾರಿಗೆ ಎಲ್ಲಿ ಕೊವಿಡ್ ಅಂಟಿದೆ ಅಂತ ಹೇಗೆ ಹೇಳುವುದು?ಪಾರ್ಟಿ ಮಾತ್ರ ಅಲ್ಲ, ಮದುವೆಗಳಿದ್ದವು, ಅನೇಕ ಕಾರ್ಯಕ್ರಮಗಳಿದ್ದವು, ಶೂಟಿಂಗ್ ಇತ್ತು. ನನ್ನನ್ನು ಮಾತ್ರ ಏಕೆ ದೂಷಿಸಲಾಗುತ್ತಿದೆ? ಎಲ್ಲವೂ ನನಗೆ ಏಕೆ ಬರುತ್ತದೆ? ಕೊವಿಡ್​​ ಹರಡಿದ್ದಕ್ಕೂ ನನಗೆ ಯಾವುದೇ ಸಂಬಂಧವಿಲ್ಲ. ನಾನು ಇದಕ್ಕೆ ಪೂರ್ಣವಿರಾಮ ಇಡಲು ಬಯಸುತ್ತೇನೆ. ಅದು ಆಗಿದ್ದು ನನ್ನಿಂದ ಅಲ್ಲ. ಈ ಕೊವಿಡ್​ ಆರಂಭಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದಿದ್ದರು ಕರಣ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ