AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leena Manimekalai: ಕಾಳಿ ಬಳಿಕ ಶಿವ, ಪಾರ್ವತಿ ವೇಷಧಾರಿಗಳು ಧೂಮಪಾನ ಮಾಡುತ್ತಿರುವ ಫೋಟೋ ಹಾಕಿದ ಲೀನಾ ಮಣಿಮೇಕಲೈ

Leena Manimekalai Controversy: ಕಾಳಿ ಪೋಸ್ಟರ್​ ವಿವಾದದ ಬಳಿಕ ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ಮತ್ತೊಂದು ಪೋಸ್ಟ್​ ವೈರಲ್​ ಆಗುತ್ತಿದೆ. ಇದು ಅನೇಕರ ಟೀಕೆಗೆ ಗುರಿ ಆಗುತ್ತಿದೆ.

Leena Manimekalai: ಕಾಳಿ ಬಳಿಕ ಶಿವ, ಪಾರ್ವತಿ ವೇಷಧಾರಿಗಳು ಧೂಮಪಾನ ಮಾಡುತ್ತಿರುವ ಫೋಟೋ ಹಾಕಿದ ಲೀನಾ ಮಣಿಮೇಕಲೈ
ಲೀನಾ ಮಣಿಮೇಕಲೈ
TV9 Web
| Updated By: ಮದನ್​ ಕುಮಾರ್​|

Updated on:Jul 07, 2022 | 10:30 AM

Share

ನಿರ್ದೇಶಕಿ ಲೀನಾ ಮಣಿಮೇಕಲೈ (Leena Manimekalai) ಅವರು ದಿನಕ್ಕೊಂದು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಕಾಳಿ ದೇವಿಯ (Kaali) ಪೋಸ್ಟರ್​ ಹಂಚಿಕೊಂಡಿದ್ದು ಸುದ್ದಿ ಆಗಿತ್ತು. ಅವಹೇಳನಕಾರಿಯಾಗಿ ಕಾಳಿ ದೇವಿಯನ್ನು ಚಿತ್ರಿಸಲಾಗಿದೆ ಎಂಬ ಆರೋಪ ಎದುರಾದ ಬೆನ್ನಲ್ಲೇ ಟ್ವಿಟರ್​ನಿಂದ ಆ ಪೋಸ್ಟರ್​ ಅನ್ನು ತಡೆ ಹಿಡಿಯಲಾಯಿತು. ಲೀನಾ ಮಣಿಮೇಕಲೈ ಅವರು ಇಷ್ಟಕ್ಕೇ ಸುಮ್ಮನಾಗಿಲ್ಲ. ಈಗ ಶಿವ ಮತ್ತು ಪಾರ್ವತಿ ವೇಷಧಾರಿಗಳು ಧೂಮಪಾನ (Smoking) ಮಾಡುತ್ತಿರುವ ಫೋಟೋವನ್ನು ಅವರೀಗ ಹಂಚಿಕೊಂಡಿದ್ದಾರೆ. ಇದು ಮತ್ತೆ ವಿವಾದಕ್ಕೆ ಕಾರಣ ಆಗುವಂತಿದೆ. ಅನೇಕರು ಈ ಪೋಸ್ಟ್​ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಚಾರಕ್ಕಾಗಿಯೇ ಲೀನಾ ಮಣಿಮೇಕಲೈ ಅವರು ಈ ರೀತಿ ಮಾಡುತ್ತಿದ್ದಾರೆ ಎಂದು ಅವರನ್ನು ನೆಟ್ಟಿಗರು ಟೀಕಿಸಿದ್ದಾರೆ. ಸದ್ಯ ಈ ಪೋಸ್ಟ್​ ವೈರಲ್​ ಆಗುತ್ತಿದೆ.

ಈ ಫೋಟೋವನ್ನು ಪೋಸ್ಟ್​ ಮಾಡಿದ ಕೆಲವೇ ನಿಮಿಷಗಳಲ್ಲಿ ಸಾವಿರಾರು ಕಮೆಂಟ್​ಗಳು ಬಂದಿವೆ. ಅನೇಕರು ಲೀನಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಳಿ ದೇವಿಯ ಪೋಸ್ಟರ್​ ಕಾರಣದಿಂದ ಹೊತ್ತಿಕೊಂಡ ವಿವಾದದ ಬೆಂಕಿಗೆ ಬೇಕಂತಲೇ ತುಪ್ಪ ಸುರಿಯುವ ಉದ್ದೇಶದಿಂದ ಲೀನಾ ಈ ರೀತಿ ಮಾಡಿದ್ದಾರೆ ಎಂಬುದು ನೆಟ್ಟಿಗರ ಆರೋಪ.

ಕಾಳಿ ದೇವಿಯ ಪೋಸ್ಟರ್​ ಆಕ್ಷೇಪಾರ್ಹ ರೀತಿಯಲ್ಲಿ ಇತ್ತು ಎಂಬ ಕಾರಣಕ್ಕೆ ಅನೇಕರು ಅದನ್ನು ವಿರೋಧಿಸಿದರು. ಪೋಸ್ಟರ್​ ತಡೆ ಹಿಡಿಯುವಂತೆ ಟ್ವಿಟರ್​ ಸಂಸ್ಥೆಗೆ ಸರ್ಕಾರದಿಂದ ಸೂಚನೆ ನೀಡಲಾಯಿತು. ಅದನ್ನು ಟ್ವಿಟರ್​ ಸಂಸ್ಥೆ ಪಾಲಿಸಿದೆ. ಅದರ ಪರಿಣಾಮವಾಗಿ ಜುಲೈ 5ರಿಂದ ಭಾರತದಲ್ಲಿರುವ ಟ್ವಿಟರ್​ ಬಳಕೆದಾರರಿಗೆ ಆ ಪೋಸ್ಟರ್​ ಕಾಣಿಸುತ್ತಿಲ್ಲ. ಅದರ ಬೆನ್ನಲ್ಲೇ ಲೀನಾ ಅವರು ಶಿವ-ಪಾರ್ವತಿ ವೇಷಧಾರಿಗಳ ಈ ಫೋಟೋ ಹಂಚಿಕೊಂಡು ಮತ್ತೆ ಸುದ್ದಿ ಆಗುತ್ತಿದ್ದಾರೆ.

ಲೀನಾ ಮಣಿಮೇಕಲೈ ಅವರು ಕೆನಡಾದಲ್ಲಿ ವಾಸವಾಗಿದ್ದಾರೆ. ಆದರೆ ಅವರು ಮೂಲತಃ ಭಾರತದವರು. ತಮಿಳುನಾಡಿನವರಾದ ಅವರು ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಅದರ ಮೂಲಕ ಹಲವು ಪ್ರಯೋಗಗಳನ್ನು ಅವರು ಮಾಡಿದ್ದಾರೆ. ಅನೇಕ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿ ಅವರು ಗುರುತಿಸಿಕೊಂಡಿದ್ದಾರೆ. ಹಲವಾರು ಚಿತ್ರೋತ್ಸವಗಳಲ್ಲಿ ಅವರ ಡಾಕ್ಯುಮೆಂಟರಿಗಳು ಪ್ರದರ್ಶನ ಆಗಿದ್ದೂ ಅಲ್ಲದೇ ಒಂದಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ಈಗ ವಿವಾದದಿಂದ ಅವರು ಹೆಚ್ಚು ಚರ್ಚೆಗೆ ಒಳಗಾಗುತ್ತಿದ್ದಾರೆ.

ಇದನ್ನೂ ಓದಿ: ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ ‘ಶಿರಚ್ಛೇದ’ ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ

Leena Manimekalai: ಕಾಳಿ ದೇವಿಗೆ ಅವಮಾನ ಮಾಡಿದ ಲೀನಾ ಮಣಿಮೇಕಲೈ ಯಾರು? ವಿವಾದ ಎಬ್ಬಿಸಿದ ಡೈರೆಕ್ಟರ್​ ಹಿನ್ನೆಲೆ ಇಲ್ಲಿದೆ

Published On - 10:16 am, Thu, 7 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!