AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ’, ವಿಚ್ಛೇದನ ವದಂತಿಗೆ ತೆರೆ ಎಳೆದ ನಟ ಶ್ರೀಕಾಂತ್   

ತಮ್ಮ ಪತ್ನಿ ಊಹಾ ಅವರಿಗೆ ವಿಚ್ಛೇದನ ನೀಡಲು ಮುಂದಾಗಿದ್ದಾರೆ ಎಂಬ ವದಂತಿಯನ್ನು ನಟ ಶ್ರೀಕಾಂತ್​ ಮೇಕಾ ತಳ್ಳಿಹಾಕಿದ್ದಾರೆ.

'ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ', ವಿಚ್ಛೇದನ ವದಂತಿಗೆ ತೆರೆ ಎಳೆದ ನಟ ಶ್ರೀಕಾಂತ್   
ನಟ ಶ್ರೀಕಾಂತ್​ ಮೇಕಾ ಕುಟುಂಬ
TV9 Web
| Edited By: |

Updated on:Nov 22, 2022 | 8:25 PM

Share

ಇತ್ತೀಚಿಗೆ ಸಿನಿಮಾ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ (divorce) ಪ್ರಕರಣಗಳು ಹೆಚ್ಚಾಗುತ್ತಿವೆ. ನಟ ನಾಗಚೈತನ್ಯ ಮತ್ತು ಸಮಂತಾ, ಮಂಚು ಮನೋಜ್ ಪ್ರಕರಣಗಳು ತಾಜಾ ಉದಾಹರಣೆ ಎಂದೇ ಹೇಳಬಹುದು. ಸದ್ಯ ಅದೇ ರೀತಿಯಾಗಿ ಮತ್ತೋರ್ವ ತೆಲುಗಿನ ಖ್ಯಾತ ನಟ ಶ್ರೀಕಾಂತ್ ಮೇಕಾ, ಊಹಾ ದಾಂಪತ್ಯ ಜೀವನದ ಕುರಿತು ಕೆಲ ಊಹಾಪೋಹಗಳು (rumours) ಹರಿದಾಡುತ್ತಿವೆ. ನಟ ಶ್ರೀಕಾಂತ್ ಮೇಕಾ ಮತ್ತು ಊಹಾ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ. ತಮ್ಮ ಪತ್ನಿಗೆ ಅವರು ವಿಚ್ಛೇದನ ನೀಡಲಿದ್ದಾರೆ ಎಂದೆಲ್ಲಾ ಇಲ್ಲಸಲ್ಲದ, ಯಾವುದೇ ಆಧಾರವಿಲ್ಲದೇ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಈ ವಿಚಾರ ಟಾಲಿವುಡ್​ನಲ್ಲಿ ಚರ್ಚೆಗೂ ಗ್ರಾಸವಾಗಿತ್ತು.  ಶ್ರೀಕಾಂತ್ ಮೇಕಾ ಅವರ ಫ್ಯಾನ್ಸ್​ ಅಂತೂ ಇದು ನಿಜನಾ, ಸುಳ್ಳಾ ಎಂಬ ಗೊಂದಲಕ್ಕೂ ಒಳಗಾಗಿದ್ದರು. ಸದ್ಯ ಈ ಎಲ್ಲಾ ವದಂತಿಗಳಿಗೆ ನಟ ಶ್ರೀಕಾಂತ್ ಮೇಕಾ ತೆರೆ ಎಳೆದಿದ್ದಾರೆ.

ನಟ ಶ್ರೀಕಾಂತ್​ ವದಂತಿ ಕುರಿತಾಗಿ ತೆಲುಗಿನ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ್ದು, ತಮ್ಮ ಪತ್ನಿ ಊಹಾ ಅವರಿಗೆ ವಿಚ್ಛೇದನ ನೀಡಲು ಮುಂದಾಗಿದ್ದಾರೆ ಎಂಬ ವದಂತಿಯನ್ನು ತಳ್ಳಿಹಾಕಿದ್ದಾರೆ. ‘ತನ್ನ ವೈಯಕ್ತಿಕ ಜೀವನದ ಬಗ್ಗೆ ಇಂತಹ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಇನ್ನು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡಿರುವುದು ಇದೇ ಮೊದಲೇನಲ್ಲ’ ಎಂದು ಶ್ರೀಕಾಂತ್ ಹೇಳಿದ್ದಾರೆ. ‘ಈ ಹಿಂದೆ ನನ್ನ ಸಾವಿನ ಕುರಿತಾಗಿಯೂ ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದರಿಂದ ಇಡೀ ನನ್ನ ಕುಟುಂಬ ಆತಂಕಗೊಂಡಿತ್ತು’ ಎಂದರು.

‘ಆದರೆ ಈಗ ಆರ್ಥಿಕ ತೊಂದರೆಯಿಂದಾಗಿ ವಿಚ್ಛೇದನ ನೀಡುತ್ತಿದ್ದಾರೆ ಎಂದು ಹಬ್ಬಿಸಿದ್ದಾರೆ. ಇದರಿಂದಾಗಿ ನನ್ನ ಪತ್ನಿ ಆತಂಕಗೊಂಡಿದ್ದು, ಅವಳಿಗೆ ಕಳುಹಿಸಲಾದ ಮೆಸೇಜ್​ಗಳನ್ನು ನನಗೆ ತೋರಿಸಿದ್ದಾಳೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಡ ಎಂದು ಸಮಾಧಾನ ಮಾಡಿದೆ’ ಎಂದು ಶ್ರೀಕಾಂತ್​ ಹೇಳಿದರು. ಯಾರು ಇಂತಹ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ’ ಎಂದು ಪ್ರಶ್ನಿಸಿದರು.

ಶ್ರೀಕಾಂತ್ ಮತ್ತು ಹಾ 1997 ರಲ್ಲಿ ವಿವಾಹವಾದರು. ದಂಪತಿಗೆ ರೋಷನ್, ರೋಹನ್ ಮತ್ತು ಮೇಧಾ ಹೆಸರಿನ ಮೂವರು ಮಕ್ಕಳಿದ್ದಾರೆ. ಶ್ರೀಕಾಂತ್ ಮೂಲತಃ ಕರ್ನಾಟಕದವರು. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಸದ್ಯ ಅವರು ತೆಲುಗು ಚಿತ್ರರಂಗದಲ್ಲಿ ನೆಲೆಯೂರಿದ್ದಾರೆ. ತಂದೆಯ ಹಾದಿಯಂತೆಯೇ ಮಗ ರೋಷನ್ ಕಳೆದ ವರ್ಷ ಟಾಲಿವುಡ್​ಗೆ ಪಾದಾರ್ಪಣೆ ಮಾಡಿದ್ದಾರೆ. ನಿರ್ದೇಶಕಿ ಗೌರಿ ರೋಣಂಕಿ ಅವರ ‘ಪೆಳ್ಳಿ ಸಂದಡಿ’ ಚಿತ್ರದಲ್ಲಿ ರೋಷನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:24 pm, Tue, 22 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು