AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಿಂದ ಸ್ಪಷ್ಟವಾಯ್ತು ದಳಪತಿ ವಿಜಯ್​ ಕುಟುಂಬದ ಒಳಗಿನ ಅಸಲಿ ವಿಚಾರ

ಎಸ್​.ಎ. ಚಂದ್ರಶೇಖರ್​ ಅವರಿಗೆ ಸಣ್ಣ ಸರ್ಜರಿ ಆಗಿದೆ. ಈಗ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅತ್ತ ದಳಪತಿ ವಿಜಯ್​ ಅವರು ತಮ್ಮ 68ನೇ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳನ್ನು ಮುಗಿಸಿಕೊಟ್ಟು ಅಮೆರಿಕಕ್ಕೆ ತೆರಳಿದ್ದರು. ಅಲ್ಲಿಂದ ನೇರವಾಗಿ ಬಂದು ಅವರು ತಂದೆಯನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್​ ಆಗಿದೆ.

ಈ ಫೋಟೋದಿಂದ ಸ್ಪಷ್ಟವಾಯ್ತು ದಳಪತಿ ವಿಜಯ್​ ಕುಟುಂಬದ ಒಳಗಿನ ಅಸಲಿ ವಿಚಾರ
ತಂದೆ-ತಾಯಿ ಜೊತೆ ದಳಪತಿ ವಿಜಯ್​
ಮದನ್​ ಕುಮಾರ್​
|

Updated on: Sep 15, 2023 | 4:09 PM

Share

ನಟ ದಳಪತಿ ವಿಜಯ್​ (Thalapathy Vijay) ಅವರು ‘ಲಿಯೋ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅದರ ನಡುವೆ ಅವರು ವೈಯಕ್ತಿಕ ಕಾರಣದಿಂದಲೂ ಆಗಾಗ ಸುದ್ದಿ ಆಗುತ್ತಾರೆ. ಅವರ ಕುಟುಂಬದ (Thalapathy Vijay Family) ಬಗ್ಗೆ ಇಷ್ಟು ದಿನ ಒಂದು ಗಾಸಿಪ್​ ಹರಿದಾಡುತ್ತಿತ್ತು. ರಾಜಕೀಯದ ಕಾರಣದಿಂದ ತಂದೆ ಎಸ್​.ಎ. ಚಂದ್ರಶೇಖರ್​ ಜೊತೆ ವಿಜಯ್​ ಅವರು ಕಿರಿಕ್​ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಇಬ್ಬರೂ ಪರಸ್ಪರ ಮಾತನಾಡುತ್ತಿಲ್ಲ ಎಂಬ ಸುದ್ದಿ ಕೂಡ ಕೇಳಿಬಂದಿತ್ತು. ಆ ವಿಚಾರದ ಬಗ್ಗೆ ದಳಪತಿ ವಿಜಯ್​ ಅವರು ಮೌನ ಮುರಿದಿರಲಿಲ್ಲ. ಈಗ ಅವರ ಕುಟುಂಬದ ಒಂದು ಫೋಟೋ ವೈರಲ್​ ಆಗಿದೆ. ಆ ಮೂಲಕ ಎಲ್ಲ ಗಾಸಿಪ್​ಗಳಿಗೂ ವಿಜಯ್​ ಅವರು ಫುಲ್​ ಸ್ಟಾಪ್​ ಇಟ್ಟಂತಾಗಿದೆ. ತಂದೆ ಎಸ್​.ಎ. ಚಂದ್ರಶೇಖರ್​ (SA Chandrasekhar) ಜೊತೆ ಅವರು ಯಾವುದೇ ಮನಸ್ತಾಪ ಮಾಡಿಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ.

ಸಿನಿಮಾ ಕಲಾವಿದರು ರಾಜಕೀಯಕ್ಕೆ ಬರುವುದು ಕಾಮನ್​. ದಳಪತಿ ವಿಜಯ್​ ಕೂಡ ಪೊಲಿಟಿಕಲ್​ ಎಂಟ್ರಿ ನೀಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಬಹಳ ದಿನಗಳ ಹಿಂದೆಯೇ ಎಸ್​.ಎ. ಚಂದ್ರಶೇಖರ್​ ಅವರು ಮಗನ ಹೆಸರು ಮುಂದಿಟ್ಟುಕೊಂಡು ಒಂದು ರಾಜಕೀಯ ಪಕ್ಷ ಶುರುಮಾಡಿದ್ದರು. ವಿಜಯ್​ ಗಮನಕ್ಕೆ ಬಾರದಂತೆ ಅವರು ಈ ರೀತಿ ನಿರ್ಧಾರ ತೆಗೆದುಕೊಂಡಿದ್ದರು. ಆ ಕಾರಣದಿಂದ ತಂದೆಯ ಮೇಲೆ ದಳಪತಿ ವಿಜಯ್​ ಸಿಟ್ಟಾಗಿದ್ದರು ಎನ್ನಲಾಗಿದೆ. ಆದರೆ ಈ ಕುಟುಂಬದಲ್ಲಿ ಆ ರೀತಿ ಯಾವುದೇ ಕಿರಿಕ್​ ಆಗಿಲ್ಲ ಎಂಬುದಕ್ಕೆ ಈ ಫೋಟೋ ಸಾಕ್ಷಿ ಒದಗಿಸುತ್ತಿದೆ.

ಇದನ್ನೂ ಓದಿ: ದಳಪತಿ ವಿಜಯ್​ ಹೆಸರಲ್ಲಿ ಪ್ರಿಯಾಮಣಿಗೆ ಮೋಸ ಮಾಡಿದ ‘ಜವಾನ್​’ ನಿರ್ದೇಶಕ ಅಟ್ಲಿ

ವರದಿಗಳ ಪ್ರಕಾರ, ಎಸ್​.ಎ. ಚಂದ್ರಶೇಖರ್​ ಅವರಿಗೆ ಸಣ್ಣ ಸರ್ಜರಿ ಆಗಿದೆ. ಈಗ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅತ್ತ ದಳಪತಿ ವಿಜಯ್​ ಅವರು ತಮ್ಮ 68ನೇ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳನ್ನು ಮುಗಿಸಿಕೊಟ್ಟು ಅಮೆರಿಕಕ್ಕೆ ತೆರಳಿದ್ದರು. ಅಲ್ಲಿಂದ ನೇರವಾಗಿ ಬಂದು ಅವರು ತಂದೆಯನ್ನು ಭೇಟಿ ಮಾಡಿದ್ದಾರೆ. ಅಪ್ಪನ ಆರೋಗ್ಯ ವಿಚಾರಿಸಿ, ಜೊತೆಯಲ್ಲೇ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫ್ರೇಮ್​ನಲ್ಲಿ ಅವರ ತಾಯಿ ಶೋಭಾ ಕೂಡ ಇದ್ದಾರೆ. ಎಲ್ಲರೂ ಒಟ್ಟಾಗಿ ಇರುವುದನ್ನು ನೋಡಿ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ.

ತಮಿಳು ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಹೊಂದಿರುವ ದಳಪತಿ ವಿಜಯ್​ ಅವರು ಶೀಘ್ರದಲ್ಲೇ ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂಬ ಸುದ್ದಿ ದಟ್ಟವಾಗಿದೆ. ಅದಕ್ಕಾಗಿ ಅವರು ತಮಿಳುನಾಡಿನಾದ್ಯಂತ ಪಾದಯಾತ್ರೆ ಮಾಡಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಅವರು ನಟಿಸಿರುವ ‘ಲಿಯೋ’ ಸಿನಿಮಾ ಅಕ್ಟೋಬರ್​ 19ರಂದು ಬಿಡುಗಡೆ ಆಗಲಿದೆ. ಆ ನಂತರ ಅವರ 68ನೇ ಸಿನಿಮಾ ತೆರೆಕಾಣಲಿದೆ. ಆ ಬಳಿಕ ಮೂರು ವರ್ಷಗಳ ಕಾಲ ಸಿನಿಮಾದಿಂದ ಅವರು ಬ್ರೇಕ್​ ತೆಗೆದುಕೊಂಡು ಸಂಪೂರ್ಣ ರಾಜಕೀಯದತ್ತ ಗಮನ ಹರಿಸುತ್ತಾರೆ ಎಂಬ ಗಾಸಿಪ್​ ಇದೆ. ಆ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ