AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಿಂದ ಸ್ಪಷ್ಟವಾಯ್ತು ದಳಪತಿ ವಿಜಯ್​ ಕುಟುಂಬದ ಒಳಗಿನ ಅಸಲಿ ವಿಚಾರ

ಎಸ್​.ಎ. ಚಂದ್ರಶೇಖರ್​ ಅವರಿಗೆ ಸಣ್ಣ ಸರ್ಜರಿ ಆಗಿದೆ. ಈಗ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅತ್ತ ದಳಪತಿ ವಿಜಯ್​ ಅವರು ತಮ್ಮ 68ನೇ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳನ್ನು ಮುಗಿಸಿಕೊಟ್ಟು ಅಮೆರಿಕಕ್ಕೆ ತೆರಳಿದ್ದರು. ಅಲ್ಲಿಂದ ನೇರವಾಗಿ ಬಂದು ಅವರು ತಂದೆಯನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್​ ಆಗಿದೆ.

ಈ ಫೋಟೋದಿಂದ ಸ್ಪಷ್ಟವಾಯ್ತು ದಳಪತಿ ವಿಜಯ್​ ಕುಟುಂಬದ ಒಳಗಿನ ಅಸಲಿ ವಿಚಾರ
ತಂದೆ-ತಾಯಿ ಜೊತೆ ದಳಪತಿ ವಿಜಯ್​
ಮದನ್​ ಕುಮಾರ್​
|

Updated on: Sep 15, 2023 | 4:09 PM

Share

ನಟ ದಳಪತಿ ವಿಜಯ್​ (Thalapathy Vijay) ಅವರು ‘ಲಿಯೋ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅದರ ನಡುವೆ ಅವರು ವೈಯಕ್ತಿಕ ಕಾರಣದಿಂದಲೂ ಆಗಾಗ ಸುದ್ದಿ ಆಗುತ್ತಾರೆ. ಅವರ ಕುಟುಂಬದ (Thalapathy Vijay Family) ಬಗ್ಗೆ ಇಷ್ಟು ದಿನ ಒಂದು ಗಾಸಿಪ್​ ಹರಿದಾಡುತ್ತಿತ್ತು. ರಾಜಕೀಯದ ಕಾರಣದಿಂದ ತಂದೆ ಎಸ್​.ಎ. ಚಂದ್ರಶೇಖರ್​ ಜೊತೆ ವಿಜಯ್​ ಅವರು ಕಿರಿಕ್​ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಇಬ್ಬರೂ ಪರಸ್ಪರ ಮಾತನಾಡುತ್ತಿಲ್ಲ ಎಂಬ ಸುದ್ದಿ ಕೂಡ ಕೇಳಿಬಂದಿತ್ತು. ಆ ವಿಚಾರದ ಬಗ್ಗೆ ದಳಪತಿ ವಿಜಯ್​ ಅವರು ಮೌನ ಮುರಿದಿರಲಿಲ್ಲ. ಈಗ ಅವರ ಕುಟುಂಬದ ಒಂದು ಫೋಟೋ ವೈರಲ್​ ಆಗಿದೆ. ಆ ಮೂಲಕ ಎಲ್ಲ ಗಾಸಿಪ್​ಗಳಿಗೂ ವಿಜಯ್​ ಅವರು ಫುಲ್​ ಸ್ಟಾಪ್​ ಇಟ್ಟಂತಾಗಿದೆ. ತಂದೆ ಎಸ್​.ಎ. ಚಂದ್ರಶೇಖರ್​ (SA Chandrasekhar) ಜೊತೆ ಅವರು ಯಾವುದೇ ಮನಸ್ತಾಪ ಮಾಡಿಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ.

ಸಿನಿಮಾ ಕಲಾವಿದರು ರಾಜಕೀಯಕ್ಕೆ ಬರುವುದು ಕಾಮನ್​. ದಳಪತಿ ವಿಜಯ್​ ಕೂಡ ಪೊಲಿಟಿಕಲ್​ ಎಂಟ್ರಿ ನೀಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಬಹಳ ದಿನಗಳ ಹಿಂದೆಯೇ ಎಸ್​.ಎ. ಚಂದ್ರಶೇಖರ್​ ಅವರು ಮಗನ ಹೆಸರು ಮುಂದಿಟ್ಟುಕೊಂಡು ಒಂದು ರಾಜಕೀಯ ಪಕ್ಷ ಶುರುಮಾಡಿದ್ದರು. ವಿಜಯ್​ ಗಮನಕ್ಕೆ ಬಾರದಂತೆ ಅವರು ಈ ರೀತಿ ನಿರ್ಧಾರ ತೆಗೆದುಕೊಂಡಿದ್ದರು. ಆ ಕಾರಣದಿಂದ ತಂದೆಯ ಮೇಲೆ ದಳಪತಿ ವಿಜಯ್​ ಸಿಟ್ಟಾಗಿದ್ದರು ಎನ್ನಲಾಗಿದೆ. ಆದರೆ ಈ ಕುಟುಂಬದಲ್ಲಿ ಆ ರೀತಿ ಯಾವುದೇ ಕಿರಿಕ್​ ಆಗಿಲ್ಲ ಎಂಬುದಕ್ಕೆ ಈ ಫೋಟೋ ಸಾಕ್ಷಿ ಒದಗಿಸುತ್ತಿದೆ.

ಇದನ್ನೂ ಓದಿ: ದಳಪತಿ ವಿಜಯ್​ ಹೆಸರಲ್ಲಿ ಪ್ರಿಯಾಮಣಿಗೆ ಮೋಸ ಮಾಡಿದ ‘ಜವಾನ್​’ ನಿರ್ದೇಶಕ ಅಟ್ಲಿ

ವರದಿಗಳ ಪ್ರಕಾರ, ಎಸ್​.ಎ. ಚಂದ್ರಶೇಖರ್​ ಅವರಿಗೆ ಸಣ್ಣ ಸರ್ಜರಿ ಆಗಿದೆ. ಈಗ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅತ್ತ ದಳಪತಿ ವಿಜಯ್​ ಅವರು ತಮ್ಮ 68ನೇ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳನ್ನು ಮುಗಿಸಿಕೊಟ್ಟು ಅಮೆರಿಕಕ್ಕೆ ತೆರಳಿದ್ದರು. ಅಲ್ಲಿಂದ ನೇರವಾಗಿ ಬಂದು ಅವರು ತಂದೆಯನ್ನು ಭೇಟಿ ಮಾಡಿದ್ದಾರೆ. ಅಪ್ಪನ ಆರೋಗ್ಯ ವಿಚಾರಿಸಿ, ಜೊತೆಯಲ್ಲೇ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫ್ರೇಮ್​ನಲ್ಲಿ ಅವರ ತಾಯಿ ಶೋಭಾ ಕೂಡ ಇದ್ದಾರೆ. ಎಲ್ಲರೂ ಒಟ್ಟಾಗಿ ಇರುವುದನ್ನು ನೋಡಿ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ.

ತಮಿಳು ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಹೊಂದಿರುವ ದಳಪತಿ ವಿಜಯ್​ ಅವರು ಶೀಘ್ರದಲ್ಲೇ ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂಬ ಸುದ್ದಿ ದಟ್ಟವಾಗಿದೆ. ಅದಕ್ಕಾಗಿ ಅವರು ತಮಿಳುನಾಡಿನಾದ್ಯಂತ ಪಾದಯಾತ್ರೆ ಮಾಡಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಅವರು ನಟಿಸಿರುವ ‘ಲಿಯೋ’ ಸಿನಿಮಾ ಅಕ್ಟೋಬರ್​ 19ರಂದು ಬಿಡುಗಡೆ ಆಗಲಿದೆ. ಆ ನಂತರ ಅವರ 68ನೇ ಸಿನಿಮಾ ತೆರೆಕಾಣಲಿದೆ. ಆ ಬಳಿಕ ಮೂರು ವರ್ಷಗಳ ಕಾಲ ಸಿನಿಮಾದಿಂದ ಅವರು ಬ್ರೇಕ್​ ತೆಗೆದುಕೊಂಡು ಸಂಪೂರ್ಣ ರಾಜಕೀಯದತ್ತ ಗಮನ ಹರಿಸುತ್ತಾರೆ ಎಂಬ ಗಾಸಿಪ್​ ಇದೆ. ಆ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ