AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಿಯೋ’ ತಂಡಕ್ಕೆ ಮತ್ತೊಂದು ಆಘಾತ; ತಂಡದವರ ಕಾರಿಗೆ ಅಪಘಾತ  

Leo Movie: ‘ಲಿಯೋ’ ಚಿತ್ರದಲ್ಲಿ ದಳಪತಿ ವಿಜಯ್ ಹಾಗೂ ತ್ರಿಷಾ ಮೊದಲಾದವರು ನಟಿಸಿದ್ದಾರೆ. ಲೋಕೇಶ್ ಕನಗರಾಜ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಲೋಕೇಶ್ ಕನಗರಾಜ್ ಯೂನಿವರ್ಸ್’ ಅಡಿಯಲ್ಲಿ ಸಿನಿಮಾ ಸಿದ್ಧಗೊಂಡಿದೆ ಎನ್ನಲಾಗುತ್ತಿದೆ.

‘ಲಿಯೋ’ ತಂಡಕ್ಕೆ ಮತ್ತೊಂದು ಆಘಾತ; ತಂಡದವರ ಕಾರಿಗೆ ಅಪಘಾತ   
ಕಾರು ಅಪಘಾತಕ್ಕೆ ಒಳಗಾದ ಲಿಯೋ ತಂಡ
ರಾಜೇಶ್ ದುಗ್ಗುಮನೆ
|

Updated on:Oct 18, 2023 | 7:17 AM

Share

ದಳಪತಿ ವಿಜಯ್ (Thalapathy Vijay) ನಟನೆಯ ‘ಲಿಯೋ’ ತಂಡಕ್ಕೆ ಒಂದಾದ ಬಳಿಕ ಒಂದರಂತೆ ಹಿನ್ನಡೆ ಆಗುತ್ತಲೇ ಇದೆ. ಈ ಮೊದಲು ಮುಂಜಾನೆ ನಾಲ್ಕು ಗಂಟೆ ಶೋಗೆ ಅವಕಾಶ ನೀಡಲು ಸರ್ಕಾರ ನಿರಾಕರಿಸಿತ್ತು. ಈ ವಿಚಾರದಲ್ಲಿ ಸಿನಿಮಾ ತಂಡ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯನ್ನು ಕೋರ್ಟ್ ರಿಜೆಕ್ಟ್ ಮಾಡಿತ್ತು. ಈ ಕಾರಣಕ್ಕೆ ತಂಡ ಗೃಹಕಾರ್ಯದರ್ಶಿಯನ್ನು ಭೇಟಿ ಮಾಡಿದೆ. ಆ ಬಳಿಕ ಮರಳಿ ಬರುವಾಗ ಇವರ ಕಾರು ಅಪಘಾತಕ್ಕೆ ಒಳಗಾಗಿದೆ. ‘ಲಿಯೋ (Leo Movie) ತಂಡಕ್ಕೆ ಏನಾಗುತ್ತಿದೆ’ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

‘ಲಿಯೋ’ ಚಿತ್ರದಲ್ಲಿ ದಳಪತಿ ವಿಜಯ್ ಹಾಗೂ ತ್ರಿಷಾ ಮೊದಲಾದವರು ನಟಿಸಿದ್ದಾರೆ. ಲೋಕೇಶ್ ಕನಗರಾಜ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಲೋಕೇಶ್ ಕನಗರಾಜ್ ಯೂನಿವರ್ಸ್’ ಅಡಿಯಲ್ಲಿ ಸಿನಿಮಾ ಸಿದ್ಧಗೊಂಡಿದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.  ಈ ಕಾರಣಕ್ಕೆ ತಮಿಳಿನಾಡಿನಾದ್ಯಂತ ಮುಂಜಾನೆ ನಾಲ್ಕು ಗಂಟೆಗೆ ಫ್ಯಾನ್ ಶೋ ಇಡಲು ತಂಡ ನಿರ್ಧರಿಸಿತ್ತು. ಆದರೆ, ಸರ್ಕಾರ ಇದಕ್ಕೆ ಅವಕಾಶ ನೀಡಿಲ್ಲ.

ಕೋರ್ಟ್ ಕೂಡ ಅವಕಾಶ ನೀಡಲು ನಿರಾಕರಿಸಿದ ಬಳಿಕ ‘ಲಿಯೋ’ ಸಿನಿಮಾದ ವಕೀಲರ ತಂಡ ಗೃಹ ಕಾರ್ಯದರ್ಶಿಯನ್ನು ಭೇಟಿ ಮಾಡಿತ್ತು. ಅಲ್ಲಿ ಮಾತುಕತೆ ನಡೆಸಿ ಮರಳಿ ಬರುವಾಗ ಕಾರು ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಬೈಕ್ ಕಾರಿನ ಅಡಿಯಲ್ಲಿ ಬಿದ್ದಿದೆ. ಈ ಬಗ್ಗೆ ಟ್ರೇಡ್ ಅನಲಿಸ್ಟ್ ಮನೋಬಲ ವಿಜಯಬಾಲನ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘4 ಗಂಟೆ ಶೋಗೆ ಅವಕಾಶ ನೀಡಿ’; ಕೋರ್ಟ್ ಮೆಟ್ಟಿಲೇರಿದ ‘ಲಿಯೋ’ ತಂಡ  

‘ಲಿಯೋ’ ಸಿನಿಮಾದ ಆಡಿಯೋ ಲಾಂಚ್​ನ ದೊಡ್ಡ ಮಟ್ಟದಲ್ಲಿ ಮಾಡುವ ಪ್ಲಾನ್​ನಲ್ಲಿ ತಂಡ ಇತ್ತು. ಆದರೆ, ಇದಕ್ಕೆ ಅವಕಾಶ ಸಿಗಲಿಲ್ಲ. ಆ ಬಳಿಕ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೂ ಇದೇ ರೀತಿ ಆಯಿತು. ಈಗ ಸಿನಿಮಾ ವಿಚಾರದಲ್ಲಿ ಕಿರಿಕ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Wed, 18 October 23

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ