AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘4 ಗಂಟೆ ಶೋಗೆ ಅವಕಾಶ ನೀಡಿ’; ಕೋರ್ಟ್ ಮೆಟ್ಟಿಲೇರಿದ ‘ಲಿಯೋ’ ತಂಡ  

‘ಲಿಯೋ’ ಚಿತ್ರವನ್ನು ‘ಸೆವೆನ್ ಸ್ಕ್ರೀನ್​ ಸ್ಟುಡಿಯೋಸ್’ ನಿರ್ಮಾಣ ಮಾಡಿದೆ. ಈ ಚಿತ್ರಕ್ಕೆ ಮುಂಜಾನೆ 4 ಗಂಟೆಯಿಂದ ಶೋ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಮದ್ರಾಸ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅಭಿಮಾನಿಗಳ ದೃಷ್ಟಿಯಿಂದ ಮುಂಜಾನೆ ಶೋ ತುಂಬಾನೇ ಮುಖ್ಯ ಎಂದು ಅವರು ಹೇಳಿದ್ದಾರೆ.

‘4 ಗಂಟೆ ಶೋಗೆ ಅವಕಾಶ ನೀಡಿ’; ಕೋರ್ಟ್ ಮೆಟ್ಟಿಲೇರಿದ ‘ಲಿಯೋ’ ತಂಡ   
ಲಿಯೋ-ವಿಜಯ್
ರಾಜೇಶ್ ದುಗ್ಗುಮನೆ
|

Updated on: Oct 17, 2023 | 1:35 PM

Share

ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾ (Leo Movie) ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಹೊಸ ಹೊಸ ಅಪ್​ಡೇಟ್​ಗಳು ಸಿಗುತ್ತಿವೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ತಮಿಳುನಾಡಿನಲ್ಲಿ ದಳಪತಿ ವಿಜಯ್ ಅಭಿಮಾನಿಗಳು ಹಬ್ಬ ಮಾಡೋಕೆ ರೆಡಿ ಆಗಿದ್ದಾರೆ. ಸ್ಟಾರ್ ಹೀರೋಗಳ ಸಿನಿಮಾ ರಿಲೀಸ್ ಆಗುತ್ತವೆ ಎಂದರೆ ಮುಂಜಾನೆ ಶೋ ಇದ್ದರೆ ಅಭಿಮಾನಿಗಳ ಖುಷಿ ಹೆಚ್ಚುತ್ತದೆ. ಇದೇ ವಿಚಾರ ಇಟ್ಟುಕೊಂಡು ‘ಲಿಯೋ’ ತಂಡ ಕೋರ್ಟ್ ಮೆಟ್ಟಿಲು ಏರಿದೆ.

‘ಲಿಯೋ’ ಚಿತ್ರವನ್ನು ‘ಸೆವೆನ್ ಸ್ಕ್ರೀನ್​ ಸ್ಟುಡಿಯೋಸ್’ ನಿರ್ಮಾಣ ಮಾಡಿದೆ. ಈ ಚಿತ್ರಕ್ಕೆ ಮುಂಜಾನೆ 4 ಗಂಟೆಯಿಂದ ಶೋ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಮದ್ರಾಸ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅಭಿಮಾನಿಗಳ ದೃಷ್ಟಿಯಿಂದ ಮುಂಜಾನೆ ಶೋ ತುಂಬಾನೇ ಮುಖ್ಯ ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 20ರಿಂದ ಅಕ್ಟೋಬರ್ 24ರವರೆಗೆ ದಿನಕ್ಕೆ ಐದು ಶೋ ಪ್ರದರ್ಶನ ಮಾಡಲು ಅವಕಾಶ ನೀಡಬೇಕು. ‘ಲಿಯೋ’ ರಿಲೀಸ್ ದಿನದಂದು (ಅಕ್ಟೋಬರ್ 19) 4 ಗಂಟೆ ಶೋಗೆ ಅವಕಾಶ ನೀಡಬೇಕು ಎಂದು ಕೋರಲಾಗಿದೆ. ಶೀಘ್ರದಲ್ಲೇ ಈ ಅರ್ಜಿ ವಿಚಾರಣೆಗೆ ಬರಲಿದೆ ಎನ್ನಲಾಗುತ್ತಿದೆ.

ಈ ಮೊದಲು ತಮಿಳುನಾಡು ಸರ್ಕಾರದವರು ‘ಲಿಯೋ’ ಸಿನಿಮಾ ಪ್ರದರ್ಶನಕ್ಕೆ ಕೆಲವು ನಿಯಮಗಳನ್ನು ಜಾರಿಗೆ ತಂದಿತ್ತು. ಮುಂಜಾನೆ ಶೋಗಳನ್ನು ಪ್ರದರ್ಶನ ಮಾಡಲು ಸಾಧ್ಯವಿಲ್ಲ. ಬೆಳಿಗ್ಗೆ 9 ಗಂಟೆಯಿಂದ ಶೋ ಆರಂಭ ಮಾಡಬಹುದು ಎಂದು ಸುತ್ತೋಲೆಯಲ್ಲಿ ಹೇಳಿತ್ತು. ಇದನ್ನು ‘ಲಿಯೋ’ ತಂಡ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ಲಿಯೋ ಸಿನಿಮಾದ ಕನ್ನಡ ಆವೃತ್ತಿಗೆ ಸಿಕ್ಕ ಶೋಗಳ ಸಂಖ್ಯೆ ಎಷ್ಟು? ತಮಿಳಿಗೆ ಎಷ್ಟು ಶೋ?

‘ಲಿಯೋ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ಮುಂಜಾನೆ ಶೋ ಸಿಕ್ಕರೆ ಸಿನಿಮಾದ ಗಳಿಕೆ ಹೆಚ್ಚಲಿದೆ. ತಮಿಳುನಾಡು ಸರ್ಕಾರದ ಆದೇಶದಿಂದ ಚಿತ್ರದ ಗಳಿಕೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ‘ಲಿಯೋ’ ಚಿತ್ರಕ್ಕೆ ಲೋಕೇಶ್ ಕನಗರಾಜ್ ನಿರ್ದೇಶನ ಮಾಡುತ್ತಿದ್ದಾರೆ. ದಳಪತಿ ವಿಜಯ್, ತ್ರಿಶಾ ಕೃಷ್ಣನ್, ಅರ್ಜುನ್ ಸರ್ಜಾ, ಗೌತಮ್ ಮೆನನ್, ಪ್ರಿಯಾ ಆನಂದ್ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್