AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಗ್ಗುತ್ತಲೇ ಇದೆ ‘ಲಿಯೋ’ ಸಿನಿಮಾ ಕಲೆಕ್ಷನ್; ಮೂರು ದಿನಕ್ಕೆ ಗಳಿಸಿದ್ದೆಷ್ಟು?

ಗುರುವಾರ (ಅಕ್ಟೋಬರ್ 19) ‘ಲಿಯೋ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಮೊದಲ ದಿನ ತಮಿಳುನಾಡಿನಲ್ಲಿ ಗಳಿಕೆ ಮಾಡಿದ್ದು 27 ಕೋಟಿ ರೂಪಾಯಿ. ಎರಡನೇ ದಿನ ಚಿತ್ರದ ಕಲೆಕ್ಷನ್ 15.95 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೂರನೇ ದಿನ 13.32 ಕೋಟಿ ರೂಪಾಯಿ ಆಗಿದೆ.

ತಗ್ಗುತ್ತಲೇ ಇದೆ ‘ಲಿಯೋ’ ಸಿನಿಮಾ ಕಲೆಕ್ಷನ್; ಮೂರು ದಿನಕ್ಕೆ ಗಳಿಸಿದ್ದೆಷ್ಟು?
‘ಲಿಯೋ’ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on:Oct 22, 2023 | 12:55 PM

Share

ದಳಪತಿ ವಿಜಯ್ (Thalapathy Vijay) ನಟನೆಯ ‘ಲಿಯೋ’ ಸಿನಿಮಾಗೆ ಜನರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಈ ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡಿತ್ತು. ಆದರೆ ಸಿನಿಮಾ ಉತ್ತಮವಾಗಿಲ್ಲ ಎನ್ನುವ ಅಭಿಪ್ರಾಯ ಕೆಲವರಿಂದ ವ್ಯಕ್ತವಾಯಿತು. ಈ ಕಾರಣಕ್ಕೋ ಏನೋ ಸಿನಿಮಾದ ಗಳಿಕೆ ತಗ್ಗುತ್ತಿದೆ. ಈ ಚಿತ್ರ ಮೂರು ದಿನಕ್ಕೆ ಎಷ್ಟು ಗಳಿಕೆ ಮಾಡಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿದೆ ಮಾಹಿತಿ.

ಗುರುವಾರ (ಅಕ್ಟೋಬರ್ 19) ‘ಲಿಯೋ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಮೊದಲ ದಿನ ತಮಿಳುನಾಡಿನಲ್ಲಿ ಗಳಿಕೆ ಮಾಡಿದ್ದು 27 ಕೋಟಿ ರೂಪಾಯಿ. ಎರಡನೇ ದಿನ ಚಿತ್ರದ ಕಲೆಕ್ಷನ್ 15.95 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೂರನೇ ದಿನ 13.32 ಕೋಟಿ ರೂಪಾಯಿ ಆಗಿದೆ.  ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 56.90 ಕೋಟಿ ರೂಪಾಯಿ ಆಗಿದೆ.

ವಿವಿಧ ರಾಜ್ಯಗಳಲ್ಲೂ ‘ಲಿಯೋ’ ಸಿನಿಮಾ ಕಲೆಕ್ಷನ್ ಮಾಡುತ್ತಿದೆ. ಹೀಗಾಗಿ, ಭಾರತದಲ್ಲಿ ಈ ಚಿತ್ರದ ಗಳಿಕೆ 140 ಕೋಟಿ ರೂಪಾಯಿ ದಾಟಿದೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಎಷ್ಟು ಕೋಟಿ ರೂಪಾಯಿ ಬಾಚಿಕೊಳ್ಳುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ರೇಟಿಂಗ್ ವಿಚಾರದಲ್ಲಿ ‘ಲಿಯೋ’, ‘ಭಗವಂತ್ ಕೇಸರಿ’ ಚಿತ್ರಗಳನ್ನು ಹಿಂದಿಕ್ಕಿದ ‘ಘೋಸ್ಟ್’

‘ಲಿಯೋ’ ಚಿತ್ರಕ್ಕೆ ಲೋಕೇಶ್ ಕನಗರಾಜ್ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅನೇಕರಿಗೆ ಇದು ಲೋಕೇಶ್ ಕನಗರಾಜ್ ಅವರ ಸಿನಿಮಾ ಅಲ್ಲ ಎನ್ನುವ ಭಾವನೆ ಮೂಡಿದೆ. ಅರ್ಜುನ್ ಸರ್ಜಾ, ತ್ರಿಶಾ ಕೃಷ್ಣನ್, ಗೌತಮ್ ಮೆನನ್, ಪ್ರಿಯಾ ಆನಂದ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಲೋಕೇಶ್ ಕನಗರಾಜ್ ಯೂನಿವರ್ಸ್ ಅಡಿಯಲ್ಲಿ ಈ ಸಿನಿಮಾ ಮೂಡಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Sun, 22 October 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?