AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​ನಲ್ಲಿ ನಕಲಿ ಲೆಕ್ಕ ನೀಡಿದ ಸಿನಿಮಾಗಳಿವು? ಕೇಳಿಬಂದಿತ್ತು ಗಂಭೀರ ಆರೋಪ

ಇತ್ತೀಚೆಗೆ ರಿಲೀಸ್ ಆದ ಅನೇಕ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಾಚಿಕೊಂಡಿವೆ. ಅನೇಕ ಸಿನಿಮಾಗಳು ನಕಲಿ ಲೆಕ್ಕ ನೀಡಿವೆ ಎಂಬುದು ಅನೇಕರ ಆರೋಪ. ಈ ರೀತಿ ಆರೋಪ ಹೊತ್ತ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಬಾಕ್ಸ್ ಆಫೀಸ್​ನಲ್ಲಿ ನಕಲಿ ಲೆಕ್ಕ ನೀಡಿದ ಸಿನಿಮಾಗಳಿವು? ಕೇಳಿಬಂದಿತ್ತು ಗಂಭೀರ ಆರೋಪ
ಬಾಕ್ಸ್ ಆಫೀಸ್​ನಲ್ಲಿ ನಕಲಿ ಲೆಕ್ಕ ನೀಡಿದ ಸಿನಿಮಾಗಳಿವು?
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 17, 2023 | 9:00 AM

Share

ಇತ್ತೀಚೆಗೆ ಸಿನಿಮಾ ಟಿಕೆಟ್ ದರ ಹೆಚ್ಚಿದೆ. ಆದಾಗ್ಯೂ ಜನರು ಹೋಗಿ ಸಿನಿಮಾ ನೋಡುತ್ತಿದ್ದಾರೆ. ಬಿಗ್ ಬಜೆಟ್ ಚಿತ್ರಗಳಿಗೆ ಇದು ಸಹಕಾರಿ ಆಗುತ್ತಿದೆ. ಬಾಕ್ಸ್ ಆಫೀಸ್​ನಲ್ಲಿ (Box Office) ಸಿನಿಮಾ ಸಾವಿರಾರು ಕೋಟಿ ರೂಪಾಯಿ ಬಾಚಿಕೊಳ್ಳುತ್ತಿದೆ. ಮೊದಲೆಲ್ಲ ಸಿನಿಮಾಗಳು ನೂರು ಕೋಟಿ ರೂಪಾಯಿ ಬಾಚಿಕೊಂಡರೆ ಅದು ದೊಡ್ಡ ಸಾಧನೆ ಆಗಿತ್ತು. ಆದರೆ, ಈಗ ಅನೇಕ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಬಾಚಿಕೊಳ್ಳುತ್ತಿವೆ. ಹೀಗಾಗಿ, ಮೈಲಿಗಲ್ಲನ್ನು ಬದಲಾಯಿಸಲಾಗಿದೆ. ಇತ್ತೀಚೆಗೆ ರಿಲೀಸ್ ಆದ ಅನೇಕ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಾಚಿಕೊಂಡಿವೆ. ಅನೇಕ ಸಿನಿಮಾಗಳು ನಕಲಿ ಲೆಕ್ಕ ನೀಡಿವೆ ಎಂಬುದು ಅನೇಕರ ಆರೋಪ. ಈ ರೀತಿ ಆರೋಪ ಹೊತ್ತ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

‘ಟೈಗರ್ 3’

ಸಾಲು ಸಾಲು ಸೋಲು ಕಂಡವರು ಸಲ್ಮಾನ್ ಖಾನ್. ‘ಟೈಗರ್ 3’ ಚಿತ್ರದ ಮೂಲಕ ಅವರು ಗೆದ್ದು ಬೀಗಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 200 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿದೆ. ಈ ಚಿತ್ರದ ನಿರ್ಮಾಪಕರು ನಕಲಿ ಲೆಕ್ಕ ನೀಡುತ್ತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಆದರೆ, ನಿರ್ಮಾಪಕರು ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಸಲ್ಮಾನ್ ಖಾನ್ ಅಭಿಮಾನಿಗಳಂತೂ ಈ ವಿಚಾರವನ್ನು ತಳ್ಳಿ ಹಾಕಿದ್ದಾರೆ.

ಪಠಾಣ್

ಶಾರುಖ್ ಖಾನ್ ಅವರು 2018ರಲ್ಲಿ ‘ಜೀರೋ’ ಸಿನಿಮಾ ಮೂಲಕ ದೊಡ್ಡ ಸೋಲು ಕಂಡರು. ಇದಾದ ಬಳಿಕ ಅವರು ಒಂದು ದೊಡ್ಡ ಬ್ರೇಕ್ ಪಡೆದರು. ‘ಪಠಾಣ್’ ಚಿತ್ರದ ಮೂಲಕ ಅವರು ಕಂಬ್ಯಾಕ್ ಮಾಡಿದರು. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ನಕಲಿ ಲೆಕ್ಕ ಎಂದು ಶಾರುಖ್ ಹೇಟರ್ಸ್ ಹೇಳಿದ್ದಾರೆ.

ಜವಾನ್

‘ಜವಾನ್’ ಸಿನಿಮಾ ರಿಲೀಸ್ ಆಗಿ ಹಿಂದಿ ವಿಭಾಗದಲ್ಲಿ ಭರ್ಜರಿ ಗಳಿಕೆ ಮಾಡಿತು. ದಕ್ಷಿಣ ಭಾರತದಲ್ಲಿ ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಯಿತು. ಈ ಸಿನಿಮಾದ ಗಳಿಕೆ ಲೆಕ್ಕದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ ಎಂಬುದು ಕೆಲವರ ಆರೋಪ. ಆದರೆ, ಇದನ್ನು ಶಾರುಖ್ ಖಾನ್ ಅಭಿಮಾನಿಗಳು ಒಪ್ಪಿಲ್ಲ. ಈ ಚಿತ್ರದಿಂದ ಶಾರುಖ್ ಖಾನ್ ಅವರು ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ.

 ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ

ಈ ವರ್ಷ ರಿಲೀಸ್ ಆದ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ನಟಿಸಿದ್ದರು. ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಸಿನಿಮಾ ಗಳಿಕೆ ಬಗ್ಗೆ ನಟಿ ಕಂಗನಾ ರಣಾವತ್ ಅವರು ಅನುಮಾನ ವ್ಯಕ್ತಪಡಿಸಿದ್ದರು. ಟ್ರೇಡ್ ಅನಲಿಸ್ಟ್ ಕೋಮಲ್ ಕೂಡ ಇದೇ ರೀತಿಯ ಆರೋಪ ಮಾಡಿದ್ದರು.

ಲಿಯೋ

ದಳಪತಿ ವಿಜಯ್ ಅವರ ನಟನೆಯ, ಲೋಕೇಶ್ ಕನಗರಾಜ್ ನಿರ್ದೇಶನದ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತು. ಆದಾಗ್ಯೂ ಚಿತ್ರ ಭರ್ಜರಿ ಗಳಿಕೆ ಮಾಡಿತು. ಈ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬ್ರಹ್ಮಾಸ್ತ್ರ

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ವಿಎಫ್​ಎಕ್ಸ್ ಕಾರಣಕ್ಕೆ ಟ್ರೋಲ್ ಆಗಿತ್ತು. ಆದಾಗ್ಯೂ ಸಿನಿಮಾ ಭರ್ಜರಿ ಗಳಿಕೆ ಮಾಡಿತು. ಈ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸಿದ್ದರು. ಕಂಗನಾ ರಣಾವತ್ ಅವರು ಈ ಬಗ್ಗೆ ಟೀಕೆ ಮಾಡಿದ್ದರು.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

‘ಕಿಸಿ ಕ ಭಾಯ್ ಕಿಸಿ ಕಿ ಜಾನ್

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ವಿಮರ್ಶೆಯಲ್ಲಿ ಸೋಲು ಕಂಡಿತ್ತು. ಈ ಚಿತ್ರದ ಬಗ್ಗೆ ನಕಲಿ ಮಾಹಿತಿ ನೀಡಲಾಯಿತು ಎಂದು ಅನೇಕರು ಆರೋಪಿಸಿದರು. ಆದರೆ, ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:03 am, Fri, 17 November 23

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು