AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಸ್ಟ್​ ಕನ್ನಡ ಡೈರೆಕ್ಟರ್​ ಅನ್ನೋದು ಬೇಡ’: ಹೊಸ ಸಲಹೆ ನೀಡಿದ ‘ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ

Vivek Agnihotri | SIIMA Awards 2022: ವಿವೇಕ್​ ಅಗ್ನಿಹೋತ್ರಿ ಅವರ ಈ ಮಾತುಗಳಿಗೆ ನೆಟ್ಟಿಗರು ಸಹಮತ ಸೂಚಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಹಂಚಿಕೊಂಡ ವಿಡಿಯೋ ವೈರಲ್​ ಆಗಿದೆ.

‘ಬೆಸ್ಟ್​ ಕನ್ನಡ ಡೈರೆಕ್ಟರ್​ ಅನ್ನೋದು ಬೇಡ’: ಹೊಸ ಸಲಹೆ ನೀಡಿದ ‘ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ
ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on:Sep 12, 2022 | 9:31 AM

Share

ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಚಿತ್ರರಂಗದ ಸ್ವರೂಪ ಬದಲಾಗಿದೆ. ಹಿಂದಿ ಭಾಷೆಯ ಸಿನಿಮಾಗಳೇ ರಾರಾಜಿಸುತ್ತಿದ್ದ ಒಂದು ಕಾಲ ಇತ್ತು. ಆದರೆ ಈಗ ಎಲ್ಲ ಭಾಷೆಯ ಚಿತ್ರಗಳು ಕೂಡ ಸಖತ್​ ಸೌಂಡು ಮಾಡುತ್ತಿವೆ. ಬೇರೆ ಬೇರೆ ಭಾಷೆಯ ಚಿತ್ರರಂಗಗಳ ನಡುವೆ ಅಂತರವೇ ಉಳಿದುಕೊಂಡಿಲ್ಲ. ಪ್ಯಾನ್​ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಒಂದು ಹೊಸ ಸಲಹೆ ನೀಡಿದ್ದಾರೆ. ಆಯಾ ಭಾಷೆಯ ನಿರ್ದೇಶಕ ಎಂದು ಯಾರನ್ನಾದರೂ ಗುರುತಿಸುವ ಬದಲು, ಭಾರತೀಯ ನಿರ್ದೇಶಕ ಅಂತ ಗುರುತಿಸಬೇಕು ಎಂದು ವಿವೇಕ್​ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ‘ಸೈಮಾ’ ಪ್ರಶಸ್ತಿ (SIIMA Awards 2022) ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಅವರು ಈ ವಿಚಾರ ಹಂಚಿಕೊಂಡಿದ್ದಾರೆ.

2021ರಲ್ಲಿ ತೆರೆಕಂಡ ದಕ್ಷಿಣ ಭಾರತದ ಸಿನಿಮಾಗಳಿಗೆ, ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ಪ್ರಶಸ್ತಿ ನೀಡಲಾಗಿದೆ. ‘ಅತ್ಯುತ್ತಮ ಹೊಸ ನಿರ್ದೇಶಕ’ ಪ್ರಶಸ್ತಿಯನ್ನು ‘ಬಡವ ರಾಸ್ಕಲ್​’ ಚಿತ್ರಕ್ಕಾಗಿ ಶಂಕರ್​ಗುರು ಪಡೆದುಕೊಂಡಿದ್ದಾರೆ. ವೇದಿಕೆ ಮೇಲೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದು ವಿವೇಕ್​ ಅಗ್ನಿಹೋತ್ರಿ. ಈ ವೇಳೆ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Ranveer Singh: ಸೈಮಾದಲ್ಲಿ ರಣವೀರ್​ ಸಿಂಗ್​ ಝಗಮಗ ಡ್ಯಾನ್ಸ್​; ಹೇಗಿತ್ತು ನೋಡಿ ಜೋಶ್​
Image
SIIMA Awards: ಸೈಮಾ ಸಂಭ್ರಮದಲ್ಲಿ ತಾರೆಯರ ಸಂಗಮ; ಅದ್ದೂರಿ ಸಮಾರಂಭದ ವಿಡಿಯೋ ನೋಡಿ..
Image
ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ

‘ಸೈಮಾ ಸಮಾರಂಭದಲ್ಲಿ ನಿರ್ದೇಶಕ ಶಂಕರ್​ ಗುರು ಅವರಿಗೆ ಈ ಪ್ರಶಸ್ತಿ ನೀಡಲು ಖುಷಿ ಎನಿಸಿತು. ಬೆಸ್ಟ್​ ಕನ್ನಡ ನಿರ್ದೇಶಕ ಎಂದು ಕರೆಯುವ ಬದಲು, ಕನ್ನಡದ ಬೆಸ್ಟ್​ ಭಾರತೀಯ ನಿರ್ದೇಶಕ ಎಂದು ಕರೆಯೋಣ. ಅದನ್ನೇ ನಾನು ನಂಬಿದ್ದೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಟ್ವೀಟ್​ ಮಾಡಿದ್ದಾರೆ. ಇದೇ ಮಾತನ್ನು ವೇದಿಕೆ ಮೇಲೆ ಅವರು ಹೇಳಿದ್ದು, ಅದರ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ. ವಿವೇಕ್​ ಅಗ್ನಿಹೋತ್ರಿ ಅವರ ಈ ಮಾತುಗಳಿಗೆ ನೆಟ್ಟಿಗರು ಸಹಮತ ಸೂಚಿಸಿದ್ದಾರೆ.

10ನೇ ವರ್ಷದ ಸೈಮಾ ಸಮಾರಂಭ ನಡೆದಿದೆ. ಈ ಬಾರಿ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ಜರುಗಿದ್ದು ವಿಶೇಷ. ಪುನೀತ್​ ರಾಜ್​ಕುಮಾರ್​ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ. ದಕ್ಷಿಣ ಭಾರತದ ಭಾಷೆಗಳ ಸ್ಟಾರ್​ ಕಲಾವಿದರಾದ ಶಿವರಾಜ್​ಕುಮಾರ್​, ಯಶ್​, ಕಮಲ್​ ಹಾಸನ್​, ಅಲ್ಲು ಅರ್ಜುನ್​, ವಿಜಯ್​ ದೇವರಕೊಂಡ ಮುಂತಾದವರು ಇದರಲ್ಲಿ ಭಾಗಿ ಆಗಿದ್ದಾರೆ. ಬಾಲಿವುಡ್​ ನಟ ರಣವೀರ್​ ಸಿಂಗ್​, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಮುಂತಾದವರು ಆಗಮಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:31 am, Mon, 12 September 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ