‘ಬೆಸ್ಟ್​ ಕನ್ನಡ ಡೈರೆಕ್ಟರ್​ ಅನ್ನೋದು ಬೇಡ’: ಹೊಸ ಸಲಹೆ ನೀಡಿದ ‘ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ

Vivek Agnihotri | SIIMA Awards 2022: ವಿವೇಕ್​ ಅಗ್ನಿಹೋತ್ರಿ ಅವರ ಈ ಮಾತುಗಳಿಗೆ ನೆಟ್ಟಿಗರು ಸಹಮತ ಸೂಚಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಹಂಚಿಕೊಂಡ ವಿಡಿಯೋ ವೈರಲ್​ ಆಗಿದೆ.

‘ಬೆಸ್ಟ್​ ಕನ್ನಡ ಡೈರೆಕ್ಟರ್​ ಅನ್ನೋದು ಬೇಡ’: ಹೊಸ ಸಲಹೆ ನೀಡಿದ ‘ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ
ವಿವೇಕ್ ಅಗ್ನಿಹೋತ್ರಿ
Follow us
| Updated By: ಮದನ್​ ಕುಮಾರ್​

Updated on:Sep 12, 2022 | 9:31 AM

ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಚಿತ್ರರಂಗದ ಸ್ವರೂಪ ಬದಲಾಗಿದೆ. ಹಿಂದಿ ಭಾಷೆಯ ಸಿನಿಮಾಗಳೇ ರಾರಾಜಿಸುತ್ತಿದ್ದ ಒಂದು ಕಾಲ ಇತ್ತು. ಆದರೆ ಈಗ ಎಲ್ಲ ಭಾಷೆಯ ಚಿತ್ರಗಳು ಕೂಡ ಸಖತ್​ ಸೌಂಡು ಮಾಡುತ್ತಿವೆ. ಬೇರೆ ಬೇರೆ ಭಾಷೆಯ ಚಿತ್ರರಂಗಗಳ ನಡುವೆ ಅಂತರವೇ ಉಳಿದುಕೊಂಡಿಲ್ಲ. ಪ್ಯಾನ್​ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಒಂದು ಹೊಸ ಸಲಹೆ ನೀಡಿದ್ದಾರೆ. ಆಯಾ ಭಾಷೆಯ ನಿರ್ದೇಶಕ ಎಂದು ಯಾರನ್ನಾದರೂ ಗುರುತಿಸುವ ಬದಲು, ಭಾರತೀಯ ನಿರ್ದೇಶಕ ಅಂತ ಗುರುತಿಸಬೇಕು ಎಂದು ವಿವೇಕ್​ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ‘ಸೈಮಾ’ ಪ್ರಶಸ್ತಿ (SIIMA Awards 2022) ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಅವರು ಈ ವಿಚಾರ ಹಂಚಿಕೊಂಡಿದ್ದಾರೆ.

2021ರಲ್ಲಿ ತೆರೆಕಂಡ ದಕ್ಷಿಣ ಭಾರತದ ಸಿನಿಮಾಗಳಿಗೆ, ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ಪ್ರಶಸ್ತಿ ನೀಡಲಾಗಿದೆ. ‘ಅತ್ಯುತ್ತಮ ಹೊಸ ನಿರ್ದೇಶಕ’ ಪ್ರಶಸ್ತಿಯನ್ನು ‘ಬಡವ ರಾಸ್ಕಲ್​’ ಚಿತ್ರಕ್ಕಾಗಿ ಶಂಕರ್​ಗುರು ಪಡೆದುಕೊಂಡಿದ್ದಾರೆ. ವೇದಿಕೆ ಮೇಲೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದು ವಿವೇಕ್​ ಅಗ್ನಿಹೋತ್ರಿ. ಈ ವೇಳೆ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Ranveer Singh: ಸೈಮಾದಲ್ಲಿ ರಣವೀರ್​ ಸಿಂಗ್​ ಝಗಮಗ ಡ್ಯಾನ್ಸ್​; ಹೇಗಿತ್ತು ನೋಡಿ ಜೋಶ್​
Image
SIIMA Awards: ಸೈಮಾ ಸಂಭ್ರಮದಲ್ಲಿ ತಾರೆಯರ ಸಂಗಮ; ಅದ್ದೂರಿ ಸಮಾರಂಭದ ವಿಡಿಯೋ ನೋಡಿ..
Image
ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ

‘ಸೈಮಾ ಸಮಾರಂಭದಲ್ಲಿ ನಿರ್ದೇಶಕ ಶಂಕರ್​ ಗುರು ಅವರಿಗೆ ಈ ಪ್ರಶಸ್ತಿ ನೀಡಲು ಖುಷಿ ಎನಿಸಿತು. ಬೆಸ್ಟ್​ ಕನ್ನಡ ನಿರ್ದೇಶಕ ಎಂದು ಕರೆಯುವ ಬದಲು, ಕನ್ನಡದ ಬೆಸ್ಟ್​ ಭಾರತೀಯ ನಿರ್ದೇಶಕ ಎಂದು ಕರೆಯೋಣ. ಅದನ್ನೇ ನಾನು ನಂಬಿದ್ದೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಟ್ವೀಟ್​ ಮಾಡಿದ್ದಾರೆ. ಇದೇ ಮಾತನ್ನು ವೇದಿಕೆ ಮೇಲೆ ಅವರು ಹೇಳಿದ್ದು, ಅದರ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ. ವಿವೇಕ್​ ಅಗ್ನಿಹೋತ್ರಿ ಅವರ ಈ ಮಾತುಗಳಿಗೆ ನೆಟ್ಟಿಗರು ಸಹಮತ ಸೂಚಿಸಿದ್ದಾರೆ.

10ನೇ ವರ್ಷದ ಸೈಮಾ ಸಮಾರಂಭ ನಡೆದಿದೆ. ಈ ಬಾರಿ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ಜರುಗಿದ್ದು ವಿಶೇಷ. ಪುನೀತ್​ ರಾಜ್​ಕುಮಾರ್​ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ. ದಕ್ಷಿಣ ಭಾರತದ ಭಾಷೆಗಳ ಸ್ಟಾರ್​ ಕಲಾವಿದರಾದ ಶಿವರಾಜ್​ಕುಮಾರ್​, ಯಶ್​, ಕಮಲ್​ ಹಾಸನ್​, ಅಲ್ಲು ಅರ್ಜುನ್​, ವಿಜಯ್​ ದೇವರಕೊಂಡ ಮುಂತಾದವರು ಇದರಲ್ಲಿ ಭಾಗಿ ಆಗಿದ್ದಾರೆ. ಬಾಲಿವುಡ್​ ನಟ ರಣವೀರ್​ ಸಿಂಗ್​, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಮುಂತಾದವರು ಆಗಮಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:31 am, Mon, 12 September 22

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್