AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಸಮವಸ್ತ್ರದಲ್ಲಿ ವಯನಾಡಿಗೆ ಭೇಟಿ ಕೊಟ್ಟ ನಟ ಮೋಹನ್​ಲಾಲ್, 3 ಕೋಟಿ ನೆರವು

Mohanlal: ಗುಡ್ಡ ಕುಸಿತದಿಂದ 350ಕ್ಕೂ ಹೆಚ್ಚು ಜನರ ಜೀವ ಹೋಗಿರುವ ವಯನಾಡಿಗೆ ನಟ ಮೋಹನ್​ಲಾಲ್, ಸೈನ್ಯದ ಸಮವಸ್ತ್ರ ಧರಿಸಿ ಭೇಟಿ ನೀಡಿದ್ದರು. ಜನಪ್ರಿಯ ನಟರಾಗಿರುವ ಮೋಹನ್​ಲಾಲ್ ಸೈನ್ಯದಲ್ಲಿ ಲೆಫ್ಟಿನೆಂಟ್ ಕರ್ನಲ್ ಸಹ ಆಗಿದ್ದಾರೆ.

ಮಿಲಿಟರಿ ಸಮವಸ್ತ್ರದಲ್ಲಿ ವಯನಾಡಿಗೆ ಭೇಟಿ ಕೊಟ್ಟ ನಟ ಮೋಹನ್​ಲಾಲ್, 3 ಕೋಟಿ ನೆರವು
Follow us
ಮಂಜುನಾಥ ಸಿ.
|

Updated on: Aug 03, 2024 | 3:23 PM

ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತ 350ಕ್ಕೂ ಹೆಚ್ಚು ಜನರ ಜೀವ ಬಲಿ ಪಡೆದಿದೆ. ಕರ್ನಾಟಕ ಸರ್ಕಾರ ಸೇರಿದಂತೆ ಹಲವು ಸಂಘ-ಸಂಸ್ಥೆಗಳು, ಉದ್ಯಮಿಗಳು ಇನ್ನಿತರರು ನೆರವಿಗೆ ಧಾವಿಸಿದ್ದಾರೆ. ಚಿತ್ರರಂಗದ ಗಣ್ಯರು ಸಹ ಕೇರಳದ ನೆರವಿಗೆ ಧಾವಿಸಿದ್ದು, ತಮಿಳಿನ ನಟರಾದ ಚಿಯಾನ್ ವಿಕ್ರಂ, ಸೂರ್ಯ, ಜ್ಯೋತಿಕ, ಕನ್ನಡತಿ ರಶ್ಮಿಕಾ ಮಂದಣ್ಣ ಇನ್ನೂ ಹಲವರು ಹಣ ಸಹಾಯ ಮಾಡಿದ್ದಾರೆ. ಇದರ ನಡುವೆ ಇಂದು ವಯನಾಡಿಗೆ ಮಿಲಿಟರಿ ವೇಷ ಧರಿಸಿ ಭೇಟಿ ನೀಡಿರುವ ನಟ ಮೋಹನ್​ಲಾಲ್ ಸ್ಥಳದಲ್ಲೇ ಮೂರು ಕೋಟಿ ರೂಪಾಯಿ ನೆರವು ಘೋಷಣೆ ಮಾಡಿದ್ದಾರೆ.

ನಟ ಮೋಹನ್​ಲಾಲ್, ಲೆಫ್ಟನೆಂಟ್ ಕರ್ನಲ್ ವೇಷ ಧರಿಸಿ ವಯನಾಡಿಗೆ ಭೇಟಿ ನೀಡಿದ್ದರು, ಕಾರಣ, ಮೋಹನ್​ಲಾಲ್ ನಟರಾಗಿರುವ ಜೊತೆಗೆ ಭಾರತೀಯ ಟೆರಟೋರಿಯಲ್ ಸೈನ್ಯದ ಲೆಫ್ಟನೆಂಟ್ ಕರ್ನಲ್ ಸಹ ಆಗಿದ್ದಾರೆ. ಭಾರತೀಯ ಟೆರಟೋರಿಯಲ್ ಸೈನ್ಯವೇ ಕೇರಳದ ವಯನಾಡಿನಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದು, ಲೆಫ್ಟನೆಂಟ್ ಕರ್ನಲ್ ಆಗಿರುವ ಮೋಹನ್​ಲಾಲ್ ಇಂದು ವಯನಾಡಿಗೆ ಕರ್ನಲ್ ಸಮವಸ್ತ್ರ ಧರಿಸಿ ಭೇಟಿ ನೀಡಿದ್ದರು. ಜೊತೆಗೆ ರಕ್ಷಣಾ ಕಾರ್ಯಗಳ ಖರ್ಚಿಗೆ ಬರೋಬ್ಬರಿ 3 ಕೋಟಿ ರೂಪಾಯಿ ಸಹಾಯಧನವನ್ನು ಘೋಷಿಸಿದರು.

ಇದನ್ನೂ ಓದಿ:ಮೋಹನ್ ಲಾಲ್, ಮಮ್ಮುಟಿಗಳ ದಾಖಲೆಗಳ ಮುರಿದ ಹುಡುಗರು ‘ಮಂಜ್ಞುಮಲ್ ಬಾಯ್ಸ್’

ಗುಡ್ಡ ಕುಸಿತದಿಂದ ತೀವ್ರ ಹಾನಿ ಸಂಭವಿಸಿರುವ ಮಂಡಕೈ, ಚೂರಲಮಾಲ, ಪುಂಚಿರಿಮಟ್ಟನ್ ಇನ್ನೂ ಕೆಲವು ಸ್ಥಳಗಳಿಗೆ ಮೋಹನ್​ಲಾಲ್ ಭೇಟಿ ನೀಡಿದರು. ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಸೈನ್ಯಾಧಿಕಾರಿಗಳು ಮೋಹನ್​ಲಾಲ್ ಅವರಿಗೆ ಪರಿಸ್ಥಿತಿಯ ವಿವರಣೆ ನೀಡಿದರು. ಈ ವೇಳೆ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಸೈನಿಕರು, ಸ್ವಯಂ ಸೇವಕರು, ಸ್ಥಳೀಯ ರಕ್ಷಣಾ ಪಡೆಗಳೊಂದಿಗೆ ಮೋಹನ್​ನಾಲ್ ಮಾತನಾಡಿ, ಅವರ ಕಾರ್ಯಕ್ಕೆ ಮೆಚ್ಚುಗೆ ತುಂಬಿದರು. ಮಾತ್ರವಲ್ಲದೆ ಸಂತ್ರಸ್ತರ ಕುಟುಂಬವನ್ನು ಸಹ ಮೋಹನ್​ಲಾಲ್ ಈ ಕ್ಷಣ ಭೇಟಿಯಾದರು.

ಭೇಟಿಯ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಮೋಹನ್​ನಾಲ್, ‘ಭಾರತೀಯ ಸೈನ್ಯದ ವಿವಿಧ ದಳಗಳು, ಎನ್​ಡಿಆರ್​ಎಫ್, ಅಗ್ನಿ ಶಾಮಕ ದಳ, ಸ್ಥಳೀಯರು ಮತ್ತು ಸ್ವಯಂ ಸಂಘಗಳು ಎಲ್ಲವೂ ಸೇರಿ ರಕ್ಷಣಾ ಕಾರ್ಯ ಮಾಡುತ್ತಿದ್ದಾರೆ. ನಾನು ಭಾಗವಾಗಿರುವ ಇನ್​ಫ್ಯಾಂಟರಿ ಬೆಟಾಲಿಯನ್​ನ 122 ಮಂದಿ ಸುರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ದುರ್ಘಟನೆ ನಡೆದ ಬಳಿಕ ಮೊದಲು ರಕ್ಷಣೆಗೆ ಆಗಮಿಸಿದ ಬೆಟಾಲಿಯನ್ ಅದೇ ಆಗಿತ್ತು. ನಾನು ಭಾಗವಾಗಿರುವ ವಿಶ್ವಶಾಂತಿ ಫೌಂಡೇಷನ್ ವತಿಯಿಂದ ಮೂರು ಕೋಟಿ ರೂಪಾಯಿ ನೆರವು ನೀಡಲಾಗುತ್ತಿದ್ದು, ಇನ್ನೂ ದೇಣಿಗೆಯ ಅವಶ್ಯಕತೆ ಇದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್