ಪವನ್​ ಕಲ್ಯಾಣ್​ ಹತ್ಯೆಗೆ ಸ್ಕೆಚ್​: ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಸಂದೇಶ?

ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಪವನ್​ ಕಲ್ಯಾಣ್​ ಅವರಿಗೆ ಎಚ್ಚರದಿಂದ ಇರುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಯಾಕೆಂದರೆ, ಕೆಲವು ಅನುಮಾನಾಸ್ಪದ ಸಂದೇಶಗಳು ಹರಿದಾಡಿರುವುದು ಪತ್ತೆ ಆಗಿದೆ. ಪವನ್​ ಕಲ್ಯಾಣ್​ ಅವರ ಪ್ರಾಣಕ್ಕೆ ಅಪಾಯ ಇದೆ ಎಂಬುದು ತಿಳಿದುಬಂದಿದೆ. ಅವರಿಗೆ ಭದ್ರತೆ ಹೆಚ್ಚಿಸುವ ಪ್ರಯತ್ನ ನಡೆದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ..

ಪವನ್​ ಕಲ್ಯಾಣ್​ ಹತ್ಯೆಗೆ ಸ್ಕೆಚ್​: ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಸಂದೇಶ?
ಪವನ್​ ಕಲ್ಯಾಣ್
Follow us
|

Updated on: Jul 22, 2024 | 10:41 PM

ಟಾಲಿವುಡ್​ ನಟ ಪವನ್​ ಕಲ್ಯಾಣ್​​ ಈಗ ಪೂರ್ಣಾವಧಿ ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಆಗಿರುವ ಅವರು ಹತ್ತಾರು ಕಡೆಗಳಿಗೆ ಭೇಟಿ ನೀಡುತ್ತಿದ್ದಾರೆ. ಸಾರ್ವಜನಿಕವಾಗಿ ಸುತ್ತಾಡುವಾಗ ಅವರು ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಶಾಕಿಂಗ್​ ಸಂಗತಿ ಏನೆಂದರೆ, ಅವರ ಪ್ರಾಣಕ್ಕೆ ಅಪಾಯ ಇದೆ ಎಂಬ ಮಾಹಿತಿ ಹರಿದಾಡುತ್ತಿದೆ. ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪವನ್​ ಕಲ್ಯಾಣ್​ ಅವರಿಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಪವನ್ ಕಲ್ಯಾಣ್​ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ.

ಜನಸೇನಾ ಪಕ್ಷದ ಮೂಲಕ ಪವನ್​ ಕಲ್ಯಾಣ್​ ಅವರಿಗೆ ಈ ವರ್ಷ ದೊಡ್ಡ ಗೆಲುವು ಸಿಕ್ಕಿತು. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಜನಸೇನಾ ಪಕ್ಷ ಜಯಭೇರಿ ಬಾರಿಸಿತು. ಸಿನಿಮಾರಂಗದಲ್ಲೂ ಪವನ್​ ಕಲ್ಯಾಣ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇದೆಲ್ಲದರ ನಡುವೆ ಅವರ ಹತ್ಯೆಗೆ ಕೆಲವರು ಸ್ಕೆಚ್​ ಹಾಕುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಈ ಬಗ್ಗೆ ಪವನ್​ ಕಲ್ಯಾಣ್​ ಅವರು ಗಮನ ಹರಿಸುವ ಅಗತ್ಯ ಇದೆ.

ಪದವಿ ಪಡೆದ ಪವನ್ ಕಲ್ಯಾಣ್ ಪತ್ನಿ, ಎಷ್ಟು ಓದಿದ್ದಾರೆ ಗೊತ್ತೆ?

ಕಿಡಿಗೇಡಿಗಳು ಪವನ್​ ಕಲ್ಯಾಣ್​ ಅವರ ಹತ್ಯೆಗೆ ಸಂಚು ರೂಪಿಸುತ್ತಿರುವ ಕಾರಣದಿಂದ ಪೊಲೀಸರು ಭದ್ರತೆ ಹೆಚ್ಚಿಸಬೇಕು ಎಂದು ಗುಪ್ತಚರ ಇಲಾಖೆಯ ಅಧಿಕಾರಿಗಳು ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿಯನ್ನು ಜನಸೇನಾ ಪಕ್ಷದ ಮೂಲಗಳು ಖಚಿತಪಡಿಸಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಅಷ್ಟಕ್ಕೂ ಪವನ್​ ಕಲ್ಯಾಣ್​ ಅವರನ್ನು ಮುಗಿಸಲು ಯತ್ನಿಸುತ್ತಿರುವವರು ಯಾರು ಎಂಬುದು ಸದ್ಯಕ್ಕೆ ಬಹಿರಂಗ ಆಗಿಲ್ಲ.

ತಮ್ಮ ಪ್ರಾಣಕ್ಕೆ ಅಪಾಯ ಇರುವ ಬಗ್ಗೆ ಈ ಮೊದಲು ಸ್ವತಃ ಪವನ್​ ಕಲ್ಯಾಣ್​ ಅವರು ಹೇಳಿದ್ದರು. ಈಗ ಗುಪ್ತಚರ ಇಲಾಖೆಗೂ ಈ ಬಗ್ಗೆ ಮಾಹಿತಿ ಸಿಕ್ಕಿರುವುದರಿಂದ ಪವನ್​ ಕಲ್ಯಾಣ್​ ಅವರಿಗೆ ಝಡ್​ ಪ್ಲಸ್​ ಸೆಕ್ಯೂರಿಟಿ ನೀಡಬೇಕು ಎಂದು ಜನಸೇನಾ ಪಕ್ಷದವರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಪವನ್​ ಕಲ್ಯಾನ್ ಅವರ ಏಳಿಗೆಯನ್ನು ಸಹಿಸದವರು ಈ ರೀತಿ ಸಂಚು ರೂಪಿಸಿರಬಹುದು. ಈ ಎಲ್ಲ ವರದಿಗಳಿಂದಾಗಿ ಪವನ್​ ಕಲ್ಯಾಣ್ ಅವರ ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಪವನ್ ಕಲ್ಯಾಣ್​ ಅವರು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ