AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Devarakonda: ಮನೆಯಲ್ಲೇ ಕುಳಿತು ಓಟಿಟಿಗಾಗಿ ಮಾಸ್ಟರ್​ ಪ್ಲ್ಯಾನ್​ ಮಾಡಿದ್ರಾ ವಿಜಯ್​ ದೇವರಕೊಂಡ?

ವಿಜಯ್​ ದೇವರಕೊಂಡ ನಟಿಸಿದ್ದ ‘ವರ್ಲ್ಡ್​ ಫೇಮಸ್​ ಲವರ್​’ ಸಿನಿಮಾ 2020ರ ಆರಂಭದಲ್ಲಿ ರಿಲೀಸ್​ ಆಯಿತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಯಶಸ್ವಿ ಆಗಲಿಲ್ಲ. ತುರ್ತಾಗಿ ಅವರಿಗೆ ಒಂದು ಗೆಲುವು ಬೇಕಿದೆ.

Vijay Devarakonda: ಮನೆಯಲ್ಲೇ ಕುಳಿತು ಓಟಿಟಿಗಾಗಿ ಮಾಸ್ಟರ್​ ಪ್ಲ್ಯಾನ್​ ಮಾಡಿದ್ರಾ ವಿಜಯ್​ ದೇವರಕೊಂಡ?
ವಿಜಯ್​ ದೇವರಕೊಂಡ
ಮದನ್​ ಕುಮಾರ್​
|

Updated on: Jun 13, 2021 | 1:18 PM

Share

ಸಿನಿಮಾಗಳಿಗಿಂತಲೂ ಈಗ ವೆಬ್​ ಸಿರೀಸ್​ಗಳೇ ಹೆಚ್ಚು ಸೌಂಡು ಮಾಡುತ್ತಿವೆ. ಅದರಲ್ಲೂ ಈ ಲಾಕ್​ಡೌನ್​ ಕಾಲದಲ್ಲಿ ಚಿತ್ರಮಂದಿರಗಳು ಮುಚ್ಚಿರುವುದರಿಂದ ಅನೇಕರು ಓಟಿಟಿ ಪ್ಲಾಟ್​ಫಾರ್ಮ್​ ಕಡೆಗೆ ಆಸಕ್ತಿ ತೋರಿಸುತ್ತಿದ್ದಾರೆ. ಮೊದಲೆಲ್ಲ ಚಿಕ್ಕ ಬಜೆಟ್​ನ ಸಿನಿಮಾಗಳಿಗೆ ಓಟಿಟಿ ಸೂಕ್ತ ಎಂದು ಹೇಳುವ ಕಾಲವಿತ್ತು. ಆದರೆ ಈಗ ಸಲ್ಮಾನ್​ ಖಾನ್​ ರೀತಿಯ ಸ್ಟಾರ್​ ನಟರೇ ತಮ್ಮ ಸಿನಿಮಾವನ್ನು ನೇರವಾಗಿ ಆನ್​ಲೈನ್​ ಮೂಲಕ ಬಿಡುಗಡೆ ಮಾಡುವ ಮೂಲಕ ಹೊಸ ದಾರಿ ತುಳಿದಿದ್ದಾರೆ. ಟಾಲಿವುಡ್​ ನಟ ವಿಜಯ್​ ದೇವರಕೊಂಡ ಕೂಡ ಓಟಿಟಿಗಾಗಿ ಒಂದು ಪ್ಲ್ಯಾನ್​ ಮಾಡುತ್ತಿದ್ದಾರೆ ಎಂಬ ಮಾತು ಹೇಳಿಬಂದಿದೆ.

‘ಅರ್ಜುನ್​ ರೆಡ್ಡಿ’ ಸಿನಿಮಾ ನಂತರ ವಿಜಯ್​ ದೇವರಕೊಂಡ ಅವರಿಗೆ ದೊಡ್ಡ ಮಟ್ಟದ ಫ್ಯಾನ್​ ಫಾಲೋಯಿಂಗ್​ ಶುರು ಆಯಿತು. ‘ಗೀತಾ ಗೋವಿಂದಂ’ ಹಾಗೂ ‘ಡಿಯರ್​ ಕಾಮ್ರೇಡ್’​ ಸಿನಿಮಾಗಳಲ್ಲಿ ಅವರು ರಶ್ಮಿಕಾ ಮಂದಣ್ಣ ಜೊತೆ ತೆರೆ ಹಂಚಿಕೊಂಡರು. ಈಗ ‘ಲೈಗರ್​’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಆ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ನಡುವೆ ಓಟಿಟಿ ಸಲುವಾಗಿಯೂ ವಿಜಯ್​ ದೇವರಕೊಂಡ ಅನೇಕ ಕಥೆಗಳನ್ನು ಕೇಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಓಟಿಟಿಯಲ್ಲಿ ಸಿನಿಮಾಗಳಿಗಿಂತಲೂ ವೆಬ್​ ಸಿರೀಸ್​ಗಳು ಹೆಚ್ಚು ಮಿಂಚುತ್ತಿವೆ. ಅದನ್ನೇ ಗಮನದಲ್ಲಿ ಇಟ್ಟುಕೊಂಡು ತಾವು ಕೂಡ ಓಟಿಟಿಗೆ ಎಂಟ್ರಿ ನೀಡಬೇಕು ಎಂದು ವಿಜಯ್​ ದೇವರಕೊಂಡ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸದ್ಯ ಲಾಕ್​ಡೌನ್​ನಿಂದಾಗಿ ಯಾವುದೇ ಶೂಟಿಂಗ್​ ಇಲ್ಲದೇ ಮನೆಯಲ್ಲೇ ಕಾಲಕಳೆಯುತ್ತಿರುವ ಅವರು ಹಲವು ಕಥೆಗಳನ್ನು ಕೇಳಿದ್ದು, ಆ ಪೈಕಿ ಒಂದನ್ನು ಫೈನಲ್​ ಮಾಡಿದ್ದಾರೆ. ಅದರಲ್ಲಿ ಅವರೇ ನಟಿಸುತ್ತಾರೋ ಅಥವಾ ಬರೀ ನಿರ್ಮಾಣ ಮಾಡುತ್ತಾರೋ ಎಂಬುದು ಇನ್ನೂ ತಿಳಿದುಬಂದಿಲ್ಲ.

ವಿಜಯ್​ ದೇವರಕೊಂಡ ನಟಿಸಿದ್ದ ‘ವರ್ಲ್ಡ್​ ಫೇಮಸ್​ ಲವರ್​’ ಸಿನಿಮಾ 2020ರ ಆರಂಭದಲ್ಲಿ ರಿಲೀಸ್​ ಆಯಿತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಚಿತ್ರ ಯಶಸ್ವಿ ಆಗಲಿಲ್ಲ. ಆ ಬಳಿಕ ಅವರ ಯಾವುದೇ ಸಿನಿಮಾ ತೆರೆಕಂಡಿಲ್ಲ. ತುರ್ತಾಗಿ ಅವರಿಗೆ ಒಂದು ಗೆಲುವು ಬೇಕಿದೆ. ಲೈಗರ್​ ಮೂಲಕ ಅವರು ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ ಎಂಬುದು ನಿಜವಾದರೂ ಆ ಚಿತ್ರ ಸಿದ್ಧವಾಗಿ ಬಿಡುಗಡೆ ಆಗಲು ಸಾಕಷ್ಟು ಸಮಯ ಹಿಡಿಯಲಿದೆ. ಅಷ್ಟರೊಳಗೆ ಓಟಿಟಿಯಲ್ಲಿ ಏನಾದರೂ ಮಾಡಬೇಕು ಎಂದು ವಿಜಯ್​ ದೇವರಕೊಂಡ ತಲೆ ಕೆಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರು ಅಧಿಕೃತವಾಗಿ ಏನನ್ನೂ ಹೇಳಿಕೊಂಡಿಲ್ಲ.

ಇದನ್ನೂ ಓದಿ:

Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Rashmika Mandanna: ವಿಜಯ್​ ದೇವರಕೊಂಡ ಅಲ್ಲ; ಉಂಗುರ ತೋರಿಸಿ ಬಾಯ್​ಫ್ರೆಂಡ್​ ಯಾರು ಅಂತ ಹೇಳಿದ ರಶ್ಮಿಕಾ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!