AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ

ಮಲಯಾಳಂ ಚಿತ್ರರಂಗದ ಸ್ಟಾರ್ ಕಿಡ್‌ಗಳಾದ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ ಜೋಡಿ ಸೂಪರ್. ಅವರ ಬಗ್ಗೆ ಅಭಿಮಾನಿಗಳು ಏನೇನೋ ಊಹಿಸಿಕೊಂಡಿದ್ದಾರೆ. ಅವರಿಬ್ಬರು ಮದುವೆ ಆಗುತ್ತಾರೆ ಎಂಬ ಗಾಸಿಪ್ ಕೂಡ ಹಬ್ಬಿದೆ. ಅದಕ್ಕೆ ಕಲ್ಯಾಣಿ ಅವರ ತಾಯಿ ಲಿಸ್ಸಿ ಸ್ಪಷ್ಟನೆ ನೀಡಿದ್ದಾರೆ.

ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ
Kalyani Priyadarshan, Pranav Mohanlal
ಮದನ್​ ಕುಮಾರ್​
|

Updated on: Apr 17, 2026 | 8:49 PM

Share

ಸೂಪರ್ ಹಿಟ್ ‘ಹೃದಯಂ’ ಸಿನಿಮಾದಲ್ಲಿ ನಟಿಸಿದ ಬಳಿಕ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ (Kalyani Priyadarshan) ಬಗ್ಗೆ ವದಂತಿಗಳು ಜಾಸ್ತಿ ಆದವು. ನಿಜಜೀವನದಲ್ಲೂ ಅವರಿಬ್ಬರು ಜೋಡಿಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಕಲ್ಯಾಣಿ ಮತ್ತು ಪ್ರಣವ್ (Pranav Mohanlal) ನಡುವಿನ ಸಂಬಂಧ ಯಾವ ರೀತಿ ಇದೆ ಎಂಬ ಬಗ್ಗೆ ಗಾಸಿಪ್ ಮಂದಿ ಹಲವು ರೀತಿಯ ಕಥೆ ಕಟ್ಟಿದ್ದಾರೆ. ಆದರೆ ಆ ಎಲ್ಲ ಅಂತೆ-ಕಂತೆಗಳಿಗೆ ಕಲ್ಯಾಣಿ ತಾಯಿ ಲಿಸ್ಸಿ ಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ.

ಇತ್ತೀಚೆಗೆ ಮಲಯಾಳಂ ಹೊಸ ವರ್ಷವಾದ ವಿಷು ಹಬ್ಬದ ಪ್ರಯುಕ್ತ ಲಿಸ್ಸಿ ಲಕ್ಷ್ಮಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಶುಭಾಶಯ ಕೋರಿ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಪೋಸ್ಟ್‌ಗೆ ಅಭಿಮಾನಿಯೊಬ್ಬರು, ‘ಕಲ್ಯಾಣಿ ಮತ್ತು ಪ್ರಣವ್ ಮದುವೆಯ ನಿರೀಕ್ಷೆಯಲ್ಲಿ..’ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಲಿಸ್ಸಿ, ‘ಇದು ಸುಳ್ಳು ಸುದ್ದಿ’ ಕಮೆಂಟ್ ಮಾಡುವ ಮೂಲಕ ಎಲ್ಲ ವದಂತಿಗಳಿಗೆ ಅಂತ್ಯ ಹಾಡಿದ್ದಾರೆ.

ಕಲ್ಯಾಣಿ ಮತ್ತು ಪ್ರಣವ್ ಬಾಲ್ಯದ ಸ್ನೇಹಿತರು. ಚಿತ್ರರಂಗಕ್ಕೆ ಬರುವ ಮೊದಲಿನಿಂದಲೂ ಇಬ್ಬರ ಕುಟುಂಬಗಳ ನಡುವೆ ಉತ್ತಮ ಸಂಬಂಧವಿದೆ. ಕಲ್ಯಾಣಿ ಅವರು ಪ್ರಣವ್ ಅವರನ್ನು ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಾರೆ. ಅವರಿಬ್ಬರ ನಡುವೆ ಒಡಹುಟ್ಟಿದವರ ರೀತಿ ಬಾಂಧವ್ಯ ಇದೆ. ಆ ಬಗ್ಗೆ ಕಲ್ಯಾಣಿ ಪ್ರಿಯದರ್ಶನ್ ಅವರು ಈ ಮೊದಲು ಕೂಡ ಹೇಳಿದ್ದರು.

ತಮ್ಮ ಸಂಬಂಧದ ಬಗ್ಗೆ ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಲ್ಯಾಣಿ, ‘ನನ್ನ ಸ್ವಂತ ಸಹೋದರನಿಗಿಂತ ಅಪ್ಪು ಜೊತೆಗೇ ನನ್ನ ಫೋಟೋಗಳು ಹೆಚ್ಚಿವೆ. ನಮ್ಮದು ಒಡಹುಟ್ಟಿದವರ ರೀತಿಯ ಬಾಂಧವ್ಯ. ಚೆನ್ನೈನಲ್ಲಿ ನನ್ನ ಸ್ನೇಹಿತರಿಗೆ ನಾನು ಆತನನ್ನು ಕಸಿನ್ ಎಂದೇ ಪರಿಚಯಿಸುತ್ತಿದ್ದೆ’ ಎಂದು ಹೇಳಿದ್ದರು. ಆದರೂ ಜನರು ಗಾಸಿಪ್ ಮಾಡೋದು ನಿಲ್ಲಿಸಿಲ್ಲ.

ಇದನ್ನೂ ಓದಿ: ಮೋಹನ್​ಲಾಲ್ ಪುತ್ರ ಪ್ರಣವ್ ಜೀವನಕ್ಕೆ ವಿದೇಶಿ ಮಹಿಳೆ ಎಂಟ್ರಿ

‘ಹೃದಯಂ’ ಸಿನಿಮಾದಲ್ಲಿ ಕಲ್ಯಾಣಿ ಮತ್ತು ಪ್ರಣವ್ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿ ನೋಡಿ ಫಿದಾ ಆಗಿದ್ದ ಅಭಿಮಾನಿಗಳು, ಇವರು ನಿಜ ಜೀವನದಲ್ಲೂ ಒಂದಾಗಲಿ ಎಂದು ಹಾರೈಸುತ್ತಿದ್ದರು. ಆದರೆ ಲಿಸ್ಸಿ ಅವರ ಈ ಸ್ಪಷ್ಟನೆಯಿಂದ ಪ್ರಣವ್ ಮತ್ತು ಕಲ್ಯಾಣಿ ಕೇವಲ ಆತ್ಮೀಯ ಸ್ನೇಹಿತರು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ