AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ

ಮಲಯಾಳಂ ಚಿತ್ರರಂಗದ ಸ್ಟಾರ್ ಕಿಡ್‌ಗಳಾದ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ ಜೋಡಿ ಸೂಪರ್. ಅವರ ಬಗ್ಗೆ ಅಭಿಮಾನಿಗಳು ಏನೇನೋ ಊಹಿಸಿಕೊಂಡಿದ್ದಾರೆ. ಅವರಿಬ್ಬರು ಮದುವೆ ಆಗುತ್ತಾರೆ ಎಂಬ ಗಾಸಿಪ್ ಕೂಡ ಹಬ್ಬಿದೆ. ಅದಕ್ಕೆ ಕಲ್ಯಾಣಿ ಅವರ ತಾಯಿ ಲಿಸ್ಸಿ ಸ್ಪಷ್ಟನೆ ನೀಡಿದ್ದಾರೆ.

ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ
Kalyani Priyadarshan, Pranav Mohanlal
ಮದನ್​ ಕುಮಾರ್​
|

Updated on: Apr 17, 2026 | 8:49 PM

Share

ಸೂಪರ್ ಹಿಟ್ ‘ಹೃದಯಂ’ ಸಿನಿಮಾದಲ್ಲಿ ನಟಿಸಿದ ಬಳಿಕ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ (Kalyani Priyadarshan) ಬಗ್ಗೆ ವದಂತಿಗಳು ಜಾಸ್ತಿ ಆದವು. ನಿಜಜೀವನದಲ್ಲೂ ಅವರಿಬ್ಬರು ಜೋಡಿಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಕಲ್ಯಾಣಿ ಮತ್ತು ಪ್ರಣವ್ (Pranav Mohanlal) ನಡುವಿನ ಸಂಬಂಧ ಯಾವ ರೀತಿ ಇದೆ ಎಂಬ ಬಗ್ಗೆ ಗಾಸಿಪ್ ಮಂದಿ ಹಲವು ರೀತಿಯ ಕಥೆ ಕಟ್ಟಿದ್ದಾರೆ. ಆದರೆ ಆ ಎಲ್ಲ ಅಂತೆ-ಕಂತೆಗಳಿಗೆ ಕಲ್ಯಾಣಿ ತಾಯಿ ಲಿಸ್ಸಿ ಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ.

ಇತ್ತೀಚೆಗೆ ಮಲಯಾಳಂ ಹೊಸ ವರ್ಷವಾದ ವಿಷು ಹಬ್ಬದ ಪ್ರಯುಕ್ತ ಲಿಸ್ಸಿ ಲಕ್ಷ್ಮಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಶುಭಾಶಯ ಕೋರಿ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಪೋಸ್ಟ್‌ಗೆ ಅಭಿಮಾನಿಯೊಬ್ಬರು, ‘ಕಲ್ಯಾಣಿ ಮತ್ತು ಪ್ರಣವ್ ಮದುವೆಯ ನಿರೀಕ್ಷೆಯಲ್ಲಿ..’ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಲಿಸ್ಸಿ, ‘ಇದು ಸುಳ್ಳು ಸುದ್ದಿ’ ಕಮೆಂಟ್ ಮಾಡುವ ಮೂಲಕ ಎಲ್ಲ ವದಂತಿಗಳಿಗೆ ಅಂತ್ಯ ಹಾಡಿದ್ದಾರೆ.

ಕಲ್ಯಾಣಿ ಮತ್ತು ಪ್ರಣವ್ ಬಾಲ್ಯದ ಸ್ನೇಹಿತರು. ಚಿತ್ರರಂಗಕ್ಕೆ ಬರುವ ಮೊದಲಿನಿಂದಲೂ ಇಬ್ಬರ ಕುಟುಂಬಗಳ ನಡುವೆ ಉತ್ತಮ ಸಂಬಂಧವಿದೆ. ಕಲ್ಯಾಣಿ ಅವರು ಪ್ರಣವ್ ಅವರನ್ನು ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಾರೆ. ಅವರಿಬ್ಬರ ನಡುವೆ ಒಡಹುಟ್ಟಿದವರ ರೀತಿ ಬಾಂಧವ್ಯ ಇದೆ. ಆ ಬಗ್ಗೆ ಕಲ್ಯಾಣಿ ಪ್ರಿಯದರ್ಶನ್ ಅವರು ಈ ಮೊದಲು ಕೂಡ ಹೇಳಿದ್ದರು.

ತಮ್ಮ ಸಂಬಂಧದ ಬಗ್ಗೆ ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಲ್ಯಾಣಿ, ‘ನನ್ನ ಸ್ವಂತ ಸಹೋದರನಿಗಿಂತ ಅಪ್ಪು ಜೊತೆಗೇ ನನ್ನ ಫೋಟೋಗಳು ಹೆಚ್ಚಿವೆ. ನಮ್ಮದು ಒಡಹುಟ್ಟಿದವರ ರೀತಿಯ ಬಾಂಧವ್ಯ. ಚೆನ್ನೈನಲ್ಲಿ ನನ್ನ ಸ್ನೇಹಿತರಿಗೆ ನಾನು ಆತನನ್ನು ಕಸಿನ್ ಎಂದೇ ಪರಿಚಯಿಸುತ್ತಿದ್ದೆ’ ಎಂದು ಹೇಳಿದ್ದರು. ಆದರೂ ಜನರು ಗಾಸಿಪ್ ಮಾಡೋದು ನಿಲ್ಲಿಸಿಲ್ಲ.

ಇದನ್ನೂ ಓದಿ: ಮೋಹನ್​ಲಾಲ್ ಪುತ್ರ ಪ್ರಣವ್ ಜೀವನಕ್ಕೆ ವಿದೇಶಿ ಮಹಿಳೆ ಎಂಟ್ರಿ

‘ಹೃದಯಂ’ ಸಿನಿಮಾದಲ್ಲಿ ಕಲ್ಯಾಣಿ ಮತ್ತು ಪ್ರಣವ್ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿ ನೋಡಿ ಫಿದಾ ಆಗಿದ್ದ ಅಭಿಮಾನಿಗಳು, ಇವರು ನಿಜ ಜೀವನದಲ್ಲೂ ಒಂದಾಗಲಿ ಎಂದು ಹಾರೈಸುತ್ತಿದ್ದರು. ಆದರೆ ಲಿಸ್ಸಿ ಅವರ ಈ ಸ್ಪಷ್ಟನೆಯಿಂದ ಪ್ರಣವ್ ಮತ್ತು ಕಲ್ಯಾಣಿ ಕೇವಲ ಆತ್ಮೀಯ ಸ್ನೇಹಿತರು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ