AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಬಿ. ಶೆಟ್ಟಿ ಮುಟ್ಟಿದ್ದೆಲ್ಲ ಚಿನ್ನ; ಅವರು ಕರ್ನಾಟಕದಲ್ಲಿ ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಇಷ್ಟೊಂದಾ?

ರಾಜ್ ಬಿ ಶೆಟ್ಟಿ ಅವರು ದುಲ್ಖರ್ ಸಲ್ಮಾನ್ ನಿರ್ಮಾಣದ ‘ಲೋಕಃ’ ಚಿತ್ರವನ್ನು ಕರ್ನಾಟಕದಲ್ಲಿ ವಿತರಿಸಿ ದೊಡ್ಡ ಯಶಸ್ಸು ಕಂಡಿದ್ದಾರೆ. ಚಿತ್ರವು ಆರು ದಿನಗಳಲ್ಲಿ ಬಜೆಟ್ಗಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ಬೆಂಗಳೂರಿನಲ್ಲೂ ಚಿತ್ರ ಜನಪ್ರಿಯವಾಗಿದೆ. ಕಲ್ಯಾಣಿ ಪ್ರಿಯದರ್ಶನ್ ಅವರ ಸೂಪರ್ ಹೀರೋ ಪಾತ್ರವೂ ಪ್ರೇಕ್ಷಕರನ್ನು ಸೆಳೆದಿದೆ.

ರಾಜ್ ಬಿ. ಶೆಟ್ಟಿ ಮುಟ್ಟಿದ್ದೆಲ್ಲ ಚಿನ್ನ; ಅವರು ಕರ್ನಾಟಕದಲ್ಲಿ ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಇಷ್ಟೊಂದಾ?
ಲೋಕ
ರಾಜೇಶ್ ದುಗ್ಗುಮನೆ
| Edited By: |

Updated on:Sep 05, 2025 | 3:27 PM

Share

ರಾಜ್ ಬಿ. ಶೆಟ್ಟಿ ಅವರು ‘ಸು ಫ್ರಮ್ ಸೋ’ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರವನ್ನು ಮಲಯಾಳಂನಲ್ಲಿ ರಿಲೀಸ್ ಮಾಡಲು ದುಲ್ಖರ್ ಸಲ್ಮಾನ್ ಸಹಾಯ ಮಾಡಿದ್ದರು. ಈಗ ದುಲ್ಖರ್ ನಿರ್ಮಾಣದ ‘ಲೋಕಃ’ ಸಿನಿಮಾನ (Lokah) ಕರ್ನಾಟಕದಲ್ಲಿ ರಾಜ್ ಅವರು ಹಂಚಿಕೆ ಮಾಡುತ್ತಿದ್ದಾರೆ. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಆರೇ ದಿನಕ್ಕೆ ಚಿತ್ರವು ಬಜೆಟ್​​ಗಿಂತ ಹೆಚ್ಚಿನ ಕಲೆಕ್ಷನ್ ಮಾಡಿದೆ.

‘ಲೋಕಃ’ ಸಿನಿಮಾ ಕೊಚ್ಚಿಯಲ್ಲಿ ಮಾತ್ರವಲ್ಲದೆ ಬೆಂಗಳೂರಿನಲ್ಲೂ ಸಾಕಷ್ಟು ದೊಡ್ಡ ಯಶಸ್ಸು ಕಂಡಿದೆ. ಮಲಯಾಳಂ ಭಾಷೆಯಲ್ಲಿ ಸಿನಿಮಾನ ನೋಡುವ ಕೆಲಸ ಆಗುತ್ತಿದೆ. ಹೀಗಾಗಿ, ಸಿನಿಮಾಗೆ ಕರ್ನಾಟಕದಿಂದಲೂ ದೊಡ್ಡ ಮಟ್ಟದಲ್ಲಿ ಹಣ ಹರಿದು ಹೋಗುತ್ತಿದೆ. ರಾಜ್ ಅವರು ಈ ಚಿತ್ರದ ಮೂಲಕ ಹಂಚಿಕೆಯಲ್ಲೂ ಗೆಲುವು ಕಂಡಿದ್ದಾರೆ.

‘ಲೋಕಃ’ ಸಿನಿಮಾದಲ್ಲಿ ಕಲ್ಯಾಣಿ ಪ್ರಿಯದರ್ಶನ್, ನಸ್ಲೆನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದ ಬಜೆಟ್ 30 ಕೋಟಿ ರೂಪಾಯಿ ಎನ್ನಲಾಗಿದೆ. ಆದರೆ, ಸಿನಿಮಾದ ಕಲೆಕ್ಷನ್ ಆರು ದಿನಕ್ಕೆ 38.95 ಕೋಟಿ ರೂಪಾಯಿ ಆಗಿದೆ. ವಾರದ ದಿನಗಳಲ್ಲೂ ಸಿನಿಮಾನ ಜನರು ಮುಗಿ ಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
ಸಕ್ಸಸ್ ಅನ್ನೋದು ಇಂದಿಗೂ ನಂಗೆ ದೊಡ್ಡ ಯಕ್ಷ ಪ್ರಶ್ನೆ; ಸೃಜನ್ ಲೋಕೇಶ್
Image
ಸಿಟಿ ಹುಡುಗಿಯರ ಮೇಲೆ ಸಿಟ್ಟು; ಬಕೆಟ್ ಎಸೆದು ಬಾಯಿಗೆ ಬಂದಂತೆ ಬೈದ ಅಕುಲ್
Image
ಹಾಲು ಕರೆಯೋ ಟಾಸ್ಕ್​ನಲ್ಲಿ ಸೋತವರಿಗೆ ಸಗಣಿ ನೀರ ಸ್ನಾನ; ಬಂತು ವಾಕರಿಕೆ
Image
‘ಕಿತ್ತೋಗಿರೋ ನನ್ಮಕ್ಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ’; ಸುದೀಪ್ ಕಿವಿಮಾತು

ಇಷ್ಟು ವರ್ಷಗಳಲ್ಲಿ ಸೂಪರ್ ಹೀರೋ ಪಾತ್ರಗಳು ಎಂದಾಗ ಕೇವಲ ನಟರು ಮಾತ್ರ ಇರುತ್ತಿದ್ದರು. ಆದರೆ, ಇದೇ ಮೊದಲ ಭಾರಿಗೆ ನಟಿಯೊಬ್ಬರು ಸೂಪರ್ ಹೀರೋ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಕಲ್ಯಾಣಿ ಅವರ ಚಂದ್ರ ಪಾತ್ರ ಅನೇಕರಿಗೆ ಇಷ್ಟ ಆಗಿದೆ. ಈ ಸಿನಿಮಾ ಇನ್ನೂ ಕೆಲವು ವಾರ ಯಶಸ್ವಿ ಪ್ರದರ್ಶನ ಕಾಣುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಲೋಕಃ’ ಸಿನಿಮಾ ವಿಮರ್ಶೆ; ಮಲಯಾಳಂನಲ್ಲಿ ಉದಯಿಸಿದ ಮಹಿಳಾ ಸೂಪರ್ ಹೀರೋ  

‘ಲೋಕಃ’ ಸಿನಿಮಾದಲ್ಲಿ ಬೆಂಗಳೂರಿಗರಿಗೆ ಅಶ್ಲೀಲ ಪದ ಬಳಕೆ ಮಾಡಲಾಗಿತ್ತು. ಈ ಬಗ್ಗೆ ಟಿವಿ9 ಕನ್ನಡ ಡಿಜಿಟಲ್ ವರದಿ ಬಿತ್ತರ ಮಾಡಿತ್ತು. (ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ) ಈ ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡು ದುಲ್ಖರ್ ಸಲ್ಮಾನ್ ನಿರ್ಮಾಣ ಸಂಸ್ಥೆ ಕ್ಷಮೆ ಕೇಳಿದೆ. ಅಲ್ಲದೆ, ತಪ್ಪನ್ನು ತಿದ್ದುಕೊಳ್ಳೋದಾಗಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:41 am, Wed, 3 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ