AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕೇಶ್ ಸಿನಿಮಾ ಯೂನಿವರ್ಸ್ ಮುಗಿದಿಲ್ಲ; ಭರ್ಜರಿ ಅಪ್ಡೇಟ್ ಕೊಟ್ಟ ಕನಗರಾಜ್

ಲೋಕೇಶ್ ಕನಗರಾಜ್ ಅವರ ಜನಪ್ರಿಯ ಎಲ್‌ಸಿಯು ಮುಂದುವರಿಯಲಿದೆ. ಇದು ಮುಗಿಯಿತು ಎಂಬ ವದಂತಿಗಳನ್ನು ಅವರು ತಳ್ಳಿಹಾಕಿದ್ದಾರೆ. ಸದ್ಯ ನಟನೆಯಲ್ಲಿ ತೊಡಗಿಸಿಕೊಂಡಿದ್ದರೂ, ಅಲ್ಲು ಅರ್ಜುನ್ ಜೊತೆಗಿನ ಸಿನಿಮಾ ಬಳಿಕ ‘ಕೈದಿ 2’, ‘ವಿಕ್ರಮ್ 2’ ಸೇರಿ ಹಲವು ಎಲ್‌ಸಿಯು ಚಿತ್ರಗಳನ್ನು ನಿರ್ದೇಶಿಸುವುದಾಗಿ ಲೋಕೇಶ್ ಖಚಿತಪಡಿಸಿದ್ದಾರೆ. ಅಭಿಮಾನಿಗಳಲ್ಲಿ ಈಗ ಭಾರಿ ಸಂತಸ ಮನೆ ಮಾಡಿದೆ.

ಲೋಕೇಶ್ ಸಿನಿಮಾ ಯೂನಿವರ್ಸ್ ಮುಗಿದಿಲ್ಲ; ಭರ್ಜರಿ ಅಪ್ಡೇಟ್ ಕೊಟ್ಟ ಕನಗರಾಜ್
ಲೋಕೇಶ್
ರಾಜೇಶ್ ದುಗ್ಗುಮನೆ
|

Updated on:Jul 07, 2026 | 7:07 AM

Share

ಮುಖ್ಯಾಂಶಗಳು

  • ಸಿನೆಮ್ಯಾಟಿಕ್ ಯೂನಿವರ್ಸ್ ವದಂತಿಗಳಿಗೆ ಲೋಕೇಶ್ ಕನಗರಾಜ್ ಸ್ಪಷ್ಟನೆ
  • ಲೋಕೇಶ್ ಭರ್ಜರಿ ಎಲ್‌ಸಿಯು ಚಿತ್ರಗಳ ಬಗ್ಗೆ ಮಾಹಿತಿ
  • ಅಲ್ಲು ಅರ್ಜುನ್ ಸಿನಿಮಾ ಮುಗಿದ ಬಳಿಕ ಎಲ್‌ಸಿಯು

ಖ್ಯಾತ ತಮಿಳು ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಈಗ ನಟನಾಗಿ ಬದಲಾಗಿದ್ದಾರೆ. ಅವರು ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಡಿಸಿ’ ಸಿನಿಮಾ ಜುಲೈ 31ರಂದು ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ. ಈ ಸಿನಿಮಾದ ಪ್ರಚಾರದ ವೇಳೆ ಲೋಕೇಶ್ ತಮ್ಮ ‘ಲೋಕೇಶ್ ಸಿನಿಮಾ ಯೂನಿವರ್ಸ್’ ಬಗ್ಗೆ ದೊಡ್ಡ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ನಟನೆಯಲ್ಲಿ ಬ್ಯುಸಿ ಇರುವುದರಿಂದ ಎಲ್ಲರೂ ಇದು ಕ್ಲೋಸ್ ಆಯಿತು ಎಂದೇ ಭಾವಿಸಿದ್ದರು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಂತೆ ಆಗಿದೆ.

ಎಲ್‌ಸಿಯು ಮುಗಿದಿಲ್ಲ

ಲೋಕೇಶ್ ಕನಗರಾಜ್ ಅವರ ಸಿನಿಮಾಗಳ ಸರಣಿಯನ್ನು ‘ಲೋಕೇಶ್ ಸಿನೆಮ್ಯಾಟಿಕ್ ಯೂನಿವರ್ಸ್’ ಎಂದು ಕರೆಯಲಾಗುತ್ತದೆ. ಇತ್ತೀಚೆಗೆ ಈ ಸರಣಿ ಬಂದ್ ಆಗಲಿದೆ ಎಂದು ವದಂತಿ ಹಬ್ಬಿತ್ತು. ಆದರೆ ಲೋಕೇಶ್ ಇದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ತಾವು ಎಲ್‌ಸಿಯು ಅನ್ನು ಎಂದಿಗೂ ಮುಚ್ಚುವುದಿಲ್ಲ ಎಂದು ಅವರು ಹೇಳಿದ್ದಾರೆ.

‘ಎಲ್‌ಸಿಯು ಎಂಬ ಹೆಸರನ್ನು ಅಭಿಮಾನಿಗಳೇ ಇಟ್ಟಿದ್ದಾರೆ. ನಾನು ಅದನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇನೆ. ನನ್ನ ಸ್ವಂತ ಪ್ರೊಡಕ್ಷನ್ ಹೌಸ್ ಮುಚ್ಚಿದರೂ ಎಲ್‌ಸಿಯು ಮುಚ್ಚಲ್ಲ’ ಎಂದು ಲೋಕೇಶ್ ಕನಗರಾಜ್ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಮುಂದಿನ ಸಾಲು ಸಾಲು ಚಿತ್ರಗಳು

ಲೋಕೇಶ್ ಕನಗರಾಜ್ ಅವರು ಎಲ್‌ಸಿಯು ಸರಣಿಯಲ್ಲಿ ಹಲವು ಸಿನಿಮಾಗಳನ್ನು ಮಾಡಲು ಒಪ್ಪಿಕೊಂಡಿದ್ದಾರೆ. ಈ ಸರಣಿಯಲ್ಲಿ ಕಾರ್ತಿ ನಟನೆಯ ‘ಕೈದಿ 2’, ಕಮಲ್ ಹಾಸನ್ ನಟನೆಯ ‘ವಿಕ್ರಮ್ 2’, ಸೂರ್ಯ ಅವರ ‘ರೋಲೆಕ್ಸ್’, ಇದೇ ಯೂನಿವರ್ಸ್ ಅಡಿಯಲ್ಲಿ ಬರಲಿದೆ. ಲೋಕೇಶ್ ನಿರ್ಮಾಣದ ‘ಬೆಂಜ್’ ಸಿನಿಮಾ ಕೂಡ ರೆಡಿ ಆಗುತ್ತಿದೆ. ಈ ಬ್ಗಗೆ ಅವರೇ ಮಾಹಿತಿ ನೀಡಿದ್ದಾರೆ.

ಅಲ್ಲು ಅರ್ಜುನ್ ಸಿನಿಮಾ ಬಳಿಕ ಎಲ್‌ಸಿಯು

ಲೋಕೇಶ್ ಕನಕರಾಜ್ ಸದ್ಯದಲ್ಲೇ ತೆಲುಗು ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ಸಿನಿಮಾ ನಿರ್ದೇಶಿಸಲಿದ್ದಾರೆ. ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ ನೀಡಲಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾ ಮುಗಿದ ತಕ್ಷಣ ಲೋಕೇಶ್ ಮತ್ತೆ ಎಲ್‌ಸಿಯು ಚಿತ್ರಗಳ ಕೆಲಸಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ.

ಇದನ್ನೂ ಓದಿ:  ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ರಚಿತಾ ರಾಮ್?

‘ಕೈದಿ’, ‘ವಿಕ್ರಮ್’ ಮತ್ತು ‘ಲಿಯೋ’ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಧೂಳೆಬ್ಬಿಸಿದ್ದ ಎಲ್‌ಸಿಯು ಸರಣಿ ಮುಂದೆಯೂ ಮುಂದುವರಿಯಲಿದೆ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:06 am, Tue, 7 July 26

Follow Us
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್